AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕಿಸ್ತಾನ್ ವಿರುದ್ಧ ನಿರ್ಣಾಯಕ ಅರ್ಧಶತಕ ಚಚ್ಚಿದ ಸ್ಮೃತಿ ಮಂಧಾನ

India vs Pakistan Women's T20 World Cup 2026: ಮಹಿಳಾ ಟಿ20 ವಿಶ್ವಕಪ್ 2026ರಲ್ಲಿ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಆಟಗಾರ್ತಿಯರು ಬೇಗನೆ ಔಟಾದರು. ಆದರೆ, ಉಪನಾಯಕಿ ಸ್ಮೃತಿ ಮಂಧನಾ ಸ್ಫೋಟಕ 68 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಕಳಪೆ ಫಾರ್ಮ್‌ನಲ್ಲಿದ್ದ ಮಂಧನಾ ಈ ಪಂದ್ಯದಲ್ಲಿ ಅರ್ಧಶತಕ ಗಳಿಸುವ ಮೂಲಕ ತಮ್ಮ ಹಳೆಯ ಲಯಕ್ಕೆ ಮರಳಿ, ತಂಡಕ್ಕೆ ಭರವಸೆ ಮೂಡಿಸಿದರು. ಅವರ ಇನ್ನಿಂಗ್ಸ್ ಭಾರತಕ್ಕೆ ಸ್ಪರ್ಧಾತ್ಮಕ ಮೊತ್ತ ಗಳಿಸಲು ನೆರವಾಯಿತು.

IND vs PAK: ಪಾಕಿಸ್ತಾನ್ ವಿರುದ್ಧ ನಿರ್ಣಾಯಕ ಅರ್ಧಶತಕ ಚಚ್ಚಿದ ಸ್ಮೃತಿ ಮಂಧಾನ
Smriti Mandhana
ಪೃಥ್ವಿಶಂಕರ
|

Updated on:Jun 14, 2026 | 8:35 PM

Share

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಮಹಿಳಾ ಟಿ20 ವಿಶ್ವಕಪ್ ( Women’s T20 World Cup 2026) ಪಂದ್ಯ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹೀಗಾಗಿ ಉಭಯ ತಂಡಗಳು ಗೆಲುವಿನೊಂದಿಗೆ ಟೂರ್ನಿ ಆರಂಭಿಸಲು ನೋಡುತ್ತಿವೆ. ಅದರಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಮೊದಲು ಬ್ಯಾಟಿಂಗ್‌ ಆಯ್ದುಕೊಂಡರು. ಆದರೆ ನಾಯಕಿಯ ಆಯ್ಕೆಯನ್ನು ಸಮರ್ಥಿಸಿಕೊಳ್ಳುವಲ್ಲಿ ಶಫಾಲಿ ಹಾಗೂ ಜೆಮೀಮಾ ಎಡವಿದರು. ಆದಾಗ್ಯೂ ಈ ಮಹತ್ವದ ಪಂದ್ಯದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ ಉಪನಾಯಕಿ ಸ್ಮೃತಿ ಮಂಧಾನ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಭಾರತಕ್ಕೆ ಆರಂಭಿಕ ಆಘಾತ

ಈ ಪಂದ್ಯದಲ್ಲಿ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಇನ್ನಿಂಗ್ಸ್​ನ ಮೊದಲ ಎಸೆತವನ್ನು ಸಿಕ್ಸರ್​ಗಟ್ಟಿದರಾದರೂ ಅದೇ ಓವರ್​ನ ಕೊನೆಯ ಎಸೆತದಲ್ಲಿ ಕೀಪರ್​​ಗೆ ಕ್ಯಾಚಿತ್ತು ಔಟಾದರು. ಆ ಬಳಿಕ ಬಂದ ಜೆಮೀಮಾ ಕೂಡ ಕೇವಲ 1 ರನ್​ಗೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಭಾರತ ಕೇವಲ 18 ರನ್​ಗಳಿಗೆ ತನ್ನ ಮೊದಲೆರಡು ವಿಕೆಟ್​ಗಳನ್ನು ಕಳೆದುಕೊಂಡಿತು. ಆದರೆ ಆ ಬಳಿಕ ಜೊತೆಯಾದ ಸ್ಮೃತಿ ಹಾಗೂ ಹರ್ಮನ್​ ತಂಡದ ಇನ್ನಿಂಗ್ಸ್ ಕಟ್ಟಿದರು. ಇವರಿಬ್ಬರು ಮೂರನೇ ವಿಕೆಟ್​ಗೆ 91 ರನ್​ಗಳ ಜೊತೆಯಾಟವನ್ನಾಡಿತು.

68 ರನ್​ ಬಾರಿಸಿದ ಸ್ಮೃತಿ

ಆರಂಭದಲ್ಲಿ ತಾಳ್ಮೆಯ ಬ್ಯಾಟಿಂಗ್‌ ಪ್ರದರ್ಶಿಸಿದ ಸ್ಮೃತಿ, ಆ ಬಳಿಕ ನಿಧಾನವಾಗಿ ತಮ್ಮ ಗೇರ್ ಬದಲಿಸಿದರು. ಹೀಗಾಗಿ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಸ್ಮೃತಿ ಅವರ ಈ ಇನ್ನಿಂಗ್ಸ್​ನಿಂದಾಗಿ ಭಾರತ ತಂಡ ಶತಕದ ಗಡಿ ಕೂಡ ದಾಟಿತು. ಅರ್ಧಶತಕದ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದ ಸ್ಮೃತಿ 68 ರನ್ ಬಾರಿಸಿ ಔಟಾದರು. ತಮ್ಮ ಇನ್ನಿಂಗ್ಸ್​ನಲ್ಲಿ 44 ಎಸೆತಗಳನ್ನು ಎದುರಿಸಿದ ಸ್ಮೃತಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳನ್ನು ಬಾರಿಸಿದರು.

ಕಳಪೆ ಫಾರ್ಮ್​ಗೆ ಸಿಲುಕಿದ್ದ ಸ್ಮೃತಿ

ವಾಸ್ತವವಾಗಿ ವಿಶ್ವಕಪ್​ಗೂ ಮುನ್ನ ಸ್ಮೃತಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದರು. ವಾಸ್ತವವಾಗಿ ಟಿ20 ವಿಶ್ವಕಪ್‌ಗೆ ಸಿದ್ಧರಾಗಲು ಮತ್ತು ಅಲ್ಲಿನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಹರ್ಮನ್‌ಪ್ರೀತ್ ಪಡೆ ಸಾಕಷ್ಟು ಮುಂಚಿತವಾಗಿಯೇ ಇಂಗ್ಲೆಂಡ್‌ಗೆ ತಲುಪಿತ್ತು. ಆದಾಗ್ಯೂ, ಈ ಪ್ರವಾಸ ಮಂಧಾನಾಗೆ ದುಃಸ್ವಪ್ನವಾಗಿ ಪರಿಣಮಿಸಿತ್ತು. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಖಾತೆ ತೆರೆಯದೆ ಪೆವಿಲಿಯನ್‌ ಸೇರಿದ್ದ ಮಂಧಾನ, ಎರಡನೇ ಪಂದ್ಯದಲ್ಲಿ 32 ರನ್ ಗಳಿಸುವ ಮೂಲಕ ಹಳೆಯ ಫಾರ್ಮ್​ಗೆ ಮರಳುವ ಭರವಸೆಯನ್ನು ಮೂಡಿಸಿದ್ದರು. ಆದರೆ ಮೂರನೇ ಮತ್ತು ಅಂತಿಮ ಟಿ20ಯಲ್ಲಿ ಕೇವಲ 8 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು.

IND vs PAK Women’s T20 WC Live Score: ಭಾರತದ 5ನೇ ವಿಕೆಟ್ ಪತನ

ಇದರ ನಂತರ, ವೆಸ್ಟ್ ಇಂಡೀಸ್ ವಿರುದ್ಧದ ವಿಶ್ವಕಪ್‌ನ ಮೊದಲ ಅಭ್ಯಾಸ ಪಂದ್ಯದಲ್ಲಿ 39 ರನ್ ಬಾರಿಸಿದ್ದ ಸ್ಮೃತಿ, ಇಂಗ್ಲೆಂಡ್ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಕೇವಲ 1 ರನ್ ಗಳಿಸುವ ಮೂಲಕ ಮತ್ತೆ ನಿರಾಶೆ ಮೂಡಿಸಿದ್ದರು. ಹೀಗಾಗಿ ಸ್ಮೃತಿ ಅವರ ಫಾರ್ಮ್​ ತಂಡದ ಕಳವಳ ಹೆಚ್ಚಿಸಿತ್ತು. ಆದರೆ ಪಾಕ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಮಂಧಾನ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Sun, 14 June 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್