India Squad For Asia cup 2022: ಏಷ್ಯಾಕಪ್​ಗಾಗಿ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ

India Squad For Asia cup 2022: ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ.

India Squad For Asia cup 2022: ಏಷ್ಯಾಕಪ್​ಗಾಗಿ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ
Team India
Follow us
| Updated By: ಝಾಹಿರ್ ಯೂಸುಫ್

Updated on:Aug 08, 2022 | 11:27 PM

India Squad For Asia cup 2022: ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್ (Asia Cup 2022) ಟಿ20 ಟೂರ್ನಿಗಾಗಿ ಭಾರತ ತಂಡವನ್ನು (Team India) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇನ್ನು ಕಳೆದ ಕೆಲ ಸರಣಿಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಏಷ್ಯಾಕಪ್​ ಮೂಲಕ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಗಾಯದ ಕಾರಣ ಹಲವು ಸರಣಿ ತಪ್ಪಿಸಿಕೊಂಡಿದ್ದ ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಕೂಡ ತಂಡಕ್ಕೆ ಮರಳಿದ್ದಾರೆ.

ಇನ್ನು ಗಾಯದ ಸಮಸ್ಯೆಗೆ ಒಳಗಾಗಿರುವ ಟೀಮ್ ಇಂಡಿಯಾ ವೇಗಿಗಳಾದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಇನ್ನುಳಿದಂತೆ ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯಲ್ಲಿ ಕಾಣಿಸಿಕೊಂಡ ಪ್ರಮುಖ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಏಷ್ಯಾಕಪ್​ಗಾಗಿ ಭಾರತ ತಂಡ ಈ ಕೆಳಗಿನಂತಿದೆ.

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ:

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

ಏಷ್ಯಾ ಕಪ್ ತಂಡಗಳ ಗ್ರೂಪ್​:

  • ಗ್ರೂಪ್ ಎ ತಂಡಗಳು- ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ ತಂಡ
  • ಗ್ರೂಪ್ ಬಿ ತಂಡಗಳು- ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ

ಸಂಪೂರ್ಣ ವೇಳಾಪಟ್ಟಿ ಹೀಗಿದೆ:

  • ಆಗಸ್ಟ್ 27 – ಶ್ರೀಲಂಕಾ vs ಅಫ್ಘಾನಿಸ್ತಾನ- ದುಬೈ
  • ಆಗಸ್ಟ್ 28 – ಭಾರತ vs ಪಾಕಿಸ್ತಾನ- ದುಬೈ
  • ಆಗಸ್ಟ್ 30 – ಬಾಂಗ್ಲಾದೇಶ vs ಅಫ್ಘಾನಿಸ್ತಾನ- ಶಾರ್ಜಾ
  • ಆಗಸ್ಟ್ 31 – ಭಾರತ vs ಕ್ವಾಲಿಫೈಯರ್ ಟೀಮ್- ದುಬೈ
  • ಸೆಪ್ಟೆಂಬರ್ 1 – ಶ್ರೀಲಂಕಾ vs ಬಾಂಗ್ಲಾದೇಶ- ದುಬೈ
  • ಸೆಪ್ಟೆಂಬರ್ 2- ಪಾಕಿಸ್ತಾನ vs ಕ್ವಾಲಿಫೈಯರ್ ಟೀಮ್- ಶಾರ್ಜಾ

ಸೂಪರ್- 4 ವೇಳಾಪಟ್ಟಿ:

  • ಸೆಪ್ಟೆಂಬರ್ 3 – B1 vs B2 – ಶಾರ್ಜಾ
  • ಸೆಪ್ಟೆಂಬರ್ 4 A1 vs A2 – ದುಬೈ
  • ಸೆಪ್ಟೆಂಬರ್ 6 A1 vs B1 – ದುಬೈ
  • ಸೆಪ್ಟೆಂಬರ್ 7 A2 vs B2 – ದುಬೈ
  • ಸೆಪ್ಟೆಂಬರ್ 8 A1 vs B2 – ದುಬೈ
  • ಸೆಪ್ಟೆಂಬರ್ 9 B1 vs- A2 ದುಬೈ
  • ಸೆಪ್ಟೆಂಬರ್ 11- ಫೈನಲ್ ಪಂದ್ಯ- ದುಬೈ

ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತವೆ. ಇಲ್ಲಿ ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ. ಅಂದರೆ ಎ ಗ್ರೂಪ್​ನಿಂದ 2 ತಂಡ, ಬಿ ಗ್ರೂಪ್​ನಿಂದ 2 ತಂಡಗಳು ಮುಂದಿನ ಹಂತಕ್ಕೇರಲಿದೆ. ಇನ್ನು ಸೆಪ್ಟೆಂಬರ್ 3 ರಿಂದ ಸೂಪರ್- 4 ತಂಡಗಳ ಮುಖಾಮುಖಿ ಶುರುವಾಗಲಿದೆ.

Published On - 9:14 pm, Mon, 8 August 22

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ