AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedar Jadhav: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯಲ್ಲ..!

Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್​ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್​ನಲ್ಲಿದೆ. ಅದರಂತೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್, ಒಮಾನ್ ಹಾಗೂ ಯುಎಇ ವಿರುದ್ಧ ಕಣಕ್ಕಿಳಿಯಲಿದೆ.

Kedar Jadhav: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯಲ್ಲ..!
Ind Vs Pak
ಝಾಹಿರ್ ಯೂಸುಫ್
|

Updated on: Aug 18, 2025 | 2:14 PM

Share

ಕ್ರಿಕೆಟ್ ಅಂಗಳದ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಸೆಪ್ಟೆಂಬರ್ 14 ರಂದು ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಿಂದ ಭಾರತ ತಂಡ ಹಿಂದೆ ಸರಿಯುವುದು ಖಚಿತ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಕೇದಾರ್ ಜಾಧವ್.

ಎಎನ್​ಐ ಜೊತೆ ಮಾತನಾಡಿದ ಕೇದಾರ್ ಜಾಧವ್​, ನನ್ನ ಪ್ರಕಾರ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಯಾವುದೇ ಪಂದ್ಯವನ್ನು ಆಡಬಾರದು. ಇನ್ನು ಪಾಕ್ ವಿರುದ್ಧ ಎಲ್ಲೇ ಆಡಿದರೂ ಟೀಮ್ ಇಂಡಿಯಾ ಯಾವಾಗಲೂ ಗೆಲ್ಲುತ್ತದೆ. ಇದಾಗ್ಯೂ ನಾವು ಅವರ ವಿರುದ್ಧ ಆಡಲೇಬಾರದು ಎಂಬುದು ನನ್ನ ಅನಿಸಿಕೆ.

ಅಲ್ಲದೆ ಈ ಪಂದ್ಯವನ್ನು ಭಾರತ ತಂಡ ತಿರಸ್ಕರಿಸುತ್ತೆ ಎಂಬ ವಿಶ್ವಾಸವಿದೆ. ಟೀಮ್ ಇಂಡಿಯಾ ಪಾಕಿಸ್ತಾಣ್ ವಿರುದ್ಧ ಆಡಲ್ಲ ಎಂಬುದನ್ನು ನಾನು ಆತ್ಮವಿಶ್ವಾಸದಿಂದ ಹೇಳಬಲ್ಲೆ … ಆಪರೇಷನ್ ಸಿಂಧೂರ್ ಯಶಸ್ವಿಯಾಗಿದೆ, ಇದು ಸಹ ಯಶಸ್ವಿಯಾಗಲಿದೆ ಎಂದು ಕೇದಾರ್ ಜಾಧವ್ ಹೇಳಿದ್ದಾರೆ.

ಅಂದರೆ ಕೇದಾರ್ ಜಾಧವ್ ಪ್ರಕಾರ, ಪಾಕಿಸ್ತಾನ್ ವಿರುದ್ಧದ ಪಂದ್ಯದಿಂದ ಟೀಮ್ ಇಂಡಿಯಾ ಹಿಂದೆ ಸರಿಯಲಿದೆ. ಇತ್ತೀಚೆಗೆ ವರ್ಲ್ಡ್ ಚಾಂಪಿಯನ್ಸ್​ ಆಫ್​ ಲೆಜೆಂಡ್ಸ್ ಟೂರ್ನಿಯಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಕಣಕ್ಕಿಳಿಯಲು ಇಂಡಿಯಾ ಚಾಂಪಿಯನ್ಸ್ ತಂಡ ನಿರಾಕರಿಸಿತ್ತು.

ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಲೀಗ್ ಸುತ್ತಿನ ಪಂದ್ಯದಿಂದ ಹಿಂದೆ ಸರಿದಿದ್ದ ಇಂಡಿಯಾ ಚಾಂಪಿಯನ್ಸ್, ಆ ಬಳಿಕ ಪಾಕ್ ವಿರುದ್ಧ ಸೆಮಿಫೈನಲ್ ಆಡಲು ಕೂಡ ನಿರಾಕರಿಸಿತ್ತು. ಅತ್ತ ಸೆಮಿಫೈನಲ್ ಪಂದ್ಯದಿಂದ ಇಂಡಿಯಾ ಚಾಂಪಿಯನ್ಸ್ ಹಿಂದೆ ಸರಿದ ಕಾರಣ, ಪಾಕಿಸ್ತಾನ್ ಚಾಂಪಿಯನ್ಸ್ ಫೈನಲ್​ಗೇರಿದ್ದರು.

ಇದೀಗ ಇದೇ ಮಾದರಿಯಲ್ಲಿ ಏಷ್ಯಾಕಪ್​ನಲ್ಲೂ ಸಂಭವಿಸಲಿದೆ ಎಂದು ಕೇದಾರ್ ಜಾಧವ್ ಭವಿಷ್ಯ ನುಡಿದಿದ್ದಾರೆ. ಅಂದರೆ ಪಹಲ್ಗಾಮ್​ನಲ್ಲಿ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯನ್ನು ಖಂಡಿಸಿ ಪಾಕಿಸ್ತಾನ್ ವಿರುದ್ಧದ ಪಂದ್ಯದಿಂದ ಟೀಮ್ ಇಂಡಿಯಾ ಆಟಗಾರರು ಹಿಂದೆ ಸರಿಯಲಿದೆ. ಈ ಮೂಲಕ ಭಾರತ ತಂಡವು ತನ್ನ ನಿಲುವನ್ನು ಸ್ಪಷ್ಟಪಡಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮ್ಯಾಕ್ಸ್​ವೆಲ್ ಸಿಕ್ಸರ್​ಗೆ ರೋಹಿತ್ ಶರ್ಮಾ ವಿಶ್ವ ದಾಖಲೆಯೇ ಉಡೀಸ್

ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಪಾಕಿಸ್ತಾನ್ ತಂಡವು ಸೆಪ್ಟೆಂಬರ್ 12 ರಂದು ಒಮಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಇದಾದ ಬಳಿಕ ಸೆಪ್ಟೆಂಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಭಾರತ ತಂಡವನ್ನು ಎದುರಿಸಲಿದೆ. ಈ ಪಂದ್ಯದಿಂದ ಟೀಮ್ ಇಂಡಿಯಾ ಹಿಂದೆ ಸರಿಯಲಿದೆಯಾ ಕಾದು ನೋಡಬೇಕಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!