AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final, IND vs AUS: ಭಾರತದ ಗೆಲುವಿಗೆ ಬೇಕು 540 ಎಸೆತಗಳಲ್ಲಿ 280 ರನ್ಸ್: ಕೊಹ್ಲಿ-ರಹಾನೆ ಮೇಲೆ ಎಲ್ಲರ ಕಣ್ಣು

India vs Australia Final: ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿದೆ. ಭಾರತದ ಗೆಲುವಿಗೆ ಇನ್ನೂ 280 ರನ್​ಗಳ ಅವಶ್ಯಕತೆಯಿದ್ದು, 90 ಓವರ್​ಗಳು ನೀಡಲಾಗಿದೆ. ವಿರಾಟ್ ಕೊಹ್ಲಿ-ಅಜಿಂಕ್ಯ ರಹಾನೆ ಕ್ರೀಸ್​ನಲ್ಲಿದ್ದಾರೆ.

WTC Final, IND vs AUS: ಭಾರತದ ಗೆಲುವಿಗೆ ಬೇಕು 540 ಎಸೆತಗಳಲ್ಲಿ 280 ರನ್ಸ್: ಕೊಹ್ಲಿ-ರಹಾನೆ ಮೇಲೆ ಎಲ್ಲರ ಕಣ್ಣು
Virat Kohli, Ajinkya Rahane
Vinay Bhat
|

Updated on: Jun 11, 2023 | 7:46 AM

Share

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಇಂದು ಕೊನೆಯ ದಿನದಾಟ ನಡೆಯಲಿದ್ದು ರೋಚಕತೆ ಸೃಷ್ಟಿಸಿದೆ. ದ್ವಿತೀಯ ಇನ್ನಿಂಗ್ಸ್​ನಲ್ಲಿ ಆಸೀಸ್ 270 ರನ್​ಗೆ ಡಿಕ್ಲೇರ್ ಘೋಷಿಸಿ 444 ರನ್​ಗಳ ಟಾರ್ಗೆಟ್ ನೀಡಿತು. ಸದ್ಯ ಗುರಿ ಬೆನ್ನಟ್ಟಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿದೆ. ಭಾರತದ ಗೆಲುವಿಗೆ ಇನ್ನೂ 280 ರನ್​ಗಳ ಅವಶ್ಯಕತೆಯಿದ್ದು, 90 ಓವರ್​ಗಳು ನೀಡಲಾಗಿದೆ. ವಿರಾಟ್ ಕೊಹ್ಲಿ (Virat Kohli)-ಅಜಿಂಕ್ಯ ರಹಾನೆ ಕ್ರೀಸ್​ನಲ್ಲಿದ್ದಾರೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್:

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆ ಪರ ಮಾರ್ನಸ್ ಲಾಬುಶೇನ್ (26) ಹಾಗೂ ಡೇವಿಡ್ ವಾರ್ನರ್ (43) 69 ರನ್​ಗಳ ಜೊತೆಯಾಟ ಆಡಿದರಷ್ಟೆ. ನಂತರ ಶುರುವಾಗಿದ್ದು ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಆಟ. ಹೆಡ್ ಅವರು ಈ ಪ್ರತಿಷ್ಠಿತ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡರು. ಮೊದಲ ದಿನ 3 ವಿಕೆಟ್ ಕಳೆದುಕೊಂಡು 327 ರನ್ ಕಲೆಹಾಕಿ ದೊಡ್ಡ ಮೊತ್ತದ ಮುನ್ಸೂಚನೆ ನೀಡಿದ್ದ ಆಸೀಸ್ 2ನೇ ದಿನ ಮೊದಲ ದಿನದ ಮೊತ್ತಕ್ಕೆ 142 ರನ್ ಸೇರಿಸುವಷ್ಟರಲ್ಲಿ ಉಳಿದ 7 ವಿಕೆಟ್‌ಗಳನ್ನು ಕಳೆದುಕೊಂಡಿತು. ಹೆಡ್ 163 ರನ್ ಗಳಿಸಿ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಸ್ಮಿತ್ ಆಟ 121 ರನ್​ಗೆ ಅಂತ್ಯವಾಯಿತು. ಆಸೀಸ್ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತದ ಪರ ಸಿರಾಜ್ 4 ವಿಕೆಟ್ ಕಿತ್ತರೆ ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2ವಿಕೆಟ್‌ಗಳನ್ನು ಪಡೆದರು.

WTC Final 2023: ನಿರೀಕ್ಷೆ ಹುಸಿಗೊಳಿಸಿದ ಐಪಿಎಲ್ ಹೀರೋ ಶುಭ್​ಮನ್ ಗಿಲ್

ಇದನ್ನೂ ಓದಿ
Image
Virat Kohli: ಆಸ್ಟ್ರೇಲಿಯಾ ವಿರುದ್ಧ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ
Image
WTC Final 2023: ‘ಪ್ಲೀಸ್ ನಿವೃತ್ತಿ ಘೋಷಿಸಿ’; ಕಳಪೆ ಆಟದಿಂದಾಗಿ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾದ ಪೂಜಾರ
Image
WTC Final 2023: ಫೈನಲ್ ಫೈಟ್: ಟೀಮ್ ಇಂಡಿಯಾ ಮುಂದಿದೆ 2 ಆಯ್ಕೆ..!
Image
WTC Final 2023: ಔಟಾ ಅಥವಾ ನಾಟೌಟಾ: ಹೊಸ ವಿವಾದಕ್ಕೆ ಕಾರಣವಾದ ಅಂಪೈರ್ ತೀರ್ಪು..!

ಭಾರತ ಮೊದಲ ಇನ್ನಿಂಗ್ಸ್:

ಭಾರತ ಪರ ಓಪನರ್​ಗಳಾದ ನಾಯಕ ರೋಹಿತ್​ ಶರ್ಮಾ (15) ಹಾಗೂ ಶುಭ್​ಮನ್​ ಗಿಲ್​ (13) ವೈಫಲ್ಯ ಅನುಭವಿಸಿದರು. ಚೇತೇಶ್ವರ ಪೂಜಾರ (14) ಹಾಗೂ ವಿರಾಟ್​ ಕೊಹ್ಲಿ (14) ಕೂಡ ನಿರಾಸೆ ಮೂಡಿಸಿದರು. ಇದರ ನಡುವೆ ಐದನೇ ವಿಕೆಟ್​ಗೆ ಅಜಿಂಕ್ಯ ರಹಾನೆ (89) ಹಾಗೂ ರವೀಂದ್ರ ಜಡೇಜಾ (48) ಉತ್ತಮ ಇನ್ನಿಂಗ್​ ಕಟ್ಟಿ ತಂಡಕ್ಕೆ ನೆರವಾದರು. 71 ರನ್​ಗಳ ಜೊತೆಯಾಟ ಆಡಿದರು. ಆಲ್​ರೌಂಡರ್ ಶಾರ್ದೂಲ್​ ಠಾಕೂರ್​ (51) ತಾಳ್ಮೆಯ ಬ್ಯಾಟಿಂಗ್​ ಮಾಡಿದರು. ಅಂತಿಮವಾಗಿ ಭಾರತ ಆಸಿಸ್​ ವಿರುದ್ಧ ಮೊದಲ ಇನ್ನಿಂಗ್ಸ್​ನಲ್ಲಿ 296 ರನ್​ ಗಳಿಸಿತು.

ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್:

ಎರಡನೇ ಇನ್ನಿಂಗ್ಸ್​ನಲ್ಲಿ ಡೇವಿಡ್​ ವಾರ್ನರ್ (1), ಉಸ್ಮಾನ್​ ಖ್ವಾಜಾ (13) ಬೇಗನೆ ನಿರ್ಗಮಿಸಿದರೆ, ಮೂರನೇ ವಿಕೆಟ್​ಗೆ ಮಾರ್ನಸ್ ಲಾಬುಶೇನ್ (41) ಹಾಗೂ ಸ್ಟೀವನ್ ಸ್ಮಿತ್ (34) 62 ರನ್​ಗಳ ಜೊತೆಯಾಟ ಆಡಿದರು. ಕ್ಯಾಮ್ರೋನ್ ಗ್ರೀನ್ 25 ರನ್ ಗಳಿಸಿದರೆ, ಅಲೆಕ್ಸ್ ಕ್ಯಾರಿ ಅಜೇಯ 66 ರನ್ ಸಿಡಿಸಿದರು. ಆಸ್ಟ್ರೇಲಿಯಾ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿ ಭಾರತಕ್ಕೆ 444 ರನ್​ಗಳ ಟಾರ್ಗೆಟ್ ನೀಡಿತು. ಭಾರತ ಪರ ಜಡೇಜಾ 3 ವಿಕೆಟ್ ಪಡೆದರೆ, ಉಮೇಶ್ ಯಾದವ್ ಹಾಗೂ ಶಮಿ ತಲಾ 2 ವಿಕೆಟ್ ಕಿತ್ತರು.

ಟಾರ್ಗೆಟ್ ಬೆನ್ನಟ್ಟುತ್ತಿರುವ ಭಾರತ:

ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್​ನಲ್ಲಿ ಕೂಡ ಉತ್ತಮ ಆರಂಭ ಪಡೆಯಲಿಲ್ಲ. ಐಪಿಎಲ್ ಹೀರೋ ಶುಭ್​ಮನ್ ಗಿಲ್ 18 ರನ್​ಗೆ ಸುಸ್ತಾದರು. ನಾಯಕ ರೋಹಿತ್ ಶರ್ಮಾ 60 ಎಸೆತಗಳಲ್ಲಿ 43 ರನ್​ಗೆ ಔಟಾದರೆ, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ 27 ರನ್​ಗೆ ನಿರ್ಗಮಿಸಿದರು. ನಂತರ ಜೊತೆಯಾದ ವಿರಾಟ್ ಕೊಹ್ಲಿ (ಅಜೇಯ 44) ಹಾಗೂ ಅಜಿಂಕ್ಯ ರಹಾನೆ (ಅಜೇಯ 20) ಎಚ್ಚರಿಕೆಯ ಬ್ಯಾಟಿಂಗ್ ನಡೆಸಿ ಅಂತಿಮ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ನಾಲ್ಕನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 3 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ