AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್ ಸವಾಲಿಗೆ ಟೀಮ್ ಇಂಡಿಯಾ ರೆಡಿ: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 13, 2026 ರಿಂದ ಆರಂಭವಾಗಲಿದೆ. ಈ ಸರಣಿಯ ದ್ವಿತೀಯ ಪಂದ್ಯ ಸೆಪ್ಟೆಂಬರ್ 15 ರಂದು ಹಾಗೂ ತೃತೀಯ ಪಂದ್ಯ ಸೆಪ್ಟೆಂಬರ್ 17 ರಂದು ಜರುಗಲಿದೆ. ಇನ್ನು ಈ ಸರಣಿಯ ಎಲ್ಲಾ ಪಂದ್ಯಗಳಿಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಅಫ್ಘಾನ್ ಸವಾಲಿಗೆ ಟೀಮ್ ಇಂಡಿಯಾ ರೆಡಿ: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್
ಟೀಮ್ ಇಂಡಿಯಾImage Credit source: GettyImages
ಝಾಹಿರ್ ಯೂಸುಫ್
|

Updated on: Sep 12, 2026 | 2:02 PM

Share

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಟಿ20 ಸರಣಿಯು ನಾಳೆಯಿಂದ (ಸೆ.13) ಆರಂಭವಾಗಲಿದೆ. ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಸರಣಿಯ ಪಂದ್ಯಕ್ಕೆ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಎಡಗೈ ದಾಂಡಿಗರ ದಂಡೇ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಏಕೆಂದರೆ ಟೀಮ್ ಇಂಡಿಯಾದಲ್ಲಿ ಲೆಫ್ಟ್ ಹ್ಯಾಂಡ್ ಬ್ಯಾಟರ್​ಗಳ ಸಂಖ್ಯೆ ಹೆಚ್ಚಿದ್ದು, ಹೀಗಾಗಿ ಟಾಪ್-4 ನಲ್ಲಿ ಮೂವರು ಎಡಗೈ ದಾಂಡಿಗರು ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು. ಇದಾದ ಬಳಿಕ ಆಲ್​ರೌಂಡರ್​ಗಳಾಗಿ ಇಬ್ಬರು ಎಡಗೈ ದಾಂಡಿಗರು ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಿದರೆ, ನಾಲ್ಕನೇ ಕ್ರಮಾಂಕದಲ್ಲಿ ಉಪನಾಯಕ ತಿಲಕ್ ವರ್ಮಾ ಕಾಣಿಸಿಕೊಳ್ಳಲಿದ್ದಾರೆ.

ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಬದಲು ಸಂಜು ಸ್ಯಾಮ್ಸನ್​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು. ಏಕೆಂದರೆ ಇಶಾನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ.

ಹಾಗೆಯೇ ಆಲ್​ರೌಂಡರ್​ಗಳಾಗಿ ಅಕ್ಷರ್ ಪಟೇಲ್, ಶಿವಂ ದುಬೆ ಹಾಗೂ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಇನ್ನು ಬೌಲರ್​ಗಳಾಗಿ ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  • ಅಭಿಷೇಕ್ ಶರ್ಮಾ (ಆರಂಭಿಕ ಬ್ಯಾಟರ್)
  • ವೈಭವ್ ಸೂರ್ಯವಂಶಿ (ಆರಂಭಿಕ ಬ್ಯಾಟರ್)
  • ಶ್ರೇಯಸ್ ಅಯ್ಯರ್ (ನಾಯಕ)
  • ತಿಲಕ್ ವರ್ಮಾ (ಉಪನಾಯಕ)
  • ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  • ಶಿವಂ ದುಬೆ (ಆಲ್ ರೌಂಡರ್)
  • ಅಕ್ಷರ್ ಪಟೇಲ್ (ಆಲ್ ರೌಂಡರ್)
  • ವಾಷಿಂಗ್ಟನ್ ಸುಂದರ್ (ಆಲ್ ರೌಂಡರ್)
  • ವರುಣ್ ಚಕ್ರವರ್ತಿ (ಸ್ಪಿನ್ನರ್)
  • ಜಸ್​ಪ್ರೀತ್ ಬುಮ್ರಾ (ವೇಗಿ)
  • ಅರ್ಷದೀಪ್ ಸಿಂಗ್ (ಎಡಗೈ ವೇಗಿ)

ಪಿಚ್ ರಿಪೋರ್ಟ್​:

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಸಹಕಾರಿಯಾಗಿದ್ದು, ಇಲ್ಲಿ ರನ್ ಮಳೆ ಹರಿಯುವ ಸಾಧ್ಯತೆಯಿದೆ. ಹೀಗಾಗಿ, ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಆರಂಭದ ಮೇಲೆ ಭಾರತ ಭಾರಿ ಭರವಸೆ ಇಟ್ಟಿದೆ. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಹಾಗೂ ಆಲ್ ರೌಂಡರ್‌ಗಳಾದ ಅಕ್ಷರ್ ಪಟೇಲ್ ಮತ್ತು ಶಿವಂ ದುಬೆ ಅವರ ಪ್ರದರ್ಶನ ತಂಡಕ್ಕೆ ದಿಕ್ಸೂಚಿಯಾಗಲಿದೆ. ಇನ್ನು ಗಾಯದಿಂದ ಚೇತರಿಸಿಕೊಂಡು ಮರಳಿರುವ ಜಸ್​ಪ್ರೀತ್ ಬುಮ್ರಾ  ಎಸೆಯಲಿರುವ ನಾಲ್ಕು ಓವರ್‌ಗಳು ಇಡೀ ಪಂದ್ಯದ ಫಲಿತಾಂಶದ ಮೇಲೆ ಬೀರಲಿರುವ ಪ್ರಭಾವವನ್ನು ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: ‘ಇಂಡಿಯಾ ಚಾಂಪಿಯನ್ಸ್​’ ತಂಡ ಪ್ರಕಟ

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಜಸ್​ಪ್ರೀತ್ ಬುಮ್ರಾ.

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ