AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಸಾಧ್ಯತೆ

India Playing XI: ಇಂದೋರ್​ನಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ 2ನೇ ಏಕದಿನ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದೀಗ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಭಾರತ ತಂಡವು 2ನೇ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಸಾಧ್ಯತೆ
Team India
TV9 Web
| Updated By: ಝಾಹಿರ್ ಯೂಸುಫ್|

Updated on:Sep 23, 2023 | 10:59 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯ 2ನೇ ಪಂದ್ಯವು ಭಾನುವಾರ (ಸೆ.23) ನಡೆಯಲಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡವು ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿದಿರಲಿಲ್ಲ.

ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಾರ್ದೂಲ್ ಠಾಕೂರ್ ಕಳಪೆ ಪ್ರದರ್ಶನ ನೀಡಿದ್ದರು. 10 ಓವರ್​ಗಳನ್ನು ಎಸೆದಿದ್ದ ಠಾಕೂರ್ 78 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಹೀಗಾಗಿ ದ್ವಿತೀಯ ಪಂದ್ಯದಿಂದ ಶಾರ್ದೂಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಇನ್ನು ಶಾರ್ದೂಲ್ ಠಾಕೂರ್ ಬದಲಿಗೆ ಮೊಹಮ್ಮದ್ ಸಿರಾಜ್​ಗೆ ಸ್ಥಾನ ಸಿಗುವುದು ಖಚಿತ ಎನ್ನಬಹುದು.

ಈ ಒಂದು ಬದಲಾವಣೆಯ ಹೊರತಾಗಿ ಭಾರತ ತಂಡದ ಆಡುವ ಬಳಗದಲ್ಲಿ ಮಹತ್ವದ ಚೇಂಜ್ ಕಂಡು ಬರುವ ಸಾಧ್ಯತೆಯಿಲ್ಲ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ಶುಭ್​ಮನ್ ಗಿಲ್
  2. ರುತುರಾಜ್ ಗಾಯಕ್ವಾಡ್
  3. ಶ್ರೇಯಸ್ ಅಯ್ಯರ್
  4. ಕೆಎಲ್ ರಾಹುಲ್ (ನಾಯಕ)
  5. ಇಶಾನ್ ಕಿಶನ್
  6. ಸೂರ್ಯಕುಮಾರ್ ಯಾದವ್
  7. ರವೀಂದ್ರ ಜಡೇಜಾ
  8. ರವಿಚಂದ್ರನ್ ಅಶ್ವಿನ್
  9. ಜಸ್​ಪ್ರೀತ್ ಬುಮ್ರಾ
  10. ಮೊಹಮ್ಮದ್ ಶಮಿ
  11. ಮೊಹಮ್ಮದ್ ಸಿರಾಜ್.

2ನೇ ಪಂದ್ಯಕ್ಕೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ಪಾಲಿಗೆ ನಿರ್ಣಾಯಕ ಪಂದ್ಯ:

ಇಂದೋರ್​ನಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ 2ನೇ ಏಕದಿನ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದೀಗ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಭಾರತ ತಂಡವು 2ನೇ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

ಇದನ್ನೂ ಓದಿ: ಗೆದ್ದ ಟೀಮ್ ಇಂಡಿಯಾ: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಪಂದ್ಯವನ್ನು ಗೆಲ್ಲಲೇಬೇಕು. ಈ ಮೂಲಕ ಸರಣಿಯನ್ನು ಮೂರನೇ ಪಂದ್ಯದತ್ತ ಕೊಂಡೊಯ್ಯಬಹುದು. ಹೀಗಾಗಿ ಇಂದೋರ್​ನ ಹೋಲ್ಕರ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಬಳಗದಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

Published On - 10:58 pm, Sat, 23 September 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ