AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ಗಾಗಿ ಭಾರತದ ಸಂಭಾವ್ಯ ಪ್ಲೇಯಿಂಗ್ XI

IND vs SA: ಆತಿಥೇಯರ ಭದ್ರಕೋಟೆ ಎಂದೇ ಹೇಳಲಾಗುವ ಸೆಂಚುರಿಯನ್ ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ನೆಲದಲ್ಲಿ ಶೇ.100ರಷ್ಟು ಸೋಲು ಕಂಡಿರುವುದು ಭಾರತದ ದಾಖಲೆ.

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ಗಾಗಿ ಭಾರತದ ಸಂಭಾವ್ಯ ಪ್ಲೇಯಿಂಗ್ XI
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on: Dec 25, 2021 | 4:31 PM

Share

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನು ನೋಡುವ ಕಾಯುವಿಕೆ ಕೊನೆಗೊಳ್ಳಲಿದೆ. ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಸರಣಿಯ ಮೊದಲ ಮತ್ತು ಬಾಕ್ಸಿಂಗ್ ಡೇ ಟೆಸ್ಟ್‌ಗೆ ಈಗ ಕೆಲವೇ ಗಂಟೆಗಳು ಉಳಿದಿವೆ. ಪಂದ್ಯದ ಆರಂಭದ ಮೊದಲು, ತಂಡದ ಸಂಯೋಜನೆಯ ಬಗ್ಗೆ ಮಾತನಾಡುವುದು ಅವಶ್ಯಕ. ಆತಿಥೇಯರ ಭದ್ರಕೋಟೆ ಎಂದೇ ಹೇಳಲಾಗುವ ಸೆಂಚುರಿಯನ್ ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ನೆಲದಲ್ಲಿ ಶೇ.100ರಷ್ಟು ಸೋಲು ಕಂಡಿರುವುದು ಭಾರತದ ದಾಖಲೆ. ಆದರೆ, ಈ ಬಾರಿ ಇತಿಹಾಸ ಬದಲಿಸುವ ಉದ್ದೇಶವಿದೆ. ಮತ್ತು ಇದಕ್ಕಾಗಿ ಸೋಲನ್ನು ಗೆಲುವಾಗಿ ಪರಿವರ್ತಿಸುವುದು ಅವಶ್ಯಕ. ಸೆಂಚುರಿಯನ್ ನಲ್ಲಿ ಟೀಂ ಇಂಡಿಯಾ ಮೊದಲ ಗೆಲುವಿನ ಸವಿಯಬೇಕಾದರೆ. ವಿರಾಟ್ ಕೊಹ್ಲಿ 2 ಬಾಕ್ಸಿಂಗ್ ಡೇ ಟೆಸ್ಟ್‌ಗಳನ್ನು ಗೆದ್ದ ಭಾರತದ ಮೊದಲ ನಾಯಕನಾಗಲು ಬಯಸಿದರೆ, ಅವರು ಸರಿಯಾದ ತಂಡದ ಸಂಯೋಜನೆಯೊಂದಿಗೆ ಅಂದರೆ ಪ್ಲೇಯಿಂಗ್ XI ನೊಂದಿಗೆ ಮೈದಾನಕ್ಕೆ ಬರಬೇಕು.

ಹೀಗಿರುವಾಗ ಸೆಂಚುರಿಯನ್ ಟೆಸ್ಟ್‌ನಲ್ಲಿ ಭಾರತದ ಪ್ಲೇಯಿಂಗ್ ಇಲೆವೆನ್ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಭಾರತವು 5 ವೇಗದ ಬೌಲರ್‌ಗಳೊಂದಿಗೆ ಹೋಗುತ್ತದೆಯೇ ಅಥವಾ ಅವರು ಹೆಚ್ಚುವರಿ ಬ್ಯಾಟ್ಸ್‌ಮನ್‌ಗಳನ್ನು ಆಡಿಸುತ್ತಾರೆಯೇ? ಎಂಬುದು ಪ್ರಶ್ನೆಯಾಗಿದೆ. ಹೆಚ್ಚುವರಿ ಬ್ಯಾಟ್ಸ್‌ಮನ್‌ಗಳನ್ನು ಆಡಿಸಿದರೆ ಹನುಮ, ರಹಾನೆ ಮತ್ತು ಅಯ್ಯರ್‌ನಲ್ಲಿ 5 ನೇ ಸ್ಥಾನದಲ್ಲಿ ಯಾರಿಗೆ ಅವಕಾಶ ಸಿಗುತ್ತದೆ? ಎಂಬುದು ಕೂಡ ಕುತೂಹಲಕಾರಿಯಾಗಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಅತಿ ಹೆಚ್ಚು ಟೆಸ್ಟ್ ಪಂದ್ಯಗಳಲ್ಲಿ 5 ಬೌಲರ್‌ಗಳನ್ನು ಕಣಕ್ಕಿಳಿಸಿದೆ. ಈ ವರ್ಷ, ಆಸ್ಟ್ರೇಲಿಯಾದ ಸಮಯದಲ್ಲಿ ಮೂರು ಟೆಸ್ಟ್ ಪಂದ್ಯಗಳ ನಂತರ, ಇಂಗ್ಲೆಂಡ್ ಪ್ರವಾಸದಲ್ಲಿ, ಭಾರತ ತಂಡವು ಕೇವಲ 5 ಬೌಲರ್‌ಗಳೊಂದಿಗೆ ಟೆಸ್ಟ್‌ಗೆ ಪ್ರವೇಶಿಸಿ ಯಶಸ್ವಿಯಾಗಿತ್ತು.

5 ಬೌಲರ್ ಆಡಿಸುತ್ತೇವೆ- ಕೆಎಲ್ ರಾಹುಲ್ ಮತ್ತೊಂದೆಡೆ ಟೆಸ್ಟ್ ತಂಡದ ಉಪನಾಯಕ ಕೆಎಲ್ ರಾಹುಲ್ ಕೂಡ 5 ಬೌಲರ್‌ಗಳೊಂದಿಗೆ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ. ಬಹುತೇಕ ತಂಡಗಳು 5 ಬೌಲರ್‌ಗಳೊಂದಿಗೆ ಕಣಕ್ಕಿಳಿಯಲು ಪ್ರಾರಂಭಿಸಿವೆ ಜೊತೆಗೆ ಟೆಸ್ಟ್ ಪಂದ್ಯವನ್ನು ಗೆಲ್ಲಲು ಇದು ಅತ್ಯುತ್ತಮ ಮಾರ್ಗವಾಗಿದೆ. ನಾವು ಈ ತಂತ್ರವನ್ನು ಮೊದಲು ಪ್ರಯತ್ನಿಸಿದ್ದೇವೆ ಮತ್ತು ಇದು ವಿದೇಶಿ ನೆಲದಲ್ಲಿ ಸಾಕಷ್ಟು ಸಹಾಯ ಮಾಡಿದೆ ಎಂದಿದ್ದಾರೆ. ಈಗ ಭಾರತ 5 ಬೌಲರ್‌ಗಳೊಂದಿಗೆ ಹೋದರೆ, ರಹಾನೆ ಆಡುವ XI ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಓಪನರ್: ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ತಂಡದ ಓಪನಿಂಗ್‌ನಲ್ಲಿ ಯಾವುದೇ ಅನುಮಾನವಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಸಂಪೂರ್ಣ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಈ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಶತಕ ಬಾರಿಸಿದ ನಂತರ ಮಯಾಂಕ್ ಅವರ ಆತ್ಮವಿಶ್ವಾಸ ಹೆಚ್ಚಿದೆ.

ಮಧ್ಯಮ ಕ್ರಮಾಂಕ: ಪೂಜಾರ, ವಿರಾಟ್, ಅಯ್ಯರ್ ಮತ್ತು ಪಂತ್ ಸೆಂಚುರಿಯನ್ ಟೆಸ್ಟ್‌ನಲ್ಲಿ, ಭಾರತದ ಮಧ್ಯಮ ಕ್ರಮಾಂಕವು ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರಿಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರ ಹೆಸರನ್ನು ಖಚಿತಪಡಿಸಿದೆ. ಇದರಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಆದರೆ ಶ್ರೇಯಸ್ ಅಯ್ಯರ್, ರಹಾನೆ ಮತ್ತು ಹನುಮಾ ವಿಹಾರಿ ಬದಲು 5 ನೇ ಸ್ಥಾನದಲ್ಲಿ ಅವಕಾಶವನ್ನು ಪಡೆಯಬಹುದು. ನ್ಯೂಜಿಲೆಂಡ್ ವಿರುದ್ಧದ ತವರಿನ ಸರಣಿಯಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ ಅಯ್ಯರ್ ಶತಕವನ್ನು ಗಳಿಸಿದರು.

5 ಬೌಲರ್‌ಗಳು: (ಒಬ್ಬ ಸ್ಪಿನ್ನರ್ + 4 ವೇಗದ ಬೌಲರ್‌ಗಳು) ಸೆಂಚುರಿಯನ್ ಟೆಸ್ಟ್‌ನಲ್ಲಿ ಭಾರತ 5 ಸ್ಪೆಷಲಿಸ್ಟ್ ಬೌಲರ್‌ಗಳೊಂದಿಗೆ ಹೋದರೆ, ಒಬ್ಬ ಸ್ಪಿನ್ನರ್ ಮತ್ತು 4 ವೇಗದ ಬೌಲರ್‌ಗಳಿಗೆ ಅವಕಾಶ ಸಿಗಬಹುದು. ಅನುಭವಿ ಅಶ್ವಿನ್ ಸ್ಪಿನ್ ನಿಭಾಯಿಸುವುದನ್ನು ನೋಡಬಹುದು ಆದರೆ ಬುಮ್ರಾ, ಶಮಿ, ಇಶಾಂತ್ ಮತ್ತು ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್‌ನಲ್ಲಿ ತಂಡದ ಭಾಗವಾಗಲಿದ್ದಾರೆ.

ಸೆಂಚುರಿಯನ್ ಟೆಸ್ಟ್‌ಗಾಗಿ ಭಾರತದ ಸಂಭಾವ್ಯ ಪ್ಲೇಯಿಂಗ್ XI ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಆರ್. ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್

ಇದನ್ನೂ ಓದಿ:IND vs SA: ಆಫ್ರಿಕನ್ ನೆಲದಲ್ಲಿ ಚೊಚ್ಚಲ ಪಂದ್ಯವನ್ನಾಡಿ ತಮ್ಮ ಶಕ್ತಿ ಪ್ರದರ್ಶಿಸಲಿರುವ ಏಳು ಟೀಂ ಇಂಡಿಯಾ ಆಟಗಾರರಿವರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ