AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ- ಆಫ್ರಿಕಾ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ! ಇಲ್ಲಿದೆ ಡರ್ಬನ್‌ ಹವಾಮಾನ ವರದಿ

Durban weather forecast: ಭಾರತ ತಂಡ, ದಕ್ಷಿಣ ಆಫ್ರಿಕಾದಲ್ಲಿ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಮೊದಲ ಪಂದ್ಯ ನವೆಂಬರ್ 8 ರಂದು ಡರ್ಬನ್‌ನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿದ್ದು, ಪಂದ್ಯ ರದ್ದಾಗಬಹುದು.

IND vs SA: ಭಾರತ- ಆಫ್ರಿಕಾ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ! ಇಲ್ಲಿದೆ ಡರ್ಬನ್‌ ಹವಾಮಾನ ವರದಿ
ಡರ್ಬನ್ ಹವಾಮಾನ
ಪೃಥ್ವಿಶಂಕರ
|

Updated on:Nov 07, 2024 | 9:25 PM

Share

ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ, ನಾಳೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ 4 ಪಂದ್ಯಗಳ ಟಿ20 ಸರಣಿಯಲ್ಲಿ ನಿರತವಾಗಲಿದೆ. ಈ ಸರಣಿಯ ಮೊದಲ ಪಂದ್ಯ ನಾಳೆ ಅಂದರೆ ನವೆಂಬರ್ 8 ರಂದು ಡರ್ಬನ್‌ನಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಲು ಬಯಸಿದೆ. ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಈ ವರ್ಷ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಹೀಗಾಗಿ ಈ ಸರಣಿಯನ್ನು ಗೆಲ್ಲುವ ಮೂಲಕ ಟಿ20 ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಆಫ್ರಿಕನ್ ತಂಡವಿದೆ. ಆದರೆ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಬಹುದು ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಹವಾಮಾನ ವರದಿ

ಹವಾಮಾನ ವರದಿಯ ಪ್ರಕಾರ, ಡರ್ಬನ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಈ ಪಂದ್ಯವು ಸ್ಥಳೀಯ ಕಾಲಮಾನ ಸಂಜೆ 5:00 ಗಂಟೆಗೆ ಮತ್ತು ಭಾರತೀಯ ಕಾಲಮಾನ ರಾತ್ರಿ 8:30 ಕ್ಕೆ ಆರಂಭವಾಗಲಿದೆ. ಅಕ್ಯುವೆದರ್ ಪ್ರಕಾರ, ಪಂದ್ಯದ ಆರಂಭದಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಯಿಲ್ಲ. ಆದರೆ ಸ್ಥಳೀಯ ಕಾಲಮಾನ ಸಂಜೆ 7:00 ಗಂಟೆಗೆ ಮಳೆಯ ಸಂಭವನೀಯತೆ ಶೇಕಡಾ 47 ರಷ್ಟಿರಲಿದ್ದು, ಆ ಬಳಿಕ ಅದರ ತೀವ್ರತೆ ಹೆಚ್ಚಾಗಲಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿದ್ದು, ಪಂದ್ಯ ರದ್ದಾಗಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವೈಶಾಖ್ ವಿಜಯಕುಮಾರ್, ಅವೇಶ್ ಖಾನ್, ಯಶ್ ದಯಾಳ್.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಓಟ್ನಿಯಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹಲಾಲಿ ಮಾಪೊಂಗ್ವಾನಾ, ನ್ಕಾಬಾ ಪೀಟರ್, ಆಂಡಿಲ್ ಸಿಮೆಲಾಬ್ಸ್, ಆಂಡಿಲೆ ರಿಕೆಲಾಬ್ಲಾಮ್ .

ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ- ನವೆಂಬರ್ 8
  • ಎರಡನೇ ಟಿ20 ಪಂದ್ಯ- ನವೆಂಬರ್ 10
  • ಮೂರನೇ ಟಿ20 ಪಂದ್ಯ- ನವೆಂಬರ್ 13
  • ನಾಲ್ಕನೇ ಟಿ20 ಪಂದ್ಯ- ನವೆಂಬರ್ 15

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Thu, 7 November 24

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು