AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ದಟ್ಟ ಮಂಜಿನಿಂದ 4ನೇ ಟಿ20 ಪಂದ್ಯ ರದ್ದು; ಸರಣಿಯಲ್ಲಿ ಭಾರತದ ಮೇಲುಗೈ

India vs South Africa 4th T20 Cancelled:ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಲಕ್ನೋದಲ್ಲಿ ರದ್ದಾಗಿದೆ. ಹವಾಮಾನ ವೈಪರಿತ್ಯ, ದಟ್ಟ ಮಂಜು ಕ್ರೀಡಾಂಗಣವನ್ನು ಆವರಿಸಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್​ಗಳು ನಿರ್ಧರಿಸಿದರು. ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಈ ಪಂದ್ಯ ಟಾಸ್ ಕೂಡ ನಡೆಯದೆ ಸ್ಥಗಿತಗೊಂಡಿತು. ಇದು ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

IND vs SA: ದಟ್ಟ ಮಂಜಿನಿಂದ 4ನೇ ಟಿ20 ಪಂದ್ಯ ರದ್ದು; ಸರಣಿಯಲ್ಲಿ ಭಾರತದ ಮೇಲುಗೈ
Ind Vs Sa 4th T20
ಪೃಥ್ವಿಶಂಕರ
|

Updated on:Dec 17, 2025 | 10:22 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಉಭಯ ತಂಡಗಳ ನಡುವಿನ ಈ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಭಾರೀ ಮುಸುಕು ಹಾಗೂ ದಟ್ಟ ಮಂಜು ಮೈದಾನದ ತುಂಬಾ ಹರಡಿದ್ದರಿಂದ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಪಂದ್ಯ ಟಾಸ್ ಕೂಡ ನಡೆಯದೆ ರದ್ದಾಗಿದೆ. ವಾಸ್ತವವಾಗಿ ಪೂರ್ವನಿಗದಿಯಂತೆ ಈ ನಾಲ್ಕನೇ ಪಂದ್ಯದ ಟಾಸ್ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ನಡೆಯಬೇಕಿತ್ತು. ಆ ಬಳಿಕ ಸಂಜೆ 7 ಗಂಟೆಗೆ ಆಟ ಆರಂಭವಾಗಬೇಕಿತ್ತು. ಆದರೆ ರಾತ್ರಿ 9:30 ರವರೆಗೂ ಕಾದರೂ ಮಂಜು ಕಡಿಮೆಯಾಗದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು.

6 ಬಾರಿ ಟಾಸ್ ಮುಂದೂಡಿದ ಅಂಪೈರ್ಸ್​

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಪಂದ್ಯದ ಟಾಸ್ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ನಡೆಯಬೇಕಿತ್ತು. ಆ ಬಳಿಕ ಪಂದ್ಯ ಸಂಜೆ 7 ಗಂಟೆಗೆ ಪ್ರಾರಂಭವಾಗಬೇಕಿತ್ತು. ಆದರೆ ಲಕ್ನೋ ಮೈದಾನದಲ್ಲಿ ಮಂಜು ಆವರಿಸಿದರಿಂದ ಟಾಸ್ ನಡೆಯಲು ಅವಕಾಶ ನೀಡಲಿಲ್ಲ. ಪಂದ್ಯದ ಅಧಿಕಾರಿಗಳು ಬರೋಬ್ಬರಿ 6 ಬಾರಿ ಟಾಸ್ ಮುಂದೂಡಿದರು. ಆದಾಗ್ಯೂ ಪಂದ್ಯವನ್ನು ನಡೆಸಲು ಸಾಧ್ಯವಾಗಲಿಲ್ಲ. ಮಂಜಿನ ಕಾರಣ, ಪಂದ್ಯದ ಅಧಿಕಾರಿಗಳು ಮೊದಲ ತಪಾಸಣೆಯನ್ನು ಸಂಜೆ 6:50 ಕ್ಕೆ ನಿಗದಿಪಡಿಸಿದರು. ಪರಿಸ್ಥಿತಿ ಹದಗೆಟ್ಟಂತೆ, ತಪಾಸಣೆ ಸಮಯವನ್ನು ಹಲವಾರು ಬಾರಿ ವಿಸ್ತರಿಸಲಾಯಿತು. ನಂತರದ ತಪಾಸಣೆಗಳನ್ನು ಸಂಜೆ 7:30 ಕ್ಕೆ, ನಂತರ ರಾತ್ರಿ 8:00, ರಾತ್ರಿ 8:30, ರಾತ್ರಿ 9:00 ಕ್ಕೆ ಮತ್ತು ಅಂತಿಮವಾಗಿ, ಅಂತಿಮ ತಪಾಸಣೆಯನ್ನು ರಾತ್ರಿ 9:25 ಕ್ಕೆ ನಡೆಸಲಾಯಿತು.

ಐಸಿಸಿ ನಿಯಮಗಳ ಪ್ರಕಾರ, ಭಾರತ ಹಾಗೂ ದಕ್ಷಿಣ ಆಫ್ರಿಕಾ ಪಂದ್ಯವನ್ನು ತಲಾ ಐದು ಓವರ್‌ಗಳಾದರೂ ಆಡಿಸಬೇಕಾದರೆ, ಪಂದ್ಯ ರಾತ್ರಿ 9:46 ರೊಳಗೆ ಆರಂಭವಾಗಬೇಕಿತ್ತು. ಆದರೆ ರಾತ್ರಿ 9:25 ಕ್ಕೆ ಅಂಪೈರ್​ಗಳು ಪರಿಶೀಲಿಸಿದಾಗ ಮೈದಾನ ಆಟಕ್ಕೆ ಸೂಕ್ತವಾಗಿರದ ಕಾರಣ, ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಪೈರ್‌ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದರು.

IND vs SA: ಟಿ20 ಸರಣಿಯಿಂದ ಹೊರಬಿದ್ದ ಶುಭ್​ಮನ್ ಗಿಲ್! ಇಂಜುರಿಯೋ, ಉದ್ದೇಶಪೂರ್ವಕವೋ?

ಅಜೇಯ ಓಟ ಮುಂದುವರೆಸಿದ ಭಾರತ

4ನೇ ಟಿ20 ಪಂದ್ಯ ರದ್ದಾಗಿರುವುದರಿಂದ ಭಾರತ ತಂಡ ಸರಣಿ ಸೋಲುವ ಆತಂಕದಿಂದ ಹೊರಬಂದಿದೆ. ಈ ಸರಣಿಯಲ್ಲಿ ಈಗಾಗಲೇ 2-1 ಅಂತರದಿಂದ ಮುನ್ನಡೆ ಪಡೆದುಕೊಂಡಿರುವ ಸೂರ್ಯ ಪಡೆ, ಕೊನೆಯ ಪಂದ್ಯವನ್ನು ಗೆದ್ದರೆ, ಸರಣಿ 3-1 ಅಂತರದಿಂದ ಭಾರತದ ಪಾಲಾಗಲಿದೆ. ಒಂದು ವೇಳೆ ಸೋತರೆ ಸರಣಿ 2-2 ರಿಂದ ಅಂತ್ಯವಾಗಲಿದೆ.ಈ ಮೂಲಕ ಭಾರತ ಸತತ 11 ಸರಣಿಗಳ ಅಜೇಯ ಓಟವನ್ನು ಭಾರತ ಮುಂದುವರೆಸಲಿದೆ.

Published On - 9:37 pm, Wed, 17 December 25

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?