AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಮೂರನೇ ಟೆಸ್ಟ್​ಗೆ ಟೀಮ್ ಇಂಡಿಯಾದಲ್ಲಿ ಈ ಒಂದು ಬದಲಾವಣೆ ಖಚಿತ!

R Ashwin: ಇಂಗ್ಲೆಂಡ್ ವಾತಾವರಣದಲ್ಲಿ ಓರ್ವ ಸ್ಪಿನ್ ಬೌಲರ್ ತಂಡದಲ್ಲಿದ್ದರೆ ಸಾಕು ಎಂಬ ಕಾರಣಕ್ಕೆ ಮೊದಲೆರಡು ಟೆಸ್ಟ್ ಪಂದ್ಯದಿಂದ ರವಿಚಂದ್ರನ್ ಅಶ್ವಿನ್ ಅವರನ್ನು ಹೊರಗಿಟ್ಟು ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡುವ ರವೀಂದ್ರ ಜಡೇಜಾಗೆ ಆಡುವ ಅವಕಾಶವನ್ನು ನೀಡಲಾಗಿತ್ತು.

India vs England: ಮೂರನೇ ಟೆಸ್ಟ್​ಗೆ ಟೀಮ್ ಇಂಡಿಯಾದಲ್ಲಿ ಈ ಒಂದು ಬದಲಾವಣೆ ಖಚಿತ!
ಅದರಂತೆ ಓವಲ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾದಲ್ಲಿ 1 ಅಥವಾ 2 ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಇನ್ನು ಕೆಎಲ್ ರಾಹುಲ್ ಕೀಪಿಂಗ್ ಮಾಡಲು ಒಪ್ಪಿದರೆ ಪಂತ್ ಸ್ಥಾನ ಕಳೆದುಕೊಳ್ಳಲಿದ್ದಾರೆ. ಅವರ ಜಾಗದಲ್ಲಿ ಸೂರ್ಯಕುಮಾರ್ ಯಾದವ್ ಅಥವಾ ಹನುಮ ವಿಹಾರಿ ಸ್ಥಾನಗಿಟ್ಟಿಸಿಕೊಳ್ಳಬಹುದು.
TV9 Web
| Updated By: Vinay Bhat

Updated on: Aug 22, 2021 | 9:28 AM

Share

ಕ್ರಿಕೆಟ್ ರಂಗದ ಘಟಾನುಘಟಿಗಳ ತಂಡ ಭಾರತ- ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್​ ಪಂದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಐದು ಪಂದ್ಯಗಳ ಟೆಸ್ಟ್​ನಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ (Team India) ಆಂಗ್ಲರ ನಾಡಿನಲ್ಲಿ ಸರಣಿ ಗೆಲ್ಲುವ ನೆಚ್ಚಿನ ತಂಡವಾಗಿ ಹೊರಮೊಹಮ್ಮಿದೆ. ಆಗಸ್ಟ್ 25 ಬುಧವಾರದಿಂದ ಲೀಡ್ಸ್​ನಲ್ಲಿ ಬಹುನಿರೀಕ್ಷಿತ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯಕ್ಕೆ ಕೊಹ್ಲಿ ಪಡೆಯಲ್ಲಿ ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ.

ಎರಡನೇ ಟೆಸ್ಟ್​ ಪಂದ್ಯದ ಕೊನೇ ಕ್ಷಣದಲ್ಲಿ ಅವಕಾಶ ಕೈತಪ್ಪಿದ್ದ ರವಿಚಂದ್ರನ್ ಅಶ್ವಿನ್ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ರವೀಂದ್ರ ಜಡೇಜಾ ಆಡಿದ ಎರಡೂ ಟೆಸ್ಟ್​ನಲ್ಲಿ ಒಂದೇ ಒಂದು ವಿಕೆಟ್ ಪಡೆದಿಲ್ಲ. ಇದು ಅಶ್ವಿನ್​ಗೆ ಬಹುದೊಡ್ಡ ಪ್ಲಸ್ ಪಾಯಿಂಟ್ ಆಗಿದೆ.

ಮೊದಲ ಟೆಸ್ಟ್​ನಲ್ಲಿ 16 ಓವರ್ ಬೌಲಿಂಗ್ ಮಾಡಿದ್ದ ಜಡ್ಡು 3.30 ರನ್​ರೇಟ್ ನೀಡಿದ ಒಂದು ವಿಕೆಟ್ ಕೂಡ ಪಡೆದಿರಲಿಲ್ಲ. ಎರಡನೇ ಟೆಸ್ಟ್​ನಲ್ಲೂ 28 ಓವರ್ ಬೌಲಿಂಗ್ ಮಾಡಿ 48 ರನ್ ನೀಡಿದರೂ ವಿಕೆಟ್ ಕೀಳಲು ಯಶಸ್ವಿಯಾಗಿಲ್ಲ. ಬ್ಯಾಟಿಂಗ್​ನಲ್ಲಿ ಸಾಮರ್ಥ್ಯ ಹೊಂದಿರುವ ಜಡೇಜಾ ಈ ಬಾರಿ ಬೌಲಿಂಗ್​ನಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.

ಇಂಗ್ಲೆಂಡ್ ವಾತಾವರಣದಲ್ಲಿ ಓರ್ವ ಸ್ಪಿನ್ ಬೌಲರ್ ತಂಡದಲ್ಲಿದ್ದರೆ ಸಾಕು ಎಂಬ ಕಾರಣಕ್ಕೆ ಮೊದಲೆರಡು ಟೆಸ್ಟ್ ಪಂದ್ಯದಿಂದ ರವಿಚಂದ್ರನ್ ಅಶ್ವಿನ್ ಅವರನ್ನು ಹೊರಗಿಟ್ಟು ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡುವ ರವೀಂದ್ರ ಜಡೇಜಾಗೆ ಆಡುವ ಅವಕಾಶವನ್ನು ನೀಡಲಾಗಿತ್ತು. ಆದರೆ ಇದೀಗ ಇದೀಗ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾರನ್ನು ತಂಡದಿಂದ ಹೊರಗಿಟ್ಟು ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಅವಕಾಶವನ್ನು ನೀಡುವ ಸಾಧ್ಯತೆಗಳು ಹೆಚ್ಚಿವೆ.

ಅಲ್ಲದೆ ಅಶ್ವಿನ್ ಅವರನ್ನು ಮೊದಲೆರಡು ಪಂದ್ಯಗಳಲ್ಲಿ ತಂಡಕ್ಕೆ ಸೇರಿಸಿಕೊಳ್ಳದೇ ಕೈಬಿಟ್ಟಿದ್ದರ ಕುರಿತು ಭಾರತದ ಕ್ರೀಡಾಭಿಮಾನಿಗಳು ಮಾತ್ರವಲ್ಲದೆ ಹಲವಾರು ಕ್ರೀಡಾ ಪಂಡಿತರು ಮತ್ತು ಮಾಜಿ ಆಟಗಾರರಿಂದಲೂ ಮಾತುಗಳು ಕೇಳಿಬಂದಿದ್ದವು. ಜೊತೆಗೆ ಸ್ವತಃ ಅಶ್ವಿನ್ ಅವರೇ ಬೇಸರ ಹೊರಹಾಕಿದ್ದರು.

“ಎಲ್ಲಾ ಸರಿ ಹೋಗಿದ್ದರೆ ನಾನು ಎರಡನೇ ಟೆಸ್ಟ್ ಪಂದ್ಯವಾಡಬೇಕಿತ್ತು. ಆದರೆ ಕೊನೆ ಗಳಿಗೆಯಲ್ಲಿ ಅದು ಕೈ ತಪ್ಪಿಹೋಯ್ತು. ಇದಕ್ಕೆ ಕಾರಣ ಮಳೆ ಎಂದು ಅಶ್ವಿನ್ ಹೇಳಿದರು. ಎರಡನೇ ಟೆಸ್ಟ್ ಆಡುವ ಕೆಲವೇ ಕ್ಷಣಗಳ ಮೊದಲು ಬಿಸಿಲಿತ್ತು. ಆಗ ಒಣಗಾಳಿಯಿದೆ. ಈವತ್ತು ನೀವು ಆಡುತ್ತೀರಿ ಎಂದು ನನಗೆ ಹೇಳಿದ್ದರು. ನಾನು ಇನ್ನೇನು ಸಿದ್ಧರಾಗಬೇಕು ಎನ್ನುವಾಗ ಮಳೆ ಬಂತು. ಎಲ್ಲವೂ ಉಲ್ಟಾ ಆಯ್ತು. ಮಳೆಯಿಂದಾಗಿ ನನ್ನ ಅವಕಾಶ ಹೋಯಿತು ಎಂದು ಹೇಳಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಆಗಮನದಿಂದಾಗಿ ಯಾವುದೇ ಫಲಿತಾಂಶವಿಲ್ಲದೇ ನೀರಸ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 151 ರನ್‌ಗಳ ಭರ್ಜರಿ ಗೆಲುವನ್ನು ಸಾಧಿಸಿತು. ಸದ್ಯ ಆಗಸ್ಟ್ 25ರಂದು ಲೀಡ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಉಭಯ ತಂಡಗಳು ಅಭ್ಯಾಸದಲ್ಲಿ ನಿರತವಾಗಿದೆ.

The Hundred Final: ಚೊಚ್ಚಲ ದಿ ಹಂಡ್ರೆಡ್ ಸೀಸನ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಸೌಥರ್ನ್ ಬ್ರೇವ್ ತಂಡ

Wanindu Hasaranga: ಆರ್​ಸಿಬಿ ತಂಡ ಸೇರಿದ ತಕ್ಷಣ ವನಿಂದು ಹಸರಂಗ ನೀಡಿದ ಪ್ರತಿಕ್ರಿಯೆ ನೋಡಿ

(India Playing XI 3rd Test R Ashwin likely to make a comeback replacing Ravindra Jadeja )

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು