AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022 Super 4: ಏಷ್ಯಾಕಪ್​ನಲ್ಲಿ ಇಂದಿನಿಂದ ಸೂಪರ್ 4 ಕದನ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ. ಸೂಪರ್ 4 ಹಂತಕ್ಕೆ ಗ್ರೂಪ್ ಎ ಯಿಂದ ಭಾರತ ಹಾಗೂ ಪಾಕಿಸ್ತಾನ (India vs Pakistan), ಗ್ರೂಪ್ ಬಿ ಯಿಂದ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತೇರ್ಗಡೆಯಾಗಿದೆ.

Asia Cup 2022 Super 4: ಏಷ್ಯಾಕಪ್​ನಲ್ಲಿ ಇಂದಿನಿಂದ ಸೂಪರ್ 4 ಕದನ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
Asia Cup 2022 SUperr 4
TV9 Web
| Edited By: |

Updated on:Sep 03, 2022 | 10:18 AM

Share

ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಗ್ರೂಪ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ. ಸೂಪರ್ 4 ಹಂತಕ್ಕೆ ಗ್ರೂಪ್ ಎ ಯಿಂದ ಭಾರತ ಹಾಗೂ ಪಾಕಿಸ್ತಾನ (India vs Pakistan), ಗ್ರೂಪ್ ಬಿ ಯಿಂದ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತೇರ್ಗಡೆಯಾಗಿದೆ. ಸೂಪರ್ 4 (Super 4) ಹಂತದ ನಿಯಮದ ಪ್ರಕಾರ ಪ್ರತಿ ತಂಡ ಉಳಿದ ಮೂರು ತಂಡಗಳ ವಿರುದ್ಧವೂ ಕಣಕ್ಕಿಳಿಯಲಿದೆ. ಹೀಗಾಗಿ ಇದರಲ್ಲಿ ಭಾರತ ಹಾಗೂ ಪಾಕಿಸ್ತಾನ ಕೂಡ ಮತ್ತೊಮ್ಮೆ ಮುಖಾಮುಖಿ ಆಗಲಿದೆ.

ಸೂಪರ್ 4 ಹಂತದ ಪಂದ್ಯ ಸೆ. 3 ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ. ಸೆಪ್ಟೆಂಬರ್ 7 ರಂದು ಪಾಕಿಸ್ತಾನ ತಂಡ ಅಫ್ಘಾನಿಸ್ತಾನ ವಿರುದ್ಧ ಆಡಬೇಕು. ಸೆ. 8 ರಂದು ಭಾರತಅಫ್ಘಾನಿಸ್ತಾನ ಸೆಣೆಸಾಟ ನಡೆಸಲಿದೆ. ಹಾಗೂ ಸೂಪರ್ 4 ಹಂತದ ಕೊನೆಯ ಪಂದ್ಯ ಸೆಪ್ಟೆಂಬರ್ 9 ರಂದು ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ನಡೆಯಲಿದೆ.

ಇದನ್ನೂ ಓದಿ
Image
PAK vs HKG: 38 ರನ್​ಗಳಿಗೆ ಹಾಂಗ್​ ಕಾಂಗ್ ಆಲೌಟ್; ಸೂಪರ್ ಸಂಡೇಯಲ್ಲಿ ಭಾರತಕ್ಕೆ ಪಾಕ್ ಎದುರಾಳಿ..!
Image
T20 World Cup: ರಾಯ್ ಬಳಿಕ ಇಂಗ್ಲೆಂಡ್ ತಂಡದ ಮತ್ತೊಬ್ಬ ಸ್ಫೋಟಕ ಬ್ಯಾಟರ್ ಟಿ20 ವಿಶ್ವಕಪ್‌ನಿಂದ ಔಟ್..!
Image
T20 World Cup: ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡದಿಂದ ಕೆಎಲ್ ರಾಹುಲ್ ಔಟ್?
Image
ಉಗ್ರರ ದಾಳಿಗೆ 11 ಒಲಿಂಪಿಕ್ಸ್ ಅಥ್ಲೀಟ್‌ಗಳ ದಾರುಣ ಸಾವು; 223 ಕೋಟಿ ರೂ. ಪರಿಹಾರ ಘೋಷಿಸಿದ ಜರ್ಮನ್ ಸರ್ಕಾರ

ಸೂಪರ್ 4 ಹಂತದಲ್ಲಿ ಕೂಡ ಪಾಯಿಂಟ್ ಟೇಬಲ್​ ಇರಲಿದ್ದು, ಇದರಲ್ಲಿ ಮೊದಲ ಮತ್ತು 2ನೇ ಸ್ಥಾನ ಪಡೆಯುವ ತಂಡಗಳು ಫೈನಲ್​ ಪ್ರವೇಶಿಸಲಿದೆ. ಅಂದರೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಮತ್ತು ದ್ವಿತೀಯ ಸ್ಥಾನ ಪಡೆಯುವ ತಂಡಗಳೇ ಅಂತಿಮ ಹಣಾಹಣಿಯಲ್ಲಿ ಮುಖಾಮುಖಿಯಾಗಲಿದೆ. ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಸೂಪರ್– 4 ವೇಳಾಪಟ್ಟಿ:

ಸೆಪ್ಟೆಂಬರ್ 3 – ಅಫ್ಘಾನಿಸ್ತಾನ್ vs ಶ್ರೀಲಂಕಾಶಾರ್ಜಾ

ಸೆಪ್ಟೆಂಬರ್ 4 – ಭಾರತ vs ಪಾಕಿಸ್ತಾನದುಬೈ

ಸೆಪ್ಟೆಂಬರ್ 6 – ಶ್ರೀಲಂಕಾ vs ಭಾರತದುಬೈ

ಸೆಪ್ಟೆಂಬರ್ 7 – ಪಾಕಿಸ್ತಾನ vs ಅಫ್ಘಾನಿಸ್ತಾನ್ – ದುಬೈ

ಸೆಪ್ಟೆಂಬರ್ 8 – ಭಾರತvs ಅಫ್ಘಾನಿಸ್ತಾನ್ ದುಬೈ

ಸೆಪ್ಟೆಂಬರ್ 9 – ಶ್ರೀಲಂಕಾ vs ಪಾಕಿಸ್ತಾನದುಬೈ

ಸೆಪ್ಟೆಂಬರ್ 11 – ಫೈನಲ್ ಪಂದ್ಯ– ದುಬೈ

ಜಡೇಜಾ ಔಟ್:

ಸೂಪರ್-4 ಗೆ ಎಂಟ್ರಿಕೊಟ್ಟಿರುವ ಟೀಮ್ ಇಂಡಿಯಾಗೆ ದೊಡ್ಡ ಹಿನ್ನಡೆ ಎದುರಾಗಿದೆ. ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್ ಟೂರ್ನಿಯಿಂದ ಹೊರಬಿದಿದ್ದಾರೆ. ಜಡೇಜಾ ಹೊರಗುಳಿಯಲು ಕಾರಣ ಮೊಣಕಾಲು ಗಾಯ. ಗಾಯದ ಸಮಸ್ಯೆಯಿಂದ ಜಡೇಜಾ ಏಷ್ಯಾಕಪ್‌ನಲ್ಲಿ ಆಡಲು ಸಾಧ್ಯವಿಲ್ಲ ಎಂದು ಬಿಸಿಸಿಐ ಮಾಹಿತಿ ನೀಡಿದ್ದು, ಅವರ ಸ್ಥಾನಕ್ಕೆ ಅಕ್ಸರ್ ಪಟೇಲ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಜಡೇಜಾ ಅವರ ಬಲ ಮೊಣಕಾಲಿಗೆ ಗಾಯವಾಗಿದ್ದು, ಈ ಕಾರಣದಿಂದಾಗಿ ಅವರು ತಂಡದಿಂದ ಔಟಾಗಿದ್ದಾರೆ. ಜಡೇಜಾ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ತಿಳಿದಿಲ್ಲ, ಆದರೆ ಟಿ 20 ವಿಶ್ವಕಪ್ ಹತ್ತಿರದಲ್ಲಿದ್ದು, ಈ ಸುದ್ದಿ ಟೀಮ್ ಇಂಡಿಯಾಕ್ಕೆ ಬರಸಿಡಿಲಿನಂತೆ ಎರಗಿದೆ.

Published On - 8:26 am, Sat, 3 September 22

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು