AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದ ಕೈತಪ್ಪಿದ ಆತಿಥ್ಯ; ಭಾರತದಲ್ಲಿ ನಡೆಯಲಿದೆ ಮಹಿಳಾ ಚಾಂಪಿಯನ್ಸ್ ಟ್ರೋಫಿ

2027ರ ಐಸಿಸಿ ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯದ ಹಕ್ಕನ್ನು ಭಾರತ ಪಡೆದುಕೊಂಡಿದೆ. ರಾಜಕೀಯ ಹಸ್ತಕ್ಷೇಪದಿಂದಾಗಿ ಶ್ರೀಲಂಕಾ ಈ ಅವಕಾಶ ಕಳೆದುಕೊಂಡಿದ್ದು, ಚೊಚ್ಚಲ ಟಿ20 ಮಾದರಿಯ ಈ ಪಂದ್ಯಾವಳಿಯನ್ನು ಭಾರತದಲ್ಲಿ ನಡೆಸಲಾಗುತ್ತದೆ. ಮುಂಬೈ ಮತ್ತು ವಡೋದರಾ ನಗರಗಳಲ್ಲಿ 2027ರ ಫೆಬ್ರವರಿಯಲ್ಲಿ ಆರು ತಂಡಗಳ ಮಧ್ಯೆ ಸ್ಪರ್ಧೆ ನಡೆಯಲಿದ್ದು, ಭಾರತ ಚಾಂಪಿಯನ್ ಆಗುವ ಗುರಿ ಹೊಂದಿದೆ.

ಶ್ರೀಲಂಕಾದ ಕೈತಪ್ಪಿದ ಆತಿಥ್ಯ; ಭಾರತದಲ್ಲಿ ನಡೆಯಲಿದೆ ಮಹಿಳಾ ಚಾಂಪಿಯನ್ಸ್ ಟ್ರೋಫಿ
ಮಹಿಳಾ ಚಾಂಪಿಯನ್ಸ್ ಟ್ರೋಫಿImage Credit source: ICC X
ಪೃಥ್ವಿಶಂಕರ
|

Updated on:Sep 02, 2026 | 8:38 PM

Share

ಒಂದರ ಹಿಂದೆ ಒಂದರಂತೆ ಐಸಿಸಿ ಈವೆಂಟ್​ಗಳಿಗೆ ಆತಿಥ್ಯವಹಿಸುತ್ತಿರುವ ಭಾರತ ಇದೀಗ ಮುಂದಿನ ವರ್ಷ ನಡೆಯಲಿರುವ ಮತ್ತೊಂದು ಐಸಿಸಿ ಟೂರ್ನಿಯ ಆತಿಥ್ಯದ ಹಕ್ಕನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ವಾಸ್ತವವಾಗಿ ಇದೇ ಮೊದಲ ಬಾರಿಗೆ ಪುರುಷರ ಕ್ರಿಕೆಟ್​ನಂತೆ ಮಹಿಳೆಯರ ಕ್ರಿಕೆಟ್​ನಲ್ಲೂ ಚಾಂಪಿಯನ್ಸ್ ಟ್ರೋಫಿಯನ್ನು ನಡೆಸಲು ಐಸಿಸಿ ತೀರ್ಮಾನಿಸಿದೆ. ಅದರಂತೆ ಈ ಟೂರ್ನಿ ಮುಂದಿನ ವರ್ಷ ಅಂದರೆ 2027 ರ ಫೆಬ್ರವರಿಯಲ್ಲಿ ನಡೆಯಲಿದೆ. ಇದೀಗ ಈ ಟೂರ್ನಿಯ ಆತಿಥ್ಯ ಭಾರತದ ಪಾಲಾಗಿದೆ. ಭಾರತಕ್ಕೂ ಮುನ್ನ ಈ ಟೂರ್ನಿಯನ್ನು ಶ್ರೀಲಂಕಾದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಶ್ರೀಲಂಕಾ ಕ್ರಿಕೆಟ್​ನಲ್ಲಿ ರಾಜಕೀಯದ ಹಸ್ತಕ್ಷೇಪದಿಂದಾಗಿ ಐಸಿಸಿ, ಈ ಪಂದ್ಯಾವಳಿಯ ಆತಿಥ್ಯವನ್ನು ಶ್ರೀಲಂಕಾದಿಂದ ಕಸಿದುಕೊಂಡು ಭಾರತಕ್ಕೆ ಹಸ್ತಾಂತರಿಸಿದೆ.

ಭಾರತದಲ್ಲಿ ನಡೆಸಲಾಗುವುದು

ಸೆಪ್ಟೆಂಬರ್ 2 ರ ಬುಧವಾರದಂದು ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಐಸಿಸಿ, ಮಹಿಳಾ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಆವೃತ್ತಿಯನ್ನು ಭಾರತದಲ್ಲಿ ನಡೆಸಲಾಗುವುದು ಎಂದು ಘೋಷಿಸಿದೆ. ಶ್ರೀಲಂಕಾ ಮೂಲತಃ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿತ್ತು, ಆದರೆ ಪ್ರಸ್ತುತ ದೇಶದ ಕ್ರಿಕೆಟ್ ಮಂಡಳಿಯನ್ನು ಸರ್ಕಾರ ನೇಮಿಸಿದ ಸಮಿತಿಯು ನಡೆಸುತ್ತಿದೆ. ಇದು ಐಸಿಸಿ ನಿಯಮಗಳಿಗೆ ವಿರುದ್ಧವಾಗಿದೆ. ಐಸಿಸಿ ಸದಸ್ಯ ರಾಷ್ಟ್ರದ ಕ್ರಿಕೆಟ್ ಮಂಡಳಿಯಲ್ಲಿ ರಾಜಕೀಯ ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ. ಇದರ ಪರಿಣಾಮವಾಗಿ, ಶ್ರೀಲಂಕಾದಿಂದ ಈ ಪಂದ್ಯಾವಳಿಯ ಆತಿಥ್ಯದ ಹಕ್ಕನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಐಸಿಸಿ ತಿಳಿಸಿದೆ.

ಆರು ತಂಡಗಳು ಭಾಗವಹಿಸಲಿವೆ

ಇನ್ನು ಈ ಚೊಚ್ಚಲ ಆವೃತ್ತಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಆರು ತಂಡಗಳು ಭಾಗವಹಿಸಲಿದ್ದು, ಈ ಪಂದ್ಯಾವಳಿ ಟಿ20 ಮಾದರಿಯಲ್ಲಿ ನಡೆಯಲಿದೆ. ಭಾಗವಹಿಸುವ ತಂಡಗಳನ್ನು ಐಸಿಸಿ ಮಹಿಳಾ ಟಿ20 ಶ್ರೇಯಾಂಕದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಈ ಪಂದ್ಯಾವಳಿ ಫೆಬ್ರವರಿ 14 ರಿಂದ ಫೆಬ್ರವರಿ 28 ರವರೆಗೆ ನಡೆಯಲಿದ್ದು, ಎಲ್ಲಾ ಪಂದ್ಯಗಳು ಎರಡು ನಗರಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ ಈ ಪಂದ್ಯಾವಳಿಗೆ ವಡೋದರಾ ಮತ್ತು ಮುಂಬೈ ಆತಿಥ್ಯವಹಿಸಲಿವೆ. ಪಂದ್ಯಾವಳಿಯು ರೌಂಡ್-ರಾಬಿನ್ ಸ್ವರೂಪವಾಗಿದ್ದು, ಎಲ್ಲಾ ಆರು ತಂಡಗಳು ಪರಸ್ಪರ ಒಮ್ಮೆ ಮುಖಾಮುಖಿಯಾಗುತ್ತವೆ.

ಸತತ ಎರಡನೇ ಐಸಿಸಿ ಈವೆಂಟ್

ಐಸಿಸಿ ಪ್ರಕಾರ, ಭಾರತವನ್ನು ಹೊರತುಪಡಿಸಿ, ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ಕೂಡ ಈ ಪಂದ್ಯಾವಳಿಯನ್ನು ಆಯೋಜಿಸಲು ಸ್ಪರ್ಧಿಗಳಾಗಿದ್ದವು. ಆದರೆ ಸೆಪ್ಟೆಂಬರ್ 1 ರಂದು ನಡೆದ ಐಸಿಸಿ ಸಭೆಯಲ್ಲಿ ಅಂತಿಮವಾಗಿ ಭಾರತಕ್ಕೆ ಆತಿಥ್ಯದ ಹಕ್ಕು ನೀಡಲು ತೀರ್ಮಾನಿಸಲಾಗಿದೆ. ಇದು ಸುಮಾರು ಒಂದೂವರೆ ವರ್ಷಗಳಲ್ಲಿ ಭಾರತದಲ್ಲಿ ನಡೆಯುತ್ತಿರುವ ಎರಡನೇ ಪ್ರಮುಖ ಮಹಿಳಾ ಕ್ರಿಕೆಟ್ ಪಂದ್ಯಾವಳಿಯಾಗಲಿದೆ. ಇದಕ್ಕೂ ಮೊದಲು, ಅಕ್ಟೋಬರ್-ನವೆಂಬರ್ 2025 ರಲ್ಲಿ ಭಾರತದಲ್ಲಿ ಮಹಿಳಾ ಏಕದಿನ ವಿಶ್ವಕಪ್ ನಡೆದಿತ್ತು. ಅಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಚಾಂಪಿಯನ್ ಆಯಿತು. ಅಂತಹ ಪರಿಸ್ಥಿತಿಯಲ್ಲಿ, ಮತ್ತೊಮ್ಮೆ ಭಾರತ ತಂಡವು ತನ್ನ ತವರು ಅಭಿಮಾನಿಗಳ ಮುಂದೆ ಮೊದಲ ಆವೃತ್ತಿಯಲ್ಲಿ ಚಾಂಪಿಯನ್ ಆಗುವ ನಿರೀಕ್ಷೆಯಿದೆ. ಟೀಂ ಇಂಡಿಯಾವನ್ನು ಹೊರತುಪಡಿಸಿ, ಆಸ್ಟ್ರೇಲಿಯಾ, ಇಂಗ್ಲೆಂಡ್, ಶ್ರೀಲಂಕಾ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಕೂಡ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:29 pm, Wed, 2 September 26

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!