AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI T20: 2ನೇ ಟಿ20ಯಿಂದ ಸ್ಟಾರ್ ಪ್ಲೇಯರ್ ಔಟ್: ಭಾರತ ಪರ ಮತ್ತೊಬ್ಬ ಆಟಗಾರ ಪದಾರ್ಪಣೆ?

India Playing XI 2nd T20 vs West Indies: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಬೌಲರ್ ಇಂಜುರಿಗೆ ತುತ್ತಾಗಿದ್ದು, ಇಂದಿನ ದ್ವಿತೀಯ ಟಿ20 ಯಲ್ಲಿ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ಭಾರತದ ಪ್ಲೇಯಿಂಗ್ XI ನಲ್ಲಿ ದೊಡ್ಡ ಬದಲಾವಣೆ ಆಗಲಿದೆ.

IND vs WI T20: 2ನೇ ಟಿ20ಯಿಂದ ಸ್ಟಾರ್ ಪ್ಲೇಯರ್ ಔಟ್: ಭಾರತ ಪರ ಮತ್ತೊಬ್ಬ ಆಟಗಾರ ಪದಾರ್ಪಣೆ?
India Playing XI vs WI 2nd T20I
TV9 Web
| Updated By: Vinay Bhat|

Updated on: Feb 18, 2022 | 9:42 AM

Share

ಏಕದಿನ ಸರಣಿಯಿಂತೆ ಟಿ20 ಸರಣಿಯನ್ನೂ ಕ್ಲೀನ್​ಸ್ವೀಪ್ ಮಾಡುವ ಯೋಜನೆಯಲ್ಲಿರುವ ಭಾರತ ಇಂದು ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ಎರಡನೇ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿಂದು ದ್ವಿತೀಯ ಚುಟುಕು ಕದನ ನಡೆಯಲಿದ್ದು, ಟೀಮ್ ಇಂಡಿಯಾ (Team India) ಸರಣಿ ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ. ಅಹ್ಮದಾಬಾದ್‌ನಲ್ಲಿ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದ್ದ ಭಾರತ ತಂಡ, 3 ಪಂದ್ಯಗಳ ಚುಟುಕು ಕ್ರಿಕೆಟ್ ಸರಣಿಯಲ್ಲಿ 1-0 ಯಿಂದ ಮುನ್ನಡೆ ಸಾಧಿಸಿದೆ. ಇತ್ತ ಕೀರೊನ್ ಪೊಲಾರ್ಡ್ ನೇತೃತ್ವದ ವೆಸ್ಟ್ ಇಂಡೀಸ್ ತಂಡ ಚೊಚ್ಚಲ ಗೆಲುವನ್ನು ಎದುರುನೋಡುತ್ತಿದೆ. ತವರು ನೆಲದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಟಿ20 ಸರಣಿಯಲ್ಲಿ ಮಣಿಸಿ ಭಾರತಕ್ಕೆ ಆಗಮಿಸಿದ್ದ ಕೆರಿಬಿಯನ್ನರ ಪ್ರದರ್ಶನ ಇಲ್ಲಿ ಮಂಕಾಗಿದ್ದು, ಇಂದಿನ ಪಂದ್ಯ ಮಹತ್ವದ್ದಾಗಿದೆ. ಇದರ ನಡುವೆ ರೋಹಿತ್ ಶರ್ಮಾ (Rohit Sharma) ಪಡೆಗೆ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಬೌಲರ್ ಇಂಜುರಿಗೆ ತುತ್ತಾಗಿದ್ದು, ಇಂದಿನ ಎರಡನೇ ಟಿ20 ಯಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಹೌದು, ಟೀಮ್ ಇಂಡಿಯಾದ ಸ್ಟಾರ್ ವೇಗಿ ದೀಪಕ್ ಚಹರ್ ಮೊದಲ ಟಿ20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಬಲಗೈಗೆ ಗಾಯಮಾಡಿಕೊಂಡಿದ್ದಾರೆ. ಹೀಗಾಗಿ ಇವರು ಇಂದಿನ ಪಂದ್ಯಕ್ಕೆ ಅನುಮಾನ ಎನ್ನಲಾಗಿದೆ. ಗುಣಮುಖರಾದರೂ ವಿಶ್ರಾಂತಿ ಬೇಕಾಗಿರುವ ಕಾರಣ ಆಡುವ ಬಳಗದಿಂದ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಅವಕಾಶಕ್ಕಾಗಿ ಕಾಯುತ್ತಿರುವ ಐಪಿಎಲ್​ನ ಸ್ಟಾರ್ ವೇಗಿ ಆವೇಶ್ ಖಾನ್​ ಸ್ಥಾನ ಪಡೆಯಬಹುದು. ಹೀಗಾದಲ್ಲಿ ಮತ್ತೊಬ್ಬ ಆಟಗಾರ ಭಾರತ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರೆ. ಮೊದಲ ಪಂದ್ಯದಲ್ಲಿ ರವಿ ಬಿಷ್ಟೋಯ್ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವನ್ನಾಡಿದ್ದರು.

ಇನ್ನುಳಿದಂತೆ ಎರಡನೇ ಟಿ20 ಪಂದ್ಯಕ್ಕೆ ಭಾರತ ತಂಡದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಲಾಗಿದೆ. ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವ ಓಪನರ್ ಇಶಾನ್ ಕಿಶನ್ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಕಳೆದ ಪಂದ್ಯದಲ್ಲೂ ಬ್ಯಾಟಿಂಗ್ ನಡೆಸಲು ಪರದಾಡಿದರು. ಹೀಗಾಗಿ ಕಣಕ್ಕಿಳಿಯಲು ತುದಿಗಾಲಿನಲ್ಲಿ ನಿಂತಿರುವ ರುತುರಾಜ್ ಗಾಯಕ್ವಾಡ್​ಗೆ ಇಂದಾದರೂ ಅವಕಾಶ ಸಿಗುತ್ತಾ ಎಂಬುದು ಕುತೂಹಲ ಕೆರಳಿಸಿದೆ. ಇದರ ಜೊತೆಗೆ ಶ್ರೇಯಸ್ ಅಯ್ಯರ್ ಅವರನ್ನೂ ಆಡುವ ಬಳಗಕ್ಕೆ ಕರೆತರುವ ಯೋಜನೆ ಭಾರತ ತಂಡದಲ್ಲಿದೆ ಎನ್ನಲಾಗಿದೆ. ಹೀಗಾದಲ್ಲಿ ಯಾರನ್ನ ಕೈಬಿಡಬಿಹುದು ಎಂಬುದು ನೋಡಬೇಕಿದೆ.

ವೆಂಕಟೇಶ್ ಅಯ್ಯರ್ ಕೂಡ ಮೊದಲ ಟಿ20 ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದರು. ಅರ್ಧದಲ್ಲೇ ಫಿಲ್ಡಿಂಗ್ ಮಾಡಲು ಸಾಧ್ಯವಾಗದೆ ಎದ್ದು ಹೋಗಿದ್ದರು. ಅಲ್ಲದೆ ಇವರ ಕಡೆಯಿಂದ ಭಾರತಕ್ಕೆ ದೊಡ್ಡ ಮಟ್ಟದ ಪ್ರಯೋಜನ ಸಿಗುತ್ತಿಲ್ಲ. ಹೀಗಾಗಿ ಇವರ ಜಾಗದಲ್ಲಿ ದೀಪಕ್ ಹೂಡಾಗೆ ಅವಕಾಶ ನೀಡ್ತಾರ ಅಥವಾ ಶ್ರೇಯಸ್ ಅಯ್ಯರ್​​ ಅವರನ್ನು ಕಣಕ್ಕಿಳಿಸುವ ಬಗ್ಗೆ ಮ್ಯಾನೇಜ್ಮೆಂಟ್ ತೀರ್ಮಾನ ಕೈಗೊಳ್ಳಲಿದೆ.

ಇತ್ತ ಗಾಯದ ಸಮಸ್ಯೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವಿಶ್ರಾಂತಿಯಲ್ಲಿದ್ದ ಜೇಸನ್ ಹೋಲ್ಡರ್ ಇಂದಿನ ಎರಡನೇ ಟಿ20 ಪಂದ್ಯದ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜೇಸನ್ ಬಂದರೆ ರೋಸ್ಟನ್ ಚೇಸ್ ಅಥವಾ ಅಕೀಲ್ ಹೊಸೀನ್ ಹೊರಗುಳಿಯಲಿದ್ದಾರೆ. ಉಳಿದಂತೆ ಬೌಲಿಂಗ ಪಡೆಯಲ್ಲಿ ಇನ್ನೂ ಕೆಲ ಬದಲಾವಣೆ ನಿರೀಕ್ಷಿಸಲಾಗಿದೆ. ನಿಕೋಲಸ್ ಪೂರನ್ ಫಾರ್ಮ್​ಗೆ ಬಂದಿರುವುದು ಕೆರಿಬಿಯನ್ನರ ಮೊಗದಲ್ಲಿ ಮಂದಹಾಸ ಮೂಡಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI:

ಇಶಾನ್ ಕಿಶನ್/ ರುತುರಾಜ್ ಗಾಯಕ್ವಾಡ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಟೋಯ್, ಯುಜ್ವೇಂದ್ರ ಚಹಲ್, ಆವೇಶ್ ಖಾನ್.

IND vs WI T20: ಇಂದು ಭಾರತ- ವೆಸ್ಟ್ ಇಂಡೀಸ್ ಎರಡನೇ ಟಿ20: ಸರಣಿ ವಶಪಡಸಿಕೊಳ್ಳುವತ್ತ ರೋಹಿತ್ ಚಿತ್ತ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್