AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸಂಜು ಸ್ಯಾಮ್ಸನ್ ಔಟ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಉಭಯ ತಂಡಗಳು ಗೆಲುವು ದಾಖಲಿಸಿದೆ. ಇದೀಗ ನಾಲ್ಕನೇ ಪಂದ್ಯಕ್ಕಾಗಿ ಎರಡು ತಂಡಗಳು ಸಜ್ಜಾಗಿದ್ದು, ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

IND vs AUS: ಸಂಜು ಸ್ಯಾಮ್ಸನ್ ಔಟ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
ಝಾಹಿರ್ ಯೂಸುಫ್
|

Updated on:Nov 06, 2025 | 7:59 AM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟಿ20 ಪಂದ್ಯ ನಾಳೆ (ನ.6) ನಡೆಯಲಿದೆ. ಕ್ವೀನ್ಸ್​ಲ್ಯಾಂಡ್​ನ ಕ್ಯಾರೆರಾ ಓವಲ್​ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಏಕೆಂದರೆ ಈ ಮ್ಯಾಚ್ ಭಾರತದ ಪಾಲಿಗೆ ನಿರ್ಣಾಯಕ.

ಅಂದರೆ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ ರದ್ದಾಗಿರುವ ಕಾರಣ ಇದೀಗ ಉಭಯ ತಂಡಗಳು ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. ಇದೀಗ ನಾಲ್ಕನೇ ಮ್ಯಾಚ್​ನಲ್ಲಿ ಗೆದ್ದರೆ ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು. ಅಲ್ಲದೆ ಕೊನೆಯ ಪಂದ್ಯದಲ್ಲಿ ಜಯಗಳಿಸಿ ಸರಣಿಯನ್ನು ಜಯಿಸಬಹುದು. ಹೀಗಾಗಿ ನಾಳಿನ ಪಂದ್ಯವು ಉಭಯ ತಂಡಗಳ ಪಾಲಿಗೆ ಸರಣಿ ನಿರ್ಣಾಯಕವಾಗಿದೆ.

ಈ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದ ಬಳಗವನ್ನೇ ಮತ್ತೆ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೋಬಾರ್ಟ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತ್ತು. ಹೀಗಾಗಿ ಇದೇ ಬಳಗವನ್ನೇ ಗೋಲ್ಡ್​ ಕೋಸ್ಟ್​ನಲ್ಲೂ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

ಇದರಿಂದಾಗಿ 4ನೇ ಟಿ20 ಪಂದ್ಯದಿಂದ ಸಂಜು ಸ್ಯಾಮ್ಸನ್ ಹಾಗೂ ಹರ್ಷಿತ್ ರಾಣಾ ಹೊರಗುಳಿಯಬೇಕಾಗಿ ಬರಬಹುದು. ಏಕೆಂದರೆ ಈ ಇಬ್ಬರನ್ನು 3ನೇ ಟಿ20 ಪಂದ್ಯದಿಂದ ಹೊರಗಿಡಲಾಗಿತ್ತು. ಇವರ ಬದಲಿಗೆ ಜಿತೇಶ್ ಶರ್ಮಾ ಹಾಗೂ ಅರ್ಷದೀಪ್ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿತ್ತು. ಇವರನ್ನೇ 4ನೇ ಟಿ20 ಪಂದ್ಯದಲ್ಲೂ ಮುಂದುವರೆಸುವ ಸಾಧ್ಯತೆ ಹೆಚ್ಚು. ಅದರಂತೆ  ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

ಭಾರತ ಪ್ಲೇಯಿಂಗ್ 11: ಶುಭ್​​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್.

ಇದನ್ನೂ ಓದಿ: ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

Published On - 1:24 pm, Wed, 5 November 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!