AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಆಟಗಾರರ ನಡುವೆ ಪೈಪೋಟಿ: ಪ್ಲೇಯಿಂಗ್ 11 ನಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​..?

India Playing XI vs Australia: ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್.

IND vs AUS: 4 ಆಟಗಾರರ ನಡುವೆ ಪೈಪೋಟಿ: ಪ್ಲೇಯಿಂಗ್ 11 ನಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​..?
Team India
TV9 Web
| Edited By: |

Updated on: Sep 19, 2022 | 2:10 PM

Share

India vs Australia T20: ಏಷ್ಯಾಕಪ್​ನಲ್ಲಿನ ಹೀನಾಯ ಸೋಲಿನ ಬಳಿಕ ಇದೀಗ ಟೀಮ್ ಇಂಡಿಯಾ (Team India) ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿ ನಿಂತಿದೆ. ಮಂಗಳವಾರದಿಂದ ಶುರುವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾಗೆ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಾದ ಅನಿವಾರ್ಯತೆಯಿದೆ.

ಏಕೆಂದರೆ ಏಷ್ಯಾಕಪ್​ನಲ್ಲಿ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಾಡಿಕೊಂಡ ಬದಲಾವಣೆಗಳೇ ಟೀಮ್ ಇಂಡಿಯಾ ಪಾಲಿಗೆ ಮುಳುವಾಯಿತು ಎಂದರೆ ತಪ್ಪಾಗಲಾರದು. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಭಾರತ ತಂಡವು ಖಾಯಂ ಪ್ಲೇಯಿಂಗ್ ಇಲೆವೆನ್​ ಅನ್ನು ರೂಪಿಸಿಕೊಳ್ಳಬೇಕಿದೆ.

ಆದರೆ ಅಂತಹದೊಂದು ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡುವ ಸಂದಿಗ್ಧತೆ ಸಿಲುಕಿದ್ದಾರೆ ರೋಹಿತ್ ಶರ್ಮಾ. ಏಕೆಂದರೆ ತಂಡದಲ್ಲಿ ನಾಲ್ವರು ಆಟಗಾರರ ನಡುವೆ 2 ಸ್ಥಾನಗಳಿಗಾಗಿ ಭರ್ಜರಿ ಪೈಪೋಟಿ ಇದೆ. ಇಲ್ಲಿ ವಿಕೆಟ್ ಕೀಪರ್ ಸ್ಥಾನದಲ್ಲಿ ಯಾರು ಆಡಲಿದ್ದಾರೆ ಎಂಬ ಪ್ರಶ್ನೆ ಒಂದೆಡೆಯಾದರೆ, ಆಲ್​ರೌಂಡರ್​ ಆಗಿ ಯಾರು ಕಣಕ್ಕಿಳಿಸಬೇಕೆಂಬುದು ಮತ್ತೊಂದು ದೊಡ್ಡ ಪ್ರಶ್ನೆ.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅಂದರೆ ತಂಡದಲ್ಲಿ ವಿಕೆಟ್ ಕೀಪರ್​ಗಳಾಗಿ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ನಡುವೆ ನೇರ ಪೈಪೋಟಿ ಇದೆ. ಏಷ್ಯಾಕಪ್​ನಲ್ಲಿ ದಿನೇಶ್ ಕಾರ್ತಿಕ್ ಬದಲು ಕೆಲ ಪಂದ್ಯಗಳಲ್ಲಿ ಪಂತ್​ಗೆ ಅವಕಾಶ ನೀಡಲಾಗಿತ್ತು. ಇದಾಗ್ಯೂ ರಿಷಭ್ ಯಶಸ್ವಿಯಾಗಿರಲಿಲ್ಲ. ಆದರೆ ಈ ಬಾರಿ ಯಾರಿಗೆ ಪ್ರಾಶಸ್ತ್ಯ ಸಿಗಲಿದೆ ಎಂಬುದೇ ಪ್ರಶ್ನೆ.

ಏಕೆಂದರೆ ಟಿ20 ವಿಶ್ವಕಪ್​ ಹಿನ್ನೆಲೆಯಲ್ಲಿ ಖಾಯಂ ವಿಕೆಟ್ ಕೀಪರ್​ನ ಆಯ್ಕೆ ಮಾಡಬೇಕಾದ ಅನಿವಾರ್ಯತೆಯಿದೆ. ಹೀಗಾಗಿ ಇಬ್ಬರಲ್ಲಿ ಒಬ್ಬರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಬೇಕಾಗುತ್ತದೆ. ಅದರಂತೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಯಾರಿಗೆ ಚಾನ್ಸ್​ ಸಿಗಲಿದೆ ಕಾದು ನೋಡಬೇಕಿದೆ.

ಇನ್ನು ಮತ್ತೊಂದೆಡೆ ರವೀಂದ್ರ ಜಡೇಜಾ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇಲ್ಲೂ ಕೂಡ ಅಕ್ಷರ್ ಪಟೇಲ್ ಹಾಗೂ ದೀಪಕ್ ಹೂಡಾ ನಡುವೆ ಪೈಪೋಟಿಯಿದೆ. ಒಂದು ವೇಳೆ ಎಡಗೈ ಸ್ಪಿನ್ನರ್​ಗೆ ಮಣೆಹಾಕಿದರೆ ಅಕ್ಷರ್ ಪಟೇಲ್ ಸ್ಥಾನ ಪಡೆಯಬಹುದು. ಹಾಗೆಯೇ ಬ್ಯಾಟಿಂಗ್ ಆಲ್​ರೌಂಡರ್​ ಆಯ್ಕೆಗೆ ಒತ್ತು ನೀಡಿದರೆ ದೀಪಕ್ ಹೂಡಾಗೆ ಅವಕಾಶ ಸಿಗಬಹುದು. ಹೀಗಾಗಿ ಇವರಿಬ್ಬರಲ್ಲಿ ಯಾರಿಗೆ ಮಣೆಹಾಕಲಿದ್ದಾರೆ ಎಂಬುದೇ ಈಗ ಕುತೂಹಲ.

ಒಟ್ಟಿನಲ್ಲಿ ಸ್ಟಾರ್ ಆಟಗಾರರ ದಂಡೇ ಇರುವ ಟೀಮ್ ಇಂಡಿಯಾದಲ್ಲಿ ಇದೀಗ ಪ್ಲೇಯಿಂಗ್ ಇಲೆವೆನ್ ರೂಪಿಸುವುದೇ ದೊಡ್ಡ ಸವಾಲು. ಟಿ20 ವಿಶ್ವಕಪ್​ಗೂ ಮುನ್ನ ಈ ಸವಾಲಿಗೆ ಉತ್ತರ ಕಂಡುಕೊಳ್ಳಲೇಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿದೆ ಟೀಮ್ ಇಂಡಿಯಾ. ಅದರಂತೆ ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲಿ ಯಾರಿಗೆಲ್ಲಾ ಚಾನ್ಸ್ ನೀಡಲಿದೆ ಕಾದು ನೋಡಬೇಕಿದೆ.

ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!