AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಯಶಸ್ವಿ-ರೋಹಿತ್ ಭರ್ಜರಿ ಬ್ಯಾಟಿಂಗ್: ಹೊಸ ದಾಖಲೆ ನಿರ್ಮಾಣ

India vs West Indies: ಈ ಪಂದ್ಯದ ಭೋಜನ ವಿರಾಮದ ವೇಳೆಗೆ ಟೀಮ್ ಇಂಡಿಯಾ 26 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 121 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ರೋಹಿತ್ ಶರ್ಮಾ (63) ಹಾಗೂ ಯಶಸ್ವಿ ಜೈಸ್ವಾಲ್ (52) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

IND vs WI: ಯಶಸ್ವಿ-ರೋಹಿತ್ ಭರ್ಜರಿ ಬ್ಯಾಟಿಂಗ್: ಹೊಸ ದಾಖಲೆ ನಿರ್ಮಾಣ
Rohit Sharma-Yashasvi Jaiswal
TV9 Web
| Edited By: |

Updated on: Jul 20, 2023 | 10:56 PM

Share

India vs West Indies: ಪೋರ್ಟ್​ ಆಫ್ ಸ್ಪೇನ್​ನಲ್ಲಿ ನಡೆಯುತ್ತಿರುವ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಭಾರತವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು.

ಆರಂಭದಲ್ಲಿ ತುಸು ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ ರನ್​ ಮಳೆ ಹರಿದು ಬಂತು. ಮತ್ತೊಂದೆಡೆ ರಕ್ಷಣಾತ್ಮಕ ಆಟದೊಂದಿಗೆ ರನ್​ ಕಲೆಹಾಕಿದ ರೋಹಿತ್ ಶರ್ಮಾ 74 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ನಾಯಕ ಹಾಫ್ ಸೆಂಚುರಿ ಸಿಡಿಸುತ್ತಿದ್ದಂತೆ ರನ್​ಗಳಿಕೆ ವೇಗ ಹೆಚ್ಚಿಸಿದ ಯಶಸ್ವಿ ಜೈಸ್ವಾಲ್ ವಿಂಡೀಸ್ ಬೌಲರ್​ಗಳ ಬೌಲರ್​ಗಳ ಬೆಂಡೆತ್ತಿದರು. ಅಲ್ಲದೆ ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಇತ್ತ ಇಬ್ಬರು ಆರಂಭಿಕರು ಅರ್ಧಶತಕ ಪೂರೈಸುವುದರೊಂದಿಗೆ ಟೀಮ್ ಇಂಡಿಯಾ ಮೊತ್ತ ಶತಕದ ಗಡಿದಾಟಿತು. ಇದರೊಂದಿಗೆ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಹೆಸರಿಗೆ ವಿಶೇಷ ದಾಖಲೆ ಕೂಡ ಸೇರ್ಪಡೆಯಾಯಿತು.

ಅಂದರೆ ವಿದೇಶಿ ಟೆಸ್ಟ್​ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿಗಳಲ್ಲಿ ಜೈಸ್ವಾಲ್-ಹಿಟ್​ಮ್ಯಾನ್ ಕೂಡ ಸೇರ್ಪಡೆಯಾದರು. ಅಲ್ಲದೆ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಕೇವಲ ತಮ್ಮ 2ನೇ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಸರಿಗಟ್ಟಿದರು.

ಇದಕ್ಕೂ ಮುನ್ನ ವಿದೇಶಿ ಟೆಸ್ಟ್ ಸರಣಿಗಳಲ್ಲಿ ಟೀಮ್ ಇಂಡಿಯಾದ ಆರಂಭಿಕರಾಗಿದ್ದ ಸುನಿಲ್ ಗವಾಸ್ಕರ್-ಚೇತನ್ ಶರ್ಮಾ (ಇಂಗ್ಲೆಂಡ್, 1979), ವೀರೇಂದ್ರ ಸೆಹ್ವಾಗ್-ಆಕಾಶ್ ಚೋಪ್ರಾ (ಆಸ್ಟ್ರೇಲಿಯಾ, 2003), ವೀರೇಂದ್ರ ಸೆಹ್ವಾಗ್-ವಾಸಿಂ ಜಾಫರ್ (ವೆಸ್ಟ್ ಇಂಡೀಸ್, 2006) ತಲಾ 2 ಶತಕಗಳ ಜೊತೆಯಾಟವಾಡಿದ್ದರು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲೂ ಶತಕದ ಜೊತೆಯಾಟವಾಡುವ ಮೂಲಕ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಹಾಗೆಯೇ ಟೀಮ್ ಇಂಡಿಯಾ ಪರ ಸತತ ಟೆಸ್ಟ್​ಗಳಲ್ಲಿ ಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಸತತ 3 ಶತಕದ ಜೊತೆಯಾಟವಾಡಿದ ವೀರೇಂದ್ರ ಸೆಹ್ವಾಗ್ ಹಾಗೂ ಮುರಳಿ ವಿಜಯ್ (2008) ಅಗ್ರಸ್ಥಾನದಲ್ಲಿದ್ದಾರೆ. ಇದೀಗ ಹಿಟ್​ಮ್ಯಾನ್ ಹಾಗೂ ಯಶಸ್ವಿ ಸತತ 2 ಬಾರಿ ಶತಕದ ಜೊತೆಯಾಟವಾಡುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿರುವುದು ವಿಶೇಷ.

ಇನ್ನು ಈ ಪಂದ್ಯದ ಭೋಜನ ವಿರಾಮದ ವೇಳೆಗೆ ಟೀಮ್ ಇಂಡಿಯಾ 26 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 121 ರನ್​ ಕಲೆಹಾಕಿತು. ಆದರೆ ಈ ಬ್ರೇಕ್ ಬಳಿಕ ಮತ್ತೆ ಇನಿಂಗ್ಸ್​ ಆರಂಭಿಸಿದ ಯಶಸ್ವಿ ಜೈಸ್ವಾಲ್ (57) ಜೇಸನ್ ಹೋಲ್ಡರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಇನ್ನು 33 ಓವರ್ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ  1 ವಿಕೆಟ್ ನಷ್ಟಕ್ಕೆ 143 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ರೋಹಿತ್ ಶರ್ಮಾ (78) ಹಾಗೂ ಶುಭ್​ಮನ್ ಗಿಲ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ರೋಹಿತ್ ಶರ್ಮಾ (ನಾಯಕ) , ಶುಭಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ರವಿಚಂದ್ರನ್ ಅಶ್ವಿನ್ , ಜಯದೇವ್ ಉನದ್ಕತ್ , ಮುಖೇಶ್ ಕುಮಾರ್ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್​ರೌಂಡರ್​ಗಳು..!

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೈಗ್ ಬ್ರಾಥ್‌ವೈಟ್ (ನಾಯಕ) , ತೇಜ್​ನರೈನ್ ಚಂದ್ರಪಾಲ್ , ಕಿರ್ಕ್ ಮೆಕೆಂಝಿ , ಜೆರ್ಮೈನ್ ಬ್ಲಾಕ್‌ವುಡ್ , ಅಲಿಕ್ ಅಥಾನಾಝ್ , ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್) ಜೇಸನ್ ಹೋಲ್ಡರ್ , ಅಲ್ಝಾರಿ ಜೋಸೆಫ್ , ಕೆಮರ್ ರೋಚ್ , ಜೋಮೆಲ್ ವಾರಿಕನ್ , ಶಾನನ್ ಗೇಬ್ರಿಯಲ್.

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ