AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 6 ಎಡಗೈ ದಾಂಡಿಗರು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 8 ಪಂದ್ಯಗಳ ಸರಣಿಯು ನಾಳೆಯಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ 5 ಮ್ಯಾಚ್​ಗಳ ಟಿ20 ಸಿರೀಸ್ ನಡೆಯಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಜರುಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

IND vs ENG: 6 ಎಡಗೈ ದಾಂಡಿಗರು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India Image Credit source: GettyImages
ಝಾಹಿರ್ ಯೂಸುಫ್
|

Updated on: Jun 30, 2026 | 3:06 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ಜುಲೈ 1 ರಿಂದ ಶುರುವಾಗಲಿದೆ. ಚೆಸ್ಟರ್-ಲೆ-ಸ್ಟ್ರೀಟ್ ರಿವರ್​ ಸೈಡ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಈ ಪ್ಲೇಯಿಂಗ್ ಇಲೆವೆನ್​​ನಲ್ಲಿ 6 ಎಡಗೈ ದಾಂಡಿಗರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಏಕೆಂದರೆ ಟೀಮ್ ಇಂಡಿಯಾದಲ್ಲಿ ಎಡಗೈ ದಾಂಡಿಗರ ದಂಡೇ ಇದ್ದು, ಈ ದಂಡಿಗೆ ವೈಭವ್ ಸೂರ್ಯವಂಶಿ ಕೂಡ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ. ಅಂದರೆ ಐರ್ಲೆಂಡ್ ವಿರುದ್ಧದ 2 ಪಂದ್ಯಗಳಲ್ಲಿ ಸಂಪೂರ್ಣ ವಿಫಲರಾಗಿದ್ದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟು ವೈಭವ್ ಸೂರ್ಯವಂಶಿಯನ್ನು ಆರಂಭಿಕನಾಗಿ ಕಣಕ್ಕಿಳಿಸಬಹುದು.

ಆರು ಎಡಗೈ ದಾಂಡಿಗರು:

ವೈಭವ್ ಸೂರ್ಯವಂಶಿಯನ್ನು ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ಗೆ ಸೇರಿಸಿದರೆ ಆಡುವ ಬಳಗದಲ್ಲಿ 6 ಮಂದಿ ಲೆಫ್ಟ್ ಹ್ಯಾಂಡ್​ ಬ್ಯಾಟರ್​ಗಳು ಕಾಣಿಸಿಕೊಳ್ಳಬಹುದು. ಅವರೆಂದರೆ…

  1. ವೈಭವ್ ಸೂರ್ಯವಂಶಿ
  2. ಅಭಿಷೇಕ್ ಶರ್ಮಾ
  3. ಇಶಾನ್ ಕಿಶನ್
  4. ತಿಲಕ್ ವರ್ಮಾ
  5. ಶಿವಂ ದುಬೆ
  6. ಅಕ್ಷರ್ ಪಟೇಲ್

ಒಂದು ವೇಳೆ ಅಕ್ಷರ್ ಪಟೇಲ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವರನ್ನು ಆಲ್​ರೌಂಡರ್ ಆಗಿ ಕಣಕ್ಕಿಳಿಸಿದರೆ ಅವರು ಕೂಡ ಎಡಗೈ ದಾಂಡಿಗ ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಂದರೆ ಸಂಜು ಸ್ಯಾಮ್ಸನ್ ಅವರನ್ನು ಆಡುವ ಬಳಗದಿಂದ ಕೈ ಬಿಟ್ಟರೆ ಶ್ರೇಯಸ್ ಅಯ್ಯರ್ ಮಾತ್ರ ಬಲಗೈ ದಾಂಡಿಗನಾಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಎಡಗೈ ಪ್ರಯೋಗ ನಡೆಸಲಿದೆಯಾ ಎಂಬುದೇ ಈಗ ಕುತೂಹಲ.

ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11?

ಮೊದಲ ತಿಳಿಸಿದಂತೆ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಈ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಆಡಿದರೆ, ಐದನೇ ಕ್ರಮಾಂಕದಲ್ಲಿ ಉಪನಾಯಕ ತಿಲಕ್ ವರ್ಮಾ ಬ್ಯಾಟ್ ಬೀಸಲಿದ್ದಾರೆ. ಇನ್ನು ಆಲ್​ರೌಂಡರ್​ಗಳಾಗಿ ಶಿವಂ ದುಬೆ, ಅಕ್ಷರ್ ಪಟೇಲ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು.

ಬೌಲರ್​ಗಳಾಗಿ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್ ಇರಲಿದ್ದು, ಇವರೊಂದಿಗೆ ಪರಿಪೂರ್ಣ ಸ್ಪಿನ್ನರ್​ನ ಕಣಕ್ಕಿಳಿಸಲು ಮುಂದಾದರೆ ರವಿ ಬಿಷ್ಣೋಯ್​ಗೆ ಚಾನ್ಸ್ ಸಿಗಲಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  •  ಅಭಿಷೇಕ್ ಶರ್ಮಾ (ಆರಂಭಿಕ ಬ್ಯಾಟರ್)
  • ವೈಭವ್ ಸೂರ್ಯವಂಶಿ (ಆರಂಭಿಕ ಬ್ಯಾಟರ್)
  •  ಇಶಾನ್ ಕಿಶನ್ (ವಿಕೆಟ್ ಕೀಪರ್)
  • ಶ್ರೇಯಸ್ ಅಯ್ಯರ್ (ನಾಯಕ)
  •  ತಿಲಕ್ ವರ್ಮಾ (ಉಪನಾಯಕ)
  •  ಶಿವಂ ದುಬೆ (ಆಲ್ ರೌಂಡರ್)
  •  ಅಕ್ಷರ್ ಪಟೇಲ್ (ಆಲ್ ರೌಂಡರ್)
  •  ರವಿ ಬಿಷ್ಣೋಯ್ (ಸ್ಪಿನ್ನರ್)
  • ಹರ್ಷಿತ್ ರಾಣಾ (ವೇಗದ ಬೌಲರ್)
  •  ಅರ್ಷದೀಪ್ ಸಿಂಗ್ (ವೇಗದ ಬೌಲರ್)
  • ಪ್ರಿನ್ಸ್ ಯಾದವ್ (ವೇಗದ ಬೌಲರ್)

ಇದನ್ನೂ ಓದಿ: IND vs ENG ಟಿ20 ಸರಣಿ ಎಷ್ಟು ಗಂಟೆಗೆ ಶುರು? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!