AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಷ್ಠ ದಾಂಡಿಗರ ದಂಡು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Ireland T20: ಭಾರತ ಮತ್ತು ಐರ್ಲೆಂಡ್ ನಡುವಣ ಟಿ20 ಸರಣಿಗೆ ವೇದಿಕೆ ಸಿದ್ಧವಾಗಿದೆ. ಐರ್ಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಯ ಮೂಲಕ ನಾಯಕನಾಗಿ ಶ್ರೇಯಸ್ ಅಯ್ಯರ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಹಾಗೆಯೇ ವೈಭವ್ ಸೂರ್ಯವಂಶಿ 15ನೇ ವಯಸ್ಸಿನಲ್ಲೇ ಭಾರತದ ಪರ ಕಣಕ್ಕಿಳಿಯುವ ಮೂಲಕ ಹೊಸ ಇತಿಹಾಸ ನಿರ್ಮಿಸಲು ತುದಿಗಾಲಲ್ಲಿ ನಿಂತಿದ್ದಾರೆ.

ಬಲಿಷ್ಠ ದಾಂಡಿಗರ ದಂಡು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team IndiaImage Credit source: Sportswiki
ಝಾಹಿರ್ ಯೂಸುಫ್
|

Updated on:Jun 25, 2026 | 3:04 PM

Share

ಐರ್ಲೆಂಡ್ ಮತ್ತು ಭಾರತ ನಡುವಣ 2 ಪಂದ್ಯಗಳ ಟಿ20 ಸರಣಿಯು ನಾಳೆಯಿಂದ (ಜೂ. 26) ಶುರುವಾಗಲಿದೆ. ಬೆಲ್​ಫಾಸ್ಟ್​ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಶ್ರೇಯಸ್ ಅಯ್ಯರ್ ಭಾರತ ಟಿ20 ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ. ಹಾಗೆಯೇ ಈ ಮ್ಯಾಚ್​ ಮೂಲಕ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಕೂಡ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ.

ಅದರಂತೆ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು. ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿದರೆ, ವಿಕೆಟ್ ಕೀಪರ್ ಬ್ಯಾಟರ್ ಆಗಿ ಸಂಜು ಸ್ಯಾಮ್ಸನ್ ನಾಲ್ಕನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಹೆಚ್ಚು.

ಹಾಗೆಯೇ ಐದನೇ ಕ್ರಮಾಂಕದಲ್ಲಿ ಉಪನಾಯಕ ತಿಲಕ್ ವರ್ಮಾ ಕಣಕ್ಕಿಳಿದರೆ, ಆಲ್​ರೌಂಡರ್​ಗಳಾಗಿ ಶಿವಂ ದುಬೆ, ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಈ ಸರಣಿಯಿಂದ ಗಾಯದ ಕಾರಣ ಹಾರ್ದಿಕ್ ಪಾಂಡ್ಯ ಹಾಗೂ ನಿತೀಶ್ ಕುಮಾರ್ ರೆಡ್ಡಿ ಹೊರಗುಳಿದಿದ್ದಾರೆ. ಹೀಗಾಗಿ ಸೂರ್ಯಂಶ್ ಶೆಡ್ಗೆ ಈ ಪಂದ್ಯದ ಮೂಲಕ ಪಾದಾರ್ಪಣೆ ಮಾಡುವುದನ್ನು ಎದುರು ನೋಡಬಹುದು.

ಬೌಲರ್​ಗಳಾಗಿ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಕಾಣಿಸಿಕೊಳ್ಳುವುದು ಖಚಿತ. ಇವರೊಂದಿಗೆ ಸ್ಪಿನ್ನರ್ ಆಗಿ ರವಿ ಬಿಷ್ಣೋಯ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ಅಭಿಷೇಕ್ ಶರ್ಮಾ
  2. ವೈಭವ್ ಸೂರ್ಯವಂಶಿ
  3. ಶ್ರೇಯಸ್ ಅಯ್ಯರ್ (ನಾಯಕ)
  4. ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  5. ತಿಲಕ್ ವರ್ಮಾ (ಉಪನಾಯಕ)
  6. ಶಿವಂ ದುಬೆ
  7. ಅಕ್ಷರ್ ಪಟೇಲ್
  8. ಸೂರ್ಯಂಶ್ ಶೆಡ್ಗೆ
  9. ಅರ್ಷದೀಪ್ ಸಿಂಗ್
  10. ಹರ್ಷಿತ್ ರಾಣಾ
  11. ರವಿ ಬಿಷ್ಣೋಯ್.

ಇದನ್ನೂ ಓದಿ: ವೈಭವ್ ಶತಕ ಬಾರಿಸಿದ್ರೆ ಬೆತ್ತಲಾಗುವೆ: ಪಾಕ್ ಮಾಜಿ ಕ್ರಿಕೆಟಿಗನ ಸವಾಲು!

ಭಾರತ ಟಿ20 ತಂಡ:  ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Published On - 3:04 pm, Thu, 25 June 26

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ