AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಲಾರ್ಡ್ಸ್‌ನಲ್ಲಿ 22 ವರ್ಷಗಳ ಬರಗಾಲವನ್ನು ಕೊನೆಗೊಳಿಸುತ್ತಾ ಟೀಂ ಇಂಡಿಯಾ

India Aims to End 22-Year ODI Win Drought: ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಲಾರ್ಡ್ಸ್‌ನಲ್ಲಿ ಸರಣಿ ನಿರ್ಣಾಯಕವಾಗಿದೆ. 2004 ರಿಂದ ಭಾರತವು ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ಏಕದಿನ ಪಂದ್ಯ ಗೆದ್ದಿಲ್ಲ, ಅಂದರೆ ಬರೋಬ್ಬರಿ 22 ವರ್ಷಗಳ ಬರ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ವಶಪಡಿಸಿಕೊಳ್ಳಲು ಮತ್ತು ಲಾರ್ಡ್ಸ್‌ನ ಕಳಪೆ ದಾಖಲೆ ಮುರಿಯಲು ಸುವರ್ಣಾವಕಾಶವಿದೆ. ಇದು ಇತಿಹಾಸ ನಿರ್ಮಿಸುವ ಮಹತ್ವದ ಪಂದ್ಯ.

IND vs ENG: ಲಾರ್ಡ್ಸ್‌ನಲ್ಲಿ 22 ವರ್ಷಗಳ ಬರಗಾಲವನ್ನು ಕೊನೆಗೊಳಿಸುತ್ತಾ ಟೀಂ ಇಂಡಿಯಾ
Ind Vs Eng
ಪೃಥ್ವಿಶಂಕರ
|

Updated on: Jul 18, 2026 | 3:27 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಪ್ರಸ್ತುತ 1-1 ಅಂತರದಲ್ಲಿ ಸಮಬಲಗೊಂಡಿದೆ. ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವು ಕ್ರಿಕೆಟ್‌ನ ಮೆಕ್ಕಾ ಎಂದು ಕರೆಯಲ್ಪಡುವ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Cricket Ground) ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಸರಣಿ ಕೈಸೇರಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೆ ಅದು ಇತಿಹಾಸವಾಗಲಿದೆ. ಮೊದಲಿಗೆ ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲಿರುವ ಟೀಂ ಇಂಡಿಯಾ, ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲಿದೆ ಹಾಗೆಯೇ ಕಳೆದ ಎರಡು ದಶಕಗಳಿಂದ ಅಂದರೆ ಬರೋಬ್ಬರಿ 22 ವರ್ಷಗಳಲ್ಲಿ ಲಾರ್ಡ್ಸ್‌ನಲ್ಲಿ ಟೀಂ ಇಂಡಿಯಾದ ಗೆಲುವಿನ ಬರ ಕೊನೆಗೊಳ್ಳಲಿದೆ

22 ವರ್ಷಗಳಿಂದ ಗೆಲುವಿನ ಬರ

ವಾಸ್ತವವಾಗಿ ಟೀಂ ಇಂಡಿಯಾಗೆ ಲಾರ್ಡ್ಸ್ ಮೈದಾನವು 1983 ರ ವಿಶ್ವಕಪ್ ಪ್ರಶಸ್ತಿ ಗೆಲುವು ಮತ್ತು 2002 ರ ನ್ಯಾಟ್‌ವೆಸ್ಟ್ ಟ್ರೋಫಿ ಫೈನಲ್‌ನಂತಹ ಸ್ಮರಣೀಯ ನೆನಪುಗಳಿಗೆ ಹೆಸರುವಾಸಿಯಾಗಿದೆ. ಆದರೆ ಕಟು ವಾಸ್ತವವೆಂದರೆ 2004 ರಿಂದ ಟೀಂ ಇಂಡಿಯಾ ಈ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಒಂದೇ ಒಂದು ಏಕದಿನ ಪಂದ್ಯವನ್ನು ಗೆದ್ದಿಲ್ಲ. ಲಾರ್ಡ್ಸ್‌ನಲ್ಲಿ ಭಾರತದ ಕೊನೆಯ ಏಕದಿನ ಗೆಲುವು ಸೆಪ್ಟೆಂಬರ್ 5, 2004 ರಂದು ಬಂದಿತು, ಆ ಪಂದ್ಯದಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು 23 ರನ್‌ಗಳಿಂದ ಸೋಲಿಸಿತು. ಆ ಐತಿಹಾಸಿಕ ವಿಜಯದ ನಂತರ ಈಗ ಪೂರ್ಣ 22 ವರ್ಷಗಳು ಕಳೆದಿವೆ, ಆದರೆ ಟೀಂ ಇಂಡಿಯಾ ಇನ್ನೂ ಇಲ್ಲಿ ವಿಜಯವನ್ನು ಸವಿದಿಲ್ಲ.

ಕಳೆದ 4 ಪಂದ್ಯಗಳಲ್ಲಿ ಸೋಲು

ಲಾರ್ಡ್ಸ್‌ನಲ್ಲಿ ನಡೆದ ಕೊನೆಯ ನಾಲ್ಕು ಏಕದಿನ ಪಂದ್ಯಗಳಲ್ಲಿ ಭಾರತದ ಪ್ರದರ್ಶನವು ಸಾಕಷ್ಟು ನಿರಾಶಾದಾಯಕವಾಗಿದೆ. 2007 ರಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್, ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಹಾಗೆಯೇ 2011 ರಲ್ಲಿ ನಡೆದಿದ್ದ ಉಭಯ ತಂಡಗಳ ನಡುವಿನ ಪಂದ್ಯವು ರೋಮಾಂಚಕ ಟೈನಲ್ಲಿ ಕೊನೆಗೊಂಡಿತು. ನಂತರ, 2018 ರಲ್ಲಿ ನಡೆದಿದ್ದ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು ಭಾರತೀಯ ಬ್ಯಾಟಿಂಗ್ ಲೈನ್‌ಅಪ್ ಅನ್ನು ಸೋಲಿಸಿ, ಪಂದ್ಯವನ್ನು 86 ರನ್‌ಗಳ ಭಾರಿ ಅಂತರದಿಂದ ಗೆದ್ದುಕೊಂಡಿತು. ಇತ್ತೀಚೆಗೆ ಅಂದರೆ 2022 ರಲ್ಲಿ ಈ ಮೈದಾನದಲ್ಲಿ ಆಡಿದ ಕೊನೆಯ ಪಂದ್ಯದಲ್ಲೂ ಭಾರತ ತಂಡವು 100 ರನ್‌ಗಳ ಅವಮಾನಕರ ಸೋಲನ್ನು ಅನುಭವಿಸಿತ್ತು.

IND vs ENG: ಲಾರ್ಡ್ಸ್‌ನಲ್ಲಿ ಶತಕ ಬಾರಿಸದಿದ್ದರೂ ಇತಿಹಾಸ ಸೃಷ್ಟಿಸಿದ ಸ್ಮೃತಿ ಮಂಧಾನ

ಇತಿಹಾಸ ಸೃಷ್ಟಿಸುತ್ತಾ ಗಿಲ್ ಬ್ರಿಗೇಡ್‌

ಲಾರ್ಡ್ಸ್‌ನಲ್ಲಿ ಭಾರತದ ಮೇಲೆ ಇಂಗ್ಲೆಂಡ್ ಪ್ರಾಬಲ್ಯ ಸಾಧಿಸಿರುವುದು ಅಂಕಿಅಂಶಗಳಿಂದ ಸ್ಪಷ್ಟವಾಗಿದೆ. ಆದ್ದರಿಂದ, ಜುಲೈ 18 ರಂದು ನಡೆಯಲಿರುವ ಅಂತಿಮ ಏಕದಿನ ಪಂದ್ಯದಲ್ಲಿ 22 ವರ್ಷಗಳ ಬರಗಾಲವನ್ನು ಕೊನೆಗೊಳಿಸುವುದು ನಾಯಕ ಶುಭಮನ್ ಗಿಲ್‌ಗೆ ಕಠಿಣ ಕೆಲಸವಾಗಿದೆ. ಭಾನುವಾರ ಭಾರತ ತಂಡ ಸರಣಿ ಟ್ರೋಫಿಯನ್ನು ಎತ್ತಿ ಹಿಡಿಯಬೇಕಾದರೆ, ಲಾರ್ಡ್ಸ್‌ನಲ್ಲಿರುವ ಈ ಅಜೇಯ ಕೋಟೆಯನ್ನು ಭೇದಿಸಲು ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳು ಇಬ್ಬರೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಬೇಕಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್