Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ಗಾಗಿ ಭಾರತದ ಸಂಭಾವ್ಯ ಪ್ಲೇಯಿಂಗ್ XI

IND vs SA: ಆತಿಥೇಯರ ಭದ್ರಕೋಟೆ ಎಂದೇ ಹೇಳಲಾಗುವ ಸೆಂಚುರಿಯನ್ ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ನೆಲದಲ್ಲಿ ಶೇ.100ರಷ್ಟು ಸೋಲು ಕಂಡಿರುವುದು ಭಾರತದ ದಾಖಲೆ.

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ಗಾಗಿ ಭಾರತದ ಸಂಭಾವ್ಯ ಪ್ಲೇಯಿಂಗ್ XI
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on: Dec 25, 2021 | 4:31 PM

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನು ನೋಡುವ ಕಾಯುವಿಕೆ ಕೊನೆಗೊಳ್ಳಲಿದೆ. ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಸರಣಿಯ ಮೊದಲ ಮತ್ತು ಬಾಕ್ಸಿಂಗ್ ಡೇ ಟೆಸ್ಟ್‌ಗೆ ಈಗ ಕೆಲವೇ ಗಂಟೆಗಳು ಉಳಿದಿವೆ. ಪಂದ್ಯದ ಆರಂಭದ ಮೊದಲು, ತಂಡದ ಸಂಯೋಜನೆಯ ಬಗ್ಗೆ ಮಾತನಾಡುವುದು ಅವಶ್ಯಕ. ಆತಿಥೇಯರ ಭದ್ರಕೋಟೆ ಎಂದೇ ಹೇಳಲಾಗುವ ಸೆಂಚುರಿಯನ್ ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ನೆಲದಲ್ಲಿ ಶೇ.100ರಷ್ಟು ಸೋಲು ಕಂಡಿರುವುದು ಭಾರತದ ದಾಖಲೆ. ಆದರೆ, ಈ ಬಾರಿ ಇತಿಹಾಸ ಬದಲಿಸುವ ಉದ್ದೇಶವಿದೆ. ಮತ್ತು ಇದಕ್ಕಾಗಿ ಸೋಲನ್ನು ಗೆಲುವಾಗಿ ಪರಿವರ್ತಿಸುವುದು ಅವಶ್ಯಕ. ಸೆಂಚುರಿಯನ್ ನಲ್ಲಿ ಟೀಂ ಇಂಡಿಯಾ ಮೊದಲ ಗೆಲುವಿನ ಸವಿಯಬೇಕಾದರೆ. ವಿರಾಟ್ ಕೊಹ್ಲಿ 2 ಬಾಕ್ಸಿಂಗ್ ಡೇ ಟೆಸ್ಟ್‌ಗಳನ್ನು ಗೆದ್ದ ಭಾರತದ ಮೊದಲ ನಾಯಕನಾಗಲು ಬಯಸಿದರೆ, ಅವರು ಸರಿಯಾದ ತಂಡದ ಸಂಯೋಜನೆಯೊಂದಿಗೆ ಅಂದರೆ ಪ್ಲೇಯಿಂಗ್ XI ನೊಂದಿಗೆ ಮೈದಾನಕ್ಕೆ ಬರಬೇಕು.

ಹೀಗಿರುವಾಗ ಸೆಂಚುರಿಯನ್ ಟೆಸ್ಟ್‌ನಲ್ಲಿ ಭಾರತದ ಪ್ಲೇಯಿಂಗ್ ಇಲೆವೆನ್ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಭಾರತವು 5 ವೇಗದ ಬೌಲರ್‌ಗಳೊಂದಿಗೆ ಹೋಗುತ್ತದೆಯೇ ಅಥವಾ ಅವರು ಹೆಚ್ಚುವರಿ ಬ್ಯಾಟ್ಸ್‌ಮನ್‌ಗಳನ್ನು ಆಡಿಸುತ್ತಾರೆಯೇ? ಎಂಬುದು ಪ್ರಶ್ನೆಯಾಗಿದೆ. ಹೆಚ್ಚುವರಿ ಬ್ಯಾಟ್ಸ್‌ಮನ್‌ಗಳನ್ನು ಆಡಿಸಿದರೆ ಹನುಮ, ರಹಾನೆ ಮತ್ತು ಅಯ್ಯರ್‌ನಲ್ಲಿ 5 ನೇ ಸ್ಥಾನದಲ್ಲಿ ಯಾರಿಗೆ ಅವಕಾಶ ಸಿಗುತ್ತದೆ? ಎಂಬುದು ಕೂಡ ಕುತೂಹಲಕಾರಿಯಾಗಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಅತಿ ಹೆಚ್ಚು ಟೆಸ್ಟ್ ಪಂದ್ಯಗಳಲ್ಲಿ 5 ಬೌಲರ್‌ಗಳನ್ನು ಕಣಕ್ಕಿಳಿಸಿದೆ. ಈ ವರ್ಷ, ಆಸ್ಟ್ರೇಲಿಯಾದ ಸಮಯದಲ್ಲಿ ಮೂರು ಟೆಸ್ಟ್ ಪಂದ್ಯಗಳ ನಂತರ, ಇಂಗ್ಲೆಂಡ್ ಪ್ರವಾಸದಲ್ಲಿ, ಭಾರತ ತಂಡವು ಕೇವಲ 5 ಬೌಲರ್‌ಗಳೊಂದಿಗೆ ಟೆಸ್ಟ್‌ಗೆ ಪ್ರವೇಶಿಸಿ ಯಶಸ್ವಿಯಾಗಿತ್ತು.

5 ಬೌಲರ್ ಆಡಿಸುತ್ತೇವೆ- ಕೆಎಲ್ ರಾಹುಲ್ ಮತ್ತೊಂದೆಡೆ ಟೆಸ್ಟ್ ತಂಡದ ಉಪನಾಯಕ ಕೆಎಲ್ ರಾಹುಲ್ ಕೂಡ 5 ಬೌಲರ್‌ಗಳೊಂದಿಗೆ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ. ಬಹುತೇಕ ತಂಡಗಳು 5 ಬೌಲರ್‌ಗಳೊಂದಿಗೆ ಕಣಕ್ಕಿಳಿಯಲು ಪ್ರಾರಂಭಿಸಿವೆ ಜೊತೆಗೆ ಟೆಸ್ಟ್ ಪಂದ್ಯವನ್ನು ಗೆಲ್ಲಲು ಇದು ಅತ್ಯುತ್ತಮ ಮಾರ್ಗವಾಗಿದೆ. ನಾವು ಈ ತಂತ್ರವನ್ನು ಮೊದಲು ಪ್ರಯತ್ನಿಸಿದ್ದೇವೆ ಮತ್ತು ಇದು ವಿದೇಶಿ ನೆಲದಲ್ಲಿ ಸಾಕಷ್ಟು ಸಹಾಯ ಮಾಡಿದೆ ಎಂದಿದ್ದಾರೆ. ಈಗ ಭಾರತ 5 ಬೌಲರ್‌ಗಳೊಂದಿಗೆ ಹೋದರೆ, ರಹಾನೆ ಆಡುವ XI ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಓಪನರ್: ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ತಂಡದ ಓಪನಿಂಗ್‌ನಲ್ಲಿ ಯಾವುದೇ ಅನುಮಾನವಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಸಂಪೂರ್ಣ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಈ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಶತಕ ಬಾರಿಸಿದ ನಂತರ ಮಯಾಂಕ್ ಅವರ ಆತ್ಮವಿಶ್ವಾಸ ಹೆಚ್ಚಿದೆ.

ಮಧ್ಯಮ ಕ್ರಮಾಂಕ: ಪೂಜಾರ, ವಿರಾಟ್, ಅಯ್ಯರ್ ಮತ್ತು ಪಂತ್ ಸೆಂಚುರಿಯನ್ ಟೆಸ್ಟ್‌ನಲ್ಲಿ, ಭಾರತದ ಮಧ್ಯಮ ಕ್ರಮಾಂಕವು ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರಿಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರ ಹೆಸರನ್ನು ಖಚಿತಪಡಿಸಿದೆ. ಇದರಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಆದರೆ ಶ್ರೇಯಸ್ ಅಯ್ಯರ್, ರಹಾನೆ ಮತ್ತು ಹನುಮಾ ವಿಹಾರಿ ಬದಲು 5 ನೇ ಸ್ಥಾನದಲ್ಲಿ ಅವಕಾಶವನ್ನು ಪಡೆಯಬಹುದು. ನ್ಯೂಜಿಲೆಂಡ್ ವಿರುದ್ಧದ ತವರಿನ ಸರಣಿಯಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ ಅಯ್ಯರ್ ಶತಕವನ್ನು ಗಳಿಸಿದರು.

5 ಬೌಲರ್‌ಗಳು: (ಒಬ್ಬ ಸ್ಪಿನ್ನರ್ + 4 ವೇಗದ ಬೌಲರ್‌ಗಳು) ಸೆಂಚುರಿಯನ್ ಟೆಸ್ಟ್‌ನಲ್ಲಿ ಭಾರತ 5 ಸ್ಪೆಷಲಿಸ್ಟ್ ಬೌಲರ್‌ಗಳೊಂದಿಗೆ ಹೋದರೆ, ಒಬ್ಬ ಸ್ಪಿನ್ನರ್ ಮತ್ತು 4 ವೇಗದ ಬೌಲರ್‌ಗಳಿಗೆ ಅವಕಾಶ ಸಿಗಬಹುದು. ಅನುಭವಿ ಅಶ್ವಿನ್ ಸ್ಪಿನ್ ನಿಭಾಯಿಸುವುದನ್ನು ನೋಡಬಹುದು ಆದರೆ ಬುಮ್ರಾ, ಶಮಿ, ಇಶಾಂತ್ ಮತ್ತು ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್‌ನಲ್ಲಿ ತಂಡದ ಭಾಗವಾಗಲಿದ್ದಾರೆ.

ಸೆಂಚುರಿಯನ್ ಟೆಸ್ಟ್‌ಗಾಗಿ ಭಾರತದ ಸಂಭಾವ್ಯ ಪ್ಲೇಯಿಂಗ್ XI ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಆರ್. ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್

ಇದನ್ನೂ ಓದಿ:IND vs SA: ಆಫ್ರಿಕನ್ ನೆಲದಲ್ಲಿ ಚೊಚ್ಚಲ ಪಂದ್ಯವನ್ನಾಡಿ ತಮ್ಮ ಶಕ್ತಿ ಪ್ರದರ್ಶಿಸಲಿರುವ ಏಳು ಟೀಂ ಇಂಡಿಯಾ ಆಟಗಾರರಿವರು

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ