AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕೆ.ಎಲ್ ರಾಹುಲ್ ಓಪನರ್.. ಆರ್​ಸಿಬಿ ವೇಗಿ ಇನ್, ಜಡೇಜಾ ಔಟ್? ಮೊದಲ ಟೆಸ್ಟ್​ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್

IND vs ENG: ಮೂರು ದಿನಗಳ ಅಭ್ಯಾಸದಲ್ಲಿ ಐದನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ ಶತಕ ಗಳಿಸಿದರು. ತಂಡದ ಎರಡನೇ ಓಪನರ್ ಅಭಿಮನ್ಯು ಈಶ್ವರನ್ ಅವರನ್ನು ಸದ್ಯಕ್ಕೆ ಪರಿಗಣಿಸಲಾಗುತ್ತಿಲ್ಲ, ಪೃಥ್ವಿ ಶಾ ಇನ್ನೂ ತಂಡವನ್ನು ಸೇರಿಕೊಂಡಿಲ್ಲ.

IND vs ENG: ಕೆ.ಎಲ್ ರಾಹುಲ್ ಓಪನರ್.. ಆರ್​ಸಿಬಿ ವೇಗಿ ಇನ್, ಜಡೇಜಾ ಔಟ್? ಮೊದಲ ಟೆಸ್ಟ್​ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on: Aug 03, 2021 | 2:45 PM

Share

ಭಾರತ ಮತ್ತು ಇಂಗ್ಲೆಂಡ್ (India and England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 4 ರಿಂದ ಆರಂಭವಾಗುತ್ತಿದೆ. ಆಟಗಾರರು ನಿರಂತರವಾಗಿ ಗಾಯಗೊಳ್ಳುತ್ತಿರುವುದರಿಂದ ಟೀಂ ಇಂಡಿಯಾದ ತೊಂದರೆಗಳು ಹೆಚ್ಚಾಗಿದೆ. ಟೀಂ ಇಂಡಿಯಾದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ (Mayank Agarwal) ಗಾಯಗೊಂಡ ನಂತರ ಟೀಮ್ ಇಂಡಿಯಾ ಈಗ ಹೊಸ ಓಪನರ್ ಜೊತೆ ಕಣಕ್ಕಿಳಿಯಬಹುದು. ಆದಾಗ್ಯೂ, ರೋಹಿತ್ ಶರ್ಮಾ ಜೊತೆ ಕೆಎಲ್ ರಾಹುಲ್ (KL Rahul) ಓಪನಿಂಗ್ ಮಾಡಬಹುದು. ಆದರೆ ಕುತೂಹಲಕಾರಿ ಸಂಗತಿಯೆಂದರೆ, ಈ ಸರಣಿಗೆ, ತಂಡದ ನಿರ್ವಹಣೆ ರಾಹುಲ್ ಅನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಕಪ್ ಆಗಿ ಬಳಸಲು ನೋಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಮೊದಲ ಟೆಸ್ಟ್‌ನಲ್ಲಿ ಆಡುವ 11 ರ ಬಳಗವನ್ನು ಆಯ್ಕೆ ಮಾಡುವುದು ತಂಡದ ನಿರ್ವಹಣೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಮೂರು ದಿನಗಳ ಅಭ್ಯಾಸದಲ್ಲಿ ಐದನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ ಶತಕ ಗಳಿಸಿದರು. ತಂಡದ ಎರಡನೇ ಓಪನರ್ ಅಭಿಮನ್ಯು ಈಶ್ವರನ್ ಅವರನ್ನು ಸದ್ಯಕ್ಕೆ ಪರಿಗಣಿಸಲಾಗುತ್ತಿಲ್ಲ, ಪೃಥ್ವಿ ಶಾ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಹನುಮ ವಿಹಾರಿ ಈ ಮೊದಲು ಒಮ್ಮೆ ಮಾತ್ರ ಓಪನರ್ ಆಗಿ ಕಣಕ್ಕಿಳಿದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೆಎಲ್ ರಾಹುಲ್ ರನ್ನು ರೋಹಿತ್ ಶರ್ಮಾ ಜೊತೆಗೆ ಓಪನರ್ ಆಗಿ ಕಣಕ್ಕಿಳಿಸಬಹುದು. ರಾಹುಲ್ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನು 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಡಿದ್ದರು.

ನಾಲ್ಕು ವೇಗದ ಬೌಲರ್‌ಗಳೊಂದಿಗೆ ಆಡಬಹುದು ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ, ಟೀಂ ಇಂಡಿಯಾ ಇಬ್ಬರು ಸ್ಪಿನ್ನರ್‌ಗಳ ತಂತ್ರವನ್ನು ಬದಲಾಯಿಸಬಹುದು. ಈ ತಂತ್ರದಿಂದ, ತಂಡವು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶಿಸಿತು, ಅದು ಪರಿಣಾಮಕಾರಿಯಾಗಿರಲಿಲ್ಲ. ಆಟಕ್ಕೆ ಎರಡು ದಿನ ಮೊದಲು ಟ್ರೆಂಟ್ ಬ್ರಿಡ್ಜ್ ಪಿಚ್ ಹಸಿರು ಕಾಣುತ್ತಿತ್ತು. ಪಂದ್ಯದ ಮೊದಲು ಹುಲ್ಲನ್ನು ಕತ್ತರಿಸುವ ನಿರೀಕ್ಷೆಯಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಕೇವಲ ನಾಲ್ಕು ವೇಗದ ಬೌಲರ್‌ಗಳೊಂದಿಗೆ ಮೈದಾನಕ್ಕೆ ಹೋಗಬಹುದು.

ಸಿರಾಜ್‌ಗೆ ಅವಕಾಶ ಸಿಗಬಹುದು ಟ್ರೆಂಟ್ ಬ್ರಿಡ್ಜ್ ನ ಹಸಿರು ಪಿಚ್ ಇಂಗ್ಲೆಂಡ್ ನಲ್ಲಿ ಮೊದಲ ಟೆಸ್ಟ್ ಆಡಲು ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಗೆ ಬಾಗಿಲು ತೆರೆಯಬಹುದು. ಆಸ್ಟ್ರೇಲಿಯಾ ಪ್ರವಾಸದ ವೇಳೆ ಸಿರಾಜ್ ತಮ್ಮ ಬೌಲಿಂಗ್‌ನಿಂದ ಹೆಸರುವಾಸಿಯಾಗಿದ್ದರು. ಇಬ್ಬರು ಸ್ಪಿನ್ನರ್‌ಗಳಲ್ಲಿ, ರವಿಚಂದ್ರನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಪಡೆಯಬಹುದು. ಅಶ್ವಿನ್ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಏಳು ವಿಕೆಟ್ಗಳನ್ನು ಪಡೆದರು. ಹೀಗಾಗಿ ಭಾರತ ಇದರ ಲಾಭವನ್ನು ಪಡೆಯಬಹುದು. ಮತ್ತೊಂದೆಡೆ, ರವೀಂದ್ರ ಜಡೇಜಾ ಉತ್ತಮ ಬ್ಯಾಟ್ಸ್‌ಮನ್, ಆದರೆ ಅವರ ಸ್ಪಿನ್ ಈ ಪರಿಸ್ಥಿತಿಗಳಲ್ಲಿ ಉಪಯುಕ್ತವಾಗದಿರಬಹುದು. ಅಲ್ಲದೆ, ಅಶ್ವಿನ್ ಅವರ ಪ್ರಸ್ತುತ ಫಾರ್ಮ್ ಜಡೇಜಾ ಮೇಲೆ ಪರಿಣಾಮ ಬೀರಬಹುದು.

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಬಹುದು ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ.

ಇದನ್ನೂ ಓದಿ:India vs England 1st Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್​ನ ನೇರ ಪ್ರಸಾರ ಸೇರಿದಂತೆ ಪೂರ್ಣ ಮಾಹಿತಿ ಇಲ್ಲಿದೆ

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ