AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ; ತಂಡದಲ್ಲಿ 2 ಬದಲಾವಣೆ

India vs New Zealand T20: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದ್ದು, ಗುವಾಹಟಿಯಲ್ಲಿ 3ನೇ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಜಸ್ಪ್ರೀತ್ ಬುಮ್ರಾ, ರವಿ ಬಿಷ್ಣೋಯಿ ಸೇರಿರುವ ಭಾರತ ಸರಣಿ ಗೆಲ್ಲುವ ತವಕದಲ್ಲಿದೆ. ಆದರೆ, ಗುವಾಹಟಿಯಲ್ಲಿ ಭಾರತದ ಟಿ20 ದಾಖಲೆ ಉತ್ತಮವಾಗಿಲ್ಲ. ಸರಣಿಯಲ್ಲಿ ಉಳಿಯಲು ನ್ಯೂಜಿಲೆಂಡ್‌ಗೆ ಈ ಪಂದ್ಯ ಅತ್ಯಗತ್ಯ.

IND vs NZ: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ; ತಂಡದಲ್ಲಿ 2 ಬದಲಾವಣೆ
Ind Vs Nz
ಪೃಥ್ವಿಶಂಕರ
|

Updated on:Jan 25, 2026 | 6:50 PM

Share

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ (India vs New Zealand) ತಂಡವು ಇದುವರೆಗೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಸರಣಿಯ ಮೂರನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವುದರೊಂದಿಗೆ ಸರಣಿಯನ್ನು ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ. ಇತ್ತ ಸರಣಿಯಲ್ಲಿ ಉಳಿಯಲು ನ್ಯೂಜಿಲೆಂಡ್ ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವುದರಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸೂರ್ಯ ಹೇಳಿದ್ದಾರೆ. ಇದರೊಂದಿಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಭಾರತ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ.ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಈ ಪಂದ್ಯದಿಂದ ಹೊರಗುಳಿದಿದ್ದು, ಅವರ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ರವಿ ಬಿಷ್ಣೋಯಿ ಆಡಲಿದ್ದಾರೆ.

ಗುವಾಹಟಿಯಲ್ಲಿ ಟೀಂ ಇಂಡಿಯಾ ದಾಖಲೆ

ಭಾರತವು ಇಲ್ಲಿಯವರೆಗೆ ಗುವಾಹಟಿಯಲ್ಲಿ ನಾಲ್ಕು ಟಿ20ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ ಟೀಂ ಇಂಡಿಯಾ ಕೇವಲ ಒಂದು ಪಂದ್ಯವನ್ನು ಗೆದ್ದಿದ್ದು, ಎರಡರಲ್ಲಿ ಸೋತಿದೆ ಮತ್ತು ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಭಾರತ ಕೊನೆಯದಾಗಿ 2023 ರಲ್ಲಿ ಗುವಾಹಟಿಯಲ್ಲಿ ಟಿ20ಪಂದ್ಯವನ್ನು ಆಡಿತ್ತು, ಆ ಸಮಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. 222 ರನ್ ಬಾರಿಸಿದ್ದರೂ, ಟೀಂ ಇಂಡಿಯಾಕ್ಕೆ ಆಸ್ಟ್ರೇಲಿಯಾವನ್ನು ಕಟ್ಟಿ ಹಾಕಲು ಸಾಧ್ಯವಾಗಲಿಲ್ಲ.

ಉಭಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಮತ್ತು ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಇಶ್ ಸೋಧಿ ಮತ್ತು ಜಾಕೋಬ್ ಡಫ್ಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Sun, 25 January 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!