AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಪತ್ರಿಕಾಗೋಷ್ಠಿಯಲ್ಲಿ ಇನ್ನು ಮುಂದೆ ಈ ರೀತಿಯ ಪ್ರಶ್ನೆಗಳಿಗೆ ಬ್ರೇಕ್; ಎಸಿಸಿ ಮಹತ್ವದ ನಿರ್ಧಾರ

Asia Cup 2025: 2025ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ವಿವಾದದ ನಂತರ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಪತ್ರಿಕಾಗೋಷ್ಠಿಗಳಲ್ಲಿ ರಾಜಕೀಯ ಪ್ರಶ್ನೆಗಳನ್ನು ನಿಷೇಧಿಸುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಭಾರತೀಯ ಆಟಗಾರರು ಪಾಕಿಸ್ತಾನದೊಂದಿಗೆ ಕೈಕುಲುಕಲು ನಿರಾಕರಿಸಿದ ಘಟನೆಯಿಂದ ಉಂಟಾದ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನ ತಂಡ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸದಿರುವುದು ಐಸಿಸಿಯನ್ನು ಅಸಮಾಧಾನಗೊಳಿಸಿದೆ.

Asia Cup 2025: ಪತ್ರಿಕಾಗೋಷ್ಠಿಯಲ್ಲಿ ಇನ್ನು ಮುಂದೆ ಈ ರೀತಿಯ ಪ್ರಶ್ನೆಗಳಿಗೆ ಬ್ರೇಕ್; ಎಸಿಸಿ ಮಹತ್ವದ ನಿರ್ಧಾರ
Asia Cup 2025
ಪೃಥ್ವಿಶಂಕರ
|

Updated on:Sep 19, 2025 | 3:59 PM

Share

2025 ರ ಏಷ್ಯಾಕಪ್ (Asia Cup 2025) ಪಂದ್ಯಗಳಿಂದ ಮಾತ್ರವಲ್ಲ, ವಿವಾದಗಳಿಂದಲೂ ಸುದ್ದಿಯಲ್ಲಿದೆ. ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಗುಂಪು ಹಂತದ ಪಂದ್ಯದ ಸಮಯದಲ್ಲಿ ಹುಟ್ಟಿಕೊಂಡಿದ್ದ ವಿವಾದ ಇಂದಿಗೂ ತಣ್ಣಗಾಗಿಲ್ಲ. ಟೀಂ ಇಂಡಿಯಾ ಆಟಗಾರರು ಪಾಕಿಸ್ತಾನ ತಂಡದೊಂದಿಗೆ ಕೈಕುಲುಕಲು ನಿರಾಕರಿಸಿದ ಘಟನೆ ಪಾಕ್ ಕ್ರಿಕೆಟ್​ನ ಅಸಮಾಧಾನಕ್ಕೆ ಕಾರಣವಾಯಿತು. ಈ ವಿವಾದ ಐಸಿಸಿ ಕದವನ್ನು ತಟ್ಟಿತು. ಇದು ಪಾಕಿಸ್ತಾನ ಮತ್ತು ಯುಎಇ ನಡುವಿನ ಪಂದ್ಯದ ಮೇಲೂ ಪರಿಣಾಮ ಬೀರಿತು. ಹೀಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮೇಲೆ ಶಿಷ್ಟಾಚಾರ ಉಲ್ಲಂಘಿಸಿದ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ. ಇದೆಲ್ಲದರ ನಡುವೆ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.

ಎಸಿಸಿ ತೆಗೆದುಕೊಂಡ ನಿರ್ಧಾರವೇನು?

2025 ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯದ ಸಮಯದಲ್ಲಿ ಹುಟ್ಟಿಕೊಂಡಿದ್ದ ವಿವಾದವನ್ನು ಕಡಿಮೆ ಮಾಡಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ಪತ್ರಿಕಾಗೋಷ್ಠಿಗಳಲ್ಲಿ ಪತ್ರಕರ್ತರು ರಾಜಕೀಯ ಕುರಿತ ಪ್ರಶ್ನೆಗಳನ್ನು ಕೇಳುವುದನ್ನು ನಿಷೇಧಿಸುವ ಹೊಸ ಮಾರ್ಗಸೂಚಿಗಳನ್ನು ಎಸಿಸಿ ಹೊರಡಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನತೆಯನ್ನು ಶಾಂತಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತ ಹಾಗೂ ಪಾಕ್ ನಡುವಿನ ಹ್ಯಾಂಡ್‌ಶೇಕ್ ವಿವಾದದ ನಂತರ, ಭಾರತೀಯ ಪತ್ರಕರ್ತರು ಪತ್ರಿಕಾಗೋಷ್ಠಿಯಲ್ಲಿ ಪಂದ್ಯವನ್ನು ಹೊರತುಪಡಿಸಿ ರಾಜಕೀಯ ಸಂಬಂಧಿತ ಪ್ರಶ್ನೆಗಳನ್ನು ಎತ್ತಿದರು. ಇದು ಎಸಿಸಿಗೆ ಮುಜುಗರವನ್ನು ತಂದಿದೆ.

ಹೀಗಾಗಿ ಒಮಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಪರ ಕುಲ್ದೀಪ್ ಯಾದವ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ ಈ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ಎಸಿಸಿ ಮಾಧ್ಯಮ ಅಧಿಕಾರಿಯೊಬ್ಬರು ಭಾರತೀಯ ಪತ್ರಕರ್ತರು ಯಾವುದೇ ರಾಜಕೀಯ ಪ್ರಶ್ನೆಗಳನ್ನು ಕೇಳದಂತೆ ಸೂಚನೆ ನೀಡಿದ್ದರು ಎಂದು ವರದಿಯಾಗಿದೆ.

Asia Cup 2025: ಅಭ್ಯಾಸಕ್ಕೆ ಟೀಂ ಇಂಡಿಯಾದ 6 ಆಟಗಾರರು ಗೈರು; ತಂಡದಲ್ಲಿ ಎಷ್ಟು ಬದಲಾವಣೆ?

ಪತ್ರಿಕಾಗೋಷ್ಠಿ ನಡೆಸದ ಪಾಕ್ ತಂಡ

ಪಾಕಿಸ್ತಾನ ಮತ್ತು ಯುಎಇ ನಡುವಿನ ಪಂದ್ಯಕ್ಕೂ ಮೊದಲು ಪತ್ರಿಕಾಗೋಷ್ಠಿ ನಡೆದಿತ್ತು. ಆದರೆ, ಪಾಕಿಸ್ತಾನ ತಂಡದಿಂದ ಯಾರೂ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿರಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಐಸಿಸಿಯ ಹಿರಿಯ ಸದಸ್ಯರೊಬ್ಬರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮನೋಭಾವವನ್ನು ಪ್ರಶ್ನಿಸಿದ್ದಾರೆ. ಪಾಕಿಸ್ತಾನ ತಂಡವು ಅಭ್ಯಾಸ ಅವಧಿಗಳಲ್ಲಿ ಭಾಗವಹಿಸುತ್ತಿದ್ದರೂ ಕಡ್ಡಾಯ ಪತ್ರಿಕಾಗೋಷ್ಠಿಯಲ್ಲಿ ಏಕೆ ಭಾಗವಹಿಸಲಿಲ್ಲ ಎಂಬ ಪ್ರಶ್ನೆಯನ್ನು ಪಿಸಿಬಿ ಮುಂದಿಟ್ಟಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 19 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ