AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing XI: ಬುಮ್ರಾ ಔಟ್: ಟೀಮ್ ಇಂಡಿಯಾದ ಪ್ಲೇಯಿಂಗ್​ 11 ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ

India vs Sri Lanka 1st Odi: ಶುಭ್​ಮನ್​ ಗಿಲ್ ಏಕದಿನ ಕ್ರಿಕೆಟ್​ನಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಜೊತೆ ಗಿಲ್​ಗೆ ಅವಕಾಶ ಸಿಗಬಹುದು. ಮತ್ತೊಂದೆಡೆ ಕಳೆದ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಮಿಂಚಿದ್ದ ಇಶಾನ್ ಕಿಶನ್ ಕೂಡ ವಿಕೆಟ್ ಕೀಪರ್ ಸ್ಥಾನದಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ.

India Playing XI: ಬುಮ್ರಾ ಔಟ್: ಟೀಮ್ ಇಂಡಿಯಾದ ಪ್ಲೇಯಿಂಗ್​ 11 ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ
Team India
TV9 Web
| Edited By: |

Updated on:Jan 09, 2023 | 9:37 PM

Share

India vs Sri Lanka 1st Odi:  ಭಾರತ-ಶ್ರೀಲಂಕಾ ನಡುವಣ ಏಕದಿನ ಸರಣಿಯು ನಾಳೆಯಿಂದ (ಜ.10) ಶುರುವಾಗಲಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಗೌಹಾಟಿಯಲ್ಲಿ ನಡೆಯಲಿದೆ. ವಿಶೇಷ ಎಂದರೆ ಈ ಸರಣಿಯ ಮೂಲಕ ಟೀಮ್ ಇಂಡಿಯಾದ ಹಿರಿಯ ಆಟಗಾರರು ತಂಡಕ್ಕೆ ಮರಳಿದ್ದು, ಹೀಗಾಗಿ ಯುವ ಆಟಗಾರರು ಪ್ಲೇಯಿಂಗ್ ಇಲೆವೆನ್​​ನಿಂದ ಹೊರಬೀಳಲಿದ್ದಾರೆ. ಅದರಲ್ಲೂ ಪಂದ್ಯ ಆರಂಭಕ್ಕೂ ಮುನ್ನವೇ ಜಸ್​ಪ್ರೀತ್ ಬುಮ್ರಾ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಲಂಕಾ ವಿರುದ್ಧದ ಸರಣಿಯಲ್ಲಿ ಯಾರ್ಕರ್ ಕಿಂಗ್ ಕಾಣಿಸಿಕೊಳ್ಳುವುದಿಲ್ಲ.

ಇನ್ನು ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇರುವ ಕಾರಣ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಕುತೂಹಲ. ಏಕೆಂದರೆ ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ, ಇಶಾನ್ ಕಿಶನ್, ಶುಭ್​ಮನ್ ಗಿಲ್ ಹಾಗೂ ಕೆಎಲ್ ರಾಹುಲ್ ತಂಡದಲ್ಲಿದ್ದಾರೆ. ಈ ನಾಲ್ವರಲ್ಲಿ ಇಬ್ಬರನ್ನು ಆರಂಭಿಕರಾಗಿ ಆಯ್ಕೆ ಮಾಡಬೇಕಿದೆ. ಮತ್ತೊಂದೆಡೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ಗಳಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಇರುವ ಕಾರಣ ಯಾರಿಗೆ ಚಾನ್ಸ್ ನೀಡಬೇಕೆಂಬ ಸವಾಲು ಕೂಡ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಮುಂದಿದೆ.

ಅತ್ತ ಶುಭ್​ಮನ್​ ಗಿಲ್ ಏಕದಿನ ಕ್ರಿಕೆಟ್​ನಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಜೊತೆ ಗಿಲ್​ಗೆ ಅವಕಾಶ ಸಿಗಬಹುದು. ಮತ್ತೊಂದೆಡೆ ಕಳೆದ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಮಿಂಚಿದ್ದ ಇಶಾನ್ ಕಿಶನ್ ಕೂಡ ವಿಕೆಟ್ ಕೀಪರ್ ಸ್ಥಾನದಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ.

ಇದನ್ನೂ ಓದಿ
Image
IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.
Image
Suryakumar Yadav: ರಾಹುಲ್ ದಾಖಲೆ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸೂರ್ಯ
Image
Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Image
Virat Kohli – Rohit Sharma: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ-ರೋಹಿತ್​ಗಿಲ್ಲ ಚಾನ್ಸ್​?

ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸುವುದು ಖಚಿತ ಎನ್ನಬಹುದು. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್ ನಡುವೆ ಪೈಪೋಟಿ ಇದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಹೊರಗುಳಿಯಬೇಕಾಗಿ ಬರಬಹುದು.

ಇದನ್ನೂ ಓದಿ: WTC final: ಆಸ್ಟ್ರೇಲಿಯಾ-ಸೌತ್ ಆಫ್ರಿಕಾ ಪಂದ್ಯ ಡ್ರಾ: ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್

ಒಂದು ವೇಳೆ ಶುಭ್​ಮನ್ ಗಿಲ್ ಅವರನ್ನು ಹೊರಗಿಟ್ಟರೆ ಮಾತ್ರ ಇಶಾನ್ ಕಿಶನ್​ಗೆ ಚಾನ್ಸ್ ಸಿಗಬಹುದು. ಅಂದರೆ ಗಿಲ್ ಬದಲಿಗೆ ಇಶಾನ್ ಕಿಶನ್ ಆರಂಭಿಕರಾಗಿ ಆಡಿದ್ರೆ, ಕೆಎಲ್ ರಾಹುಲ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಇನ್ನು 6ನೇ, 7ನೇ ಮತ್ತು 8ನೇ ಕ್ರಮಾಂಕದಲ್ಲಿ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳಬಹುದು.

ಹಾಗೆಯೇ ಪ್ರಮುಖ ವೇಗಿಯಾಗಿ ಮೊಹಮ್ಮದ್ ಶಮಿ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಇನ್ನು ಮತ್ತಿಬ್ಬರು ವೇಗಿಗಳ ಸ್ಥಾನದಲ್ಲಿ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್ ಹಾಗೂ ಮೊಹಮ್ಮದ್ ಸಿರಾಜ್ ನಡುವೆ ಕೂಡ ಪೈಪೋಟಿ ಇದೆ. ಹೀಗಾಗಿ ಈ ಮೂವರಲ್ಲಿ ಒಬ್ಬರು ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿಯಲಿದ್ದಾರೆ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ:

  • ರೋಹಿತ್ ಶರ್ಮಾ
  • ಶುಭ್​ಮನ್​ ಗಿಲ್
  • ವಿರಾಟ್ ಕೊಹ್ಲಿ
  • ಶ್ರೇಯಸ್ ಅಯ್ಯರ್
  • ಕೆಎಲ್ ರಾಹುಲ್
  • ಹಾರ್ದಿಕ್ ಪಾಂಡ್ಯ
  • ವಾಷಿಂಗ್ಟನ್ ಸುಂದರ್
  • ಅಕ್ಷರ್ ಪಟೇಲ್
  • ಮೊಹಮ್ಮದ್ ಶಮಿ
  • ಅರ್ಷದೀಪ್ ಸಿಂಗ್
  • ಮೊಹಮ್ಮದ್ ಸಿರಾಜ್

ಏಕದಿನ ಸರಣಿ ವೇಳಾಪಟ್ಟಿ:

  • ಜನವರಿ 10: ಮೊದಲ ಏಕದಿನ ಪಂದ್ಯ (ಸ್ಥಳ- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗೌಹಾಟಿ)
  • ಜನವರಿ 12: ಎರಡನೇ ಏಕದಿನ ಪಂದ್ಯ (ಸ್ಥಳ- ಈಡನ್ ಗಾರ್ಡನ್ಸ್, ಕೋಲ್ಕತ್ತಾ)
  • ಜನವರಿ 15: ಮೂರನೇ ಏಕದಿನ ಪಂದ್ಯ (ಗ್ರೀನ್‌ಫೀಲ್ಡ್ ಸ್ಟೇಡಿಯಂ, ತಿರುವನಂತಪುರಂ)

ಟೀಮ್ ಇಂಡಿಯಾ ಏಕದಿನ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

Published On - 6:32 pm, Mon, 9 January 23

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​