AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಸದಸ್ಯರ ಟೀಮ್ ಇಂಡಿಯಾದಲ್ಲಿ 9 ಬೌಲರ್​​ಗಳು..!

India T20 Squad For England: ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಗಾಗಿ 15 ಸದಸ್ಯರ ಟೀಮ್ ಇಂಡಿಯಾವನ್ನು ಹೆಸರಿಸಲಾಗಿದೆ. ಈ ತಂಡದಲ್ಲಿ ಆಲ್​ರೌಂಡರ್ ಸೇರಿದಂತೆ 9 ಬೌಲರ್​​ಗಳು ಇರುವುದು ವಿಶೇಷ. ಅಂದರೆ ಭಾರತ ತಂಡವು ಈ ಬಾರಿ ಆಲ್​ರೌಂಡರ್​ಗಳ ಆಯ್ಕೆಯೊಂದಿಗೆ ಬೌಲರ್​ಗಳಿಗೆ ಪ್ರಾಶಸ್ತ್ಯ ನೀಡಿರುವುದು ವಿಶೇಷ.

15 ಸದಸ್ಯರ ಟೀಮ್ ಇಂಡಿಯಾದಲ್ಲಿ 9 ಬೌಲರ್​​ಗಳು..!
Team India
ಝಾಹಿರ್ ಯೂಸುಫ್
|

Updated on: Jan 12, 2025 | 7:34 AM

Share

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಿಕೆಟ್ ಕೀಪರ್​​ಗಳಾಗಿ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿರುವುದು ಸಂಜು ಸ್ಯಾಮ್ಸನ್ ಹಾಗೂ ಧ್ರುವ್ ಜುರೇಲ್.

ಹಾಗೆಯೇ ಈ ತಂಡದಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ಆರು ಮಂದಿ ಆಯ್ಕೆಯಾದರೆ, ಆಲ್​ರೌಂಡರ್​ಗಳಾಗಿ ನಾಲ್ವರಿಗೆ ಮಣೆ ಹಾಕಲಾಗಿದೆ. ಇನ್ನು ಪರಿಪೂರ್ಣ ಬೌಲರ್​​ಗಳಾಗಿ ಐವರು ಸ್ಥಾನಗಿಟ್ಟಿಸಿಕೊಂಡಿದ್ದಾರೆ.

9 ಬೌಲರ್​​ಗಳ ಪಡೆ:

ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ 9 ಬೌಲರ್​ಗಳ ಆಯ್ಕೆಗಳಿವೆ. ಇಲ್ಲಿ ಪೂರ್ಣ ಪ್ರಮಾಣದ ಬೌಲರ್​​ಗಳಾಗಿ ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್ ಹಾಗೂ ವರುಣ್ ಚಕ್ರವರ್ತಿ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ಆಲ್​ರೌಂಡರ್​ಗಳ ರೂಪದಲ್ಲಿ ಟೀಮ್ ಇಂಡಿಯಾಗೆ ನಾಲ್ವರು ಬೌಲರ್​​ಗಳ ಆಯ್ಕೆಗಳಿವೆ. ಅದರಂತೆ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ರೆಡ್ಡಿ ಅವರನ್ನು ಬೌಲರ್​ಗಳಾಗಿ ಬಳಸಿಕೊಳ್ಳಬಹುದು.

ವೇಗಿಗಳು/ಸ್ಪಿನ್ನರ್​ಗಳು ಯಾರೆಲ್ಲಾ?

ಭಾರತ ತಂಡದಲ್ಲಿ ಈ ಬಾರಿ ವೇಗಿಗಳಾಗಿ ಯಾರೆಲ್ಲಾ ಎಂದು ನೋಡುವುದಾದರೆ…

  • ಮೊಹಮ್ಮದ್ ಶಮಿ
  • ಅರ್ಷದೀಪ್ ಸಿಂಗ್
  • ಹರ್ಷಿತ್ ರಾಣಾ
  • ಹಾರ್ದಿಕ್ ಪಾಂಡ್ಯ
  • ನಿತೀಶ್ ಕುಮಾರ್ ರೆಡ್ಡಿ

ಸ್ಪಿನ್ನರ್​ಗಳು:

  • ರವಿ ಬಿಷ್ಣೋಯ್
  • ವರುಣ್ ಚಕ್ರವರ್ತಿ
  • ಅಕ್ಷರ್ ಪಟೇಲ್
  • ವಾಷಿಂಗ್ಟನ್ ಸುಂದರ್

ಇದನ್ನೂ ಓದಿ: IPL 2025: RCB ತಂಡ ನಾಯಕ ಯಾರು? ಸ್ಪಷ್ಟನೆ ನೀಡಿದ ಕೋಚ್ ಆ್ಯಂಡಿ ಫ್ಲವರ್

ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ಟಿ20 ತಂಡ ಈ ಕೆಳಗಿನಂತಿದೆ…

ಬ್ಯಾಟರ್ಸ್: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ರಿಂಕು ಸಿಂಗ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್).

ಬೌಲರ್‌ಗಳು: ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ

ಆಲ್ ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!