AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸಂಜು ಸ್ಯಾಮ್ಸನ್ ಔಟ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಉಭಯ ತಂಡಗಳು ಗೆಲುವು ದಾಖಲಿಸಿದೆ. ಇದೀಗ ನಾಲ್ಕನೇ ಪಂದ್ಯಕ್ಕಾಗಿ ಎರಡು ತಂಡಗಳು ಸಜ್ಜಾಗಿದ್ದು, ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

IND vs AUS: ಸಂಜು ಸ್ಯಾಮ್ಸನ್ ಔಟ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
ಝಾಹಿರ್ ಯೂಸುಫ್
|

Updated on:Nov 06, 2025 | 7:59 AM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟಿ20 ಪಂದ್ಯ ನಾಳೆ (ನ.6) ನಡೆಯಲಿದೆ. ಕ್ವೀನ್ಸ್​ಲ್ಯಾಂಡ್​ನ ಕ್ಯಾರೆರಾ ಓವಲ್​ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಏಕೆಂದರೆ ಈ ಮ್ಯಾಚ್ ಭಾರತದ ಪಾಲಿಗೆ ನಿರ್ಣಾಯಕ.

ಅಂದರೆ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ ರದ್ದಾಗಿರುವ ಕಾರಣ ಇದೀಗ ಉಭಯ ತಂಡಗಳು ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. ಇದೀಗ ನಾಲ್ಕನೇ ಮ್ಯಾಚ್​ನಲ್ಲಿ ಗೆದ್ದರೆ ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು. ಅಲ್ಲದೆ ಕೊನೆಯ ಪಂದ್ಯದಲ್ಲಿ ಜಯಗಳಿಸಿ ಸರಣಿಯನ್ನು ಜಯಿಸಬಹುದು. ಹೀಗಾಗಿ ನಾಳಿನ ಪಂದ್ಯವು ಉಭಯ ತಂಡಗಳ ಪಾಲಿಗೆ ಸರಣಿ ನಿರ್ಣಾಯಕವಾಗಿದೆ.

ಈ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದ ಬಳಗವನ್ನೇ ಮತ್ತೆ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೋಬಾರ್ಟ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತ್ತು. ಹೀಗಾಗಿ ಇದೇ ಬಳಗವನ್ನೇ ಗೋಲ್ಡ್​ ಕೋಸ್ಟ್​ನಲ್ಲೂ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

ಇದರಿಂದಾಗಿ 4ನೇ ಟಿ20 ಪಂದ್ಯದಿಂದ ಸಂಜು ಸ್ಯಾಮ್ಸನ್ ಹಾಗೂ ಹರ್ಷಿತ್ ರಾಣಾ ಹೊರಗುಳಿಯಬೇಕಾಗಿ ಬರಬಹುದು. ಏಕೆಂದರೆ ಈ ಇಬ್ಬರನ್ನು 3ನೇ ಟಿ20 ಪಂದ್ಯದಿಂದ ಹೊರಗಿಡಲಾಗಿತ್ತು. ಇವರ ಬದಲಿಗೆ ಜಿತೇಶ್ ಶರ್ಮಾ ಹಾಗೂ ಅರ್ಷದೀಪ್ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿತ್ತು. ಇವರನ್ನೇ 4ನೇ ಟಿ20 ಪಂದ್ಯದಲ್ಲೂ ಮುಂದುವರೆಸುವ ಸಾಧ್ಯತೆ ಹೆಚ್ಚು. ಅದರಂತೆ  ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

ಭಾರತ ಪ್ಲೇಯಿಂಗ್ 11: ಶುಭ್​​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್.

ಇದನ್ನೂ ಓದಿ: ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

Published On - 1:24 pm, Wed, 5 November 25

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಹಲವು ವಾಹನಗಳಿಗೆ ಗುದ್ದಿದ ಕಂಟೇನರ್
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಹಲವು ವಾಹನಗಳಿಗೆ ಗುದ್ದಿದ ಕಂಟೇನರ್
ಕ್ಯಾಪ್ಟನ್ ರಘು ಟಾರ್ಚರ್​ಗೆ ಹೈರಾಣಾದ ಗಿಲ್ಲಿ ನಟ
ಕ್ಯಾಪ್ಟನ್ ರಘು ಟಾರ್ಚರ್​ಗೆ ಹೈರಾಣಾದ ಗಿಲ್ಲಿ ನಟ
ದೆಹಲಿ ಸ್ಫೋಟಕ್ಕೆ ಕಾರಣನಾಗಿದ್ದ ಡಾ. ಉಮರ್ ನಬಿ ಮನೆ ರಾತ್ರೋರಾತ್ರಿ ನೆಲಸಮ
ದೆಹಲಿ ಸ್ಫೋಟಕ್ಕೆ ಕಾರಣನಾಗಿದ್ದ ಡಾ. ಉಮರ್ ನಬಿ ಮನೆ ರಾತ್ರೋರಾತ್ರಿ ನೆಲಸಮ
Daily Devotional: ಮನೆಯಲ್ಲಿ ಬಾತ್ರೂಮ್ ವಾಸ್ತು ಸಹ ಮುಖ್ಯ ಯಾಕೆ ಗೊತ್ತಾ?
Daily Devotional: ಮನೆಯಲ್ಲಿ ಬಾತ್ರೂಮ್ ವಾಸ್ತು ಸಹ ಮುಖ್ಯ ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಎಲ್ಲವನ್ನೂ ಬಿಟ್ಟುಕೊಡುವ ಮನೋಭಾವ ಬರಲಿದೆ
ಇಂದು ಈ ರಾಶಿಯವರಿಗೆ ಎಲ್ಲವನ್ನೂ ಬಿಟ್ಟುಕೊಡುವ ಮನೋಭಾವ ಬರಲಿದೆ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ