AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ..!

India vs South Africa: ಜನವರಿ 3 ರಿಂದ ಶುರುವಾಗಲಿರುವ 2ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಡ್ರಾ ಸಾಧಿಸಿದರೂ ಸರಣಿ ಗೆಲ್ಲಬಹುದು. ಇತ್ತ ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಳ್ಳಬೇಕಿದ್ದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕು.

IND vs SA: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ..!
Team India
TV9 Web
| Edited By: |

Updated on: Dec 30, 2023 | 10:59 AM

Share

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ಭಾರತ ತಂಡವು ಇದೀಗ 2ನೇ ಮ್ಯಾಚ್​ಗಾಗಿ ಸಜ್ಜಾಗುತ್ತಿದೆ. ಈ ಪಂದ್ಯವು ಟೀಮ್ ಇಂಡಿಯಾ (Team India) ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಏಕೆಂದರೆ 2 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಇನಿಂಗ್ಸ್ ಹಾಗೂ 32 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಜನವರಿ 3 ರಿಂದ ಶುರುವಾಗಲಿರುವ 2ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಡ್ರಾ ಸಾಧಿಸಿದರೂ ಸರಣಿ ಗೆಲ್ಲಬಹುದು. ಇತ್ತ ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಳ್ಳಬೇಕಿದ್ದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕು. ಹೀಗಾಗಿ ಈ ಪಂದ್ಯದಲ್ಲಿ ಭಾರತ ತಂಡವು 2 ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಏಕೆಂದರೆ ಮೊದಲ ಪಂದ್ಯದಲ್ಲಿ ಆಡಿದ್ದ ರವಿಚಂದ್ರನ್ ಅಶ್ವಿನ್ ಕೇವಲ 1 ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಅವರನ್ನು 2ನೇ ಪಂದ್ಯದಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಇನ್ನು ಬೆನ್ನು ನೋವಿನ ಕಾರಣ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯದ ರವೀಂದ್ರ ಜಡೇಜಾ ಅಶ್ವಿನ್ ಸ್ಥಾನದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ.

ಹಾಗೆಯೇ ಮೊದಲ ಮ್ಯಾಚ್​ ಮೂಲಕ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ಕರ್ನಾಟಕದ ವೇಗಿ ಪ್ರಸಿದ್ಧ್​ ಕೃಷ್ಣ ಅವರನ್ನು ಕೂಡ ಆಡುವ ಬಳಗದಿಂದ ಕೈ ಬಿಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ 20 ಓವರ್​ಗಳನ್ನು ಬೌಲಿಂಗ್ ಮಾಡಿದ್ದರೂ ಪ್ರಸಿದ್ಧ್​ ಕೃಷ್ಣ ಪಡೆದಿದ್ದು ಕೇವಲ 1 ವಿಕೆಟ್ ಮಾತ್ರ. ಇದೇ ವೇಳೆ 93 ರನ್​ಗಳನ್ನು ಬಿಟ್ಟು ಕೊಟ್ಟಿದ್ದರು. ಹೀಗಾಗಿ ಪ್ರಸಿದ್ಧ್​ಗೂ ದ್ವಿತೀಯ ಟೆಸ್ಟ್​ನಲ್ಲಿ ಸ್ಥಾನ ಸಿಗುವುದು ಅನುಮಾನ.

ಇಲ್ಲಿ ಪ್ರಸಿದ್ಧ್ ಕೃಷ್ಣ ಬದಲಿಗೆ ಮುಕೇಶ್ ಕುಮಾರ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗಬಹುದು. ಈ ಎರಡು ಬದಲಾವಣೆಯೊಂದಿಗೆ ಕೇಪ್​ಟೌನ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುವ ಸಾಧ್ಯತೆಯಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್.

ಇದನ್ನೂ ಓದಿ: Virat Kohli: ಟಾಪ್-4 ಗೆ ವಿರಾಟ್ ಕೊಹ್ಲಿ ಎಂಟ್ರಿ..!

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್,  ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ