AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ!

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿವೆ. ಮೊದಲ ಮ್ಯಾಚ್ ಮಳೆಗೆ ಆಹುತಿಯಾದರೆ, ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಸಜ್ಜಾಗಿ ನಿಂತಿದೆ.

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ!
Team IndiaImage Credit source: BCCI
ಝಾಹಿರ್ ಯೂಸುಫ್
|

Updated on: Jul 06, 2026 | 3:11 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟಿ20 ಪಂದ್ಯ ನಾಳೆ (ಜು.7) ನಡೆಯಲಿದೆ. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬಿಡ್ಜ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ,. ಏಕೆಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸ್ಪಿನ್ನರ್ ರವಿ ಬಿಷ್ಣೋಯ್ ದುಬಾರಿಯಾಗಿದ್ದರು.

ಮ್ಯಾಚೆಂಸ್ಟರ್​ನಲ್ಲಿ ನಡೆದ ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಬಿಷ್ಣೋಯ್ ಬರೋಬ್ಬರಿ 60 ರನ್ ನೀಡಿದ್ದರು. ಅದರಲ್ಲೂ ನಿರ್ಣಾಯಕ ಹಂತದಲ್ಲಿ ನೀಡಿದ 29 ರನ್​ಗಳು ಇಡೀ ಪಂದ್ಯದ ಚಿತ್ರಣ ಬದಲಿಸಿತು. ಪರಿಣಾಮ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಸೋಲನುಭವಿಸಿದ್ದರು.

ಇದೀಗ ಗೆಲುವಿನ ಲಯಕ್ಕೆ ಮರಳುವ ಇರಾದೆಯೊಂದಿಗೆ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ರವಿ ಬಿಷ್ಣೋಯ್ ಅವರನ್ನು ಕೈ ಬಿಟ್ಟು, ಅವರ ಬದಲಿಗೆ ಹೆಚ್ಚುವರಿ ವೇಗಿಯನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಅದರಂತೆ 3ನೇ ಪಂದ್ಯದಲ್ಲಿ ಪ್ರಿನ್ಸ್ ಯಾದವ್ ಅಥವಾ ಪ್ರಸಿದ್ಧ್ ಕೃಷ್ಣಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

ಹೇಗಿರಲಿದೆ ಪ್ಲೇಯಿಂಗ್ 11?

ಈ ಪಂದ್ಯದಲ್ಲೂ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಿದರೆ, ಐದನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಬ್ಯಾಟ್ ಬೀಸಲಿದ್ದಾರೆ. ಇನ್ನು ಆಲ್​ರೌಂಡರ್​ಗಳಾಗಿ ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ.

ವೇಗಿಗಳಾಗಿ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಹಾಗೂ ಪ್ರಿನ್ಸ್ ಯಾದವ್ ಕಣಕ್ಕಿಳಿದರೆ, ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ವೈಭವ್ ಸೂರ್ಯವಂಶಿ
  2. ಅಭಿಷೇಕ್ ಶರ್ಮಾ
  3. ಇಶಾನ್ ಕಿಶನ್ (ವಿಕೆಟ್ ಕೀಪರ್)
  4. ಶ್ರೇಯಸ್ ಅಯ್ಯರ್ (ನಾಯಕ)
  5. ತಿಲಕ್ ವರ್ಮಾ
  6. ಶಿವಂ ದುಬೆ
  7. ಹರ್ಷಿತ್ ರಾಣಾ
  8. ಅಕ್ಷರ್ ಪಟೇಲ್
  9. ಅರ್ಷದೀಪ್ ಸಿಂಗ್
  10. ಪ್ರಿನ್ಸ್ ಯಾದವ್
  11. ವರುಣ್ ಚಕ್ರವರ್ತಿ.

ಇದನ್ನೂ ಓದಿ: ಹೊಸ ವಿವಾದ… ಟ್ರಂಪ್ ಫೋನ್ ಕರೆ ಬೆನ್ನಲ್ಲೇ ಅಮೆರಿಕ ಆಟಗಾರನ ನಿಷೇಧ ರದ್ದು!

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Follow Us
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ