AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ಆರು ಬ್ಯಾಟರ್​ಗಳು, ಮೂವರು ಆಲ್​ರೌಂಡರ್​ಗಳು..!

India Test Squad: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಇನ್ನು 2ನೇ ಟೆಸ್ಟ್ ಪಂದ್ಯವು ಮಾರ್ಚ್ 27 ರಿಂದ ಕಾನ್ಪುರದಲ್ಲಿ ಆರಂಭವಾಗಲಿದೆ. ಇದಾದ ಬಳಿಕ ಉಭಯ ತಂಡಗಳು ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ.

ಟೀಮ್ ಇಂಡಿಯಾದಲ್ಲಿ ಆರು ಬ್ಯಾಟರ್​ಗಳು, ಮೂವರು ಆಲ್​ರೌಂಡರ್​ಗಳು..!
India Squad
ಝಾಹಿರ್ ಯೂಸುಫ್
|

Updated on:Sep 09, 2024 | 8:01 AM

Share

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲ ಟೆಸ್ಟ್ ಪಂದ್ಯಕ್ಕಾಗಿ ಘೋಷಿಸಲಾಗಿರುವ 16 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಎಡಗೈ ವೇಗಿ ಯಶ್ ದಯಾಳ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಹಾಗೆಯೇ ಈ ಸರಣಿಯ ಮೂಲಕ ರಿಷಭ್ ಪಂತ್ ಭಾರತ ಟೆಸ್ಟ್ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.

ಇನ್ನು ಈ ಬಾರಿ ಆಯ್ಕೆ ಮಾಡಲಾದ 16 ಸದಸ್ಯರಲ್ಲಿ ಆರು ಪರಿಪೂರ್ಣ ಬ್ಯಾಟರ್​ಗಳಿದ್ದಾರೆ. ಇವರ ಜೊತೆ ಮೂವರು ಆಲ್​ರೌಂಡರ್​ಗಳಿಗೆ ಸ್ಥಾನ ನೀಡಲಾಗಿದೆ. ಹಾಗೆಯೇ ವಿಕೆಟ್ ಕೀಪರ್​ಗಳಾಗಿ ಇಬ್ಬರಿದ್ದರೆ, ಬೌಲರ್​ಗಳಾಗಿ ಐವರಿಗೆ ಸ್ಥಾನ ಕಲ್ಪಿಸಲಾಗಿದೆ.

  • ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಸ್ಥಾನ ಪಡೆದಿದ್ದಾರೆ.
  • ವಿಕೆಟ್​ ಕೀಪರ್​ಗಳಾಗಿ ಈ ಬಾರಿ ಸ್ಥಾನಗಿಟ್ಟಿಸಿಕೊಂಡಿರುವುದು ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್.
  • ಆಲ್​ರೌಂಡರ್​ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ.
  • ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಹಾಗೂ ಆಕಾಶ್ ದೀಪ್ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ತಂಡದಲ್ಲಿದ್ದಾರೆ.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!

ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಬಿಸಿಸಿಐ ಬಲಿಷ್ಠ ತಂಡವನ್ನೇ ಪ್ರಕಟಿಸಿದೆ. ಇನ್ನು 2ನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಬದಲಾಗುವ ಸಾಧ್ಯತೆಯಿದೆ. ಅಂದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯಿದ್ದು, ಈ ಮೂಲಕ ದುಲೀಪ್ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಮಣೆಹಾಕಬಹುದು. ಹೀಗಾಗಿಯೇ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಮಾತ್ರ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡದ ಈ ಕೆಳಗಿನಂತಿದೆ…

  1. ರೋಹಿತ್ ಶರ್ಮಾ (ನಾಯಕ)
  2. ಯಶಸ್ವಿ ಜೈಸ್ವಾಲ್
  3. ಶುಭ್​ಮನ್ ಗಿಲ್
  4. ವಿರಾಟ್ ಕೊಹ್ಲಿ
  5. ಸರ್ಫರಾಝ್ ಖಾನ್
  6. ಕೆಎಲ್ ರಾಹುಲ್,
  7. ರಿಷಭ್ ಪಂತ್ (ವಿಕೆಟ್ ಕೀಪರ್)
  8. ಧ್ರುವ್ ಜುರೇಲ್ (ವಿಕೆಟ್ ಕೀಪರ್)
  9. ರವಿಚಂದ್ರನ್ ಅಶ್ವಿನ್
  10. ರವೀಂದ್ರ ಜಡೇಜಾ
  11. ಕುಲ್ದೀಪ್ ಯಾದವ್
  12. ಅಕ್ಷರ್ ಪಟೇಲ್
  13. ಮೊಹಮ್ಮದ್ ಸಿರಾಜ್
  14. ಜಸ್​ಪ್ರೀತ್ ಬುಮ್ರಾ
  15. ಆಕಾಶ್ ದೀಪ್
  16. ಯಶ್ ದಯಾಳ್.

ಭಾರತ vs ಬಾಂಗ್ಲಾದೇಶ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಗುರುವಾರ, 19 ಸೆಪ್ಟೆಂಬರ್ 2024 9:30 AM ಚೆನ್ನೈ
2ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಶುಕ್ರವಾರ, 27 ಸೆಪ್ಟೆಂಬರ್ 2024 9:30 AM ಕಾನ್ಪುರ
1ನೇ ಟಿ20, ಭಾರತ vs ಬಾಂಗ್ಲಾದೇಶ ಸೋಮವಾರ, 7 ಅಕ್ಟೋಬರ್ 2024 7 PM ಗ್ವಾಲಿಯರ್
2ನೇ ಟಿ20, ಭಾರತ vs ಬಾಂಗ್ಲಾದೇಶ ಗುರುವಾರ, 10 ಅಕ್ಟೋಬರ್ 2024 7 PM ದೆಹಲಿ
3ನೇ ಟಿ20, ಭಾರತ vs ಬಾಂಗ್ಲಾದೇಶ ಭಾನುವಾರ, 13 ಅಕ್ಟೋಬರ್ 2024 7 PM ಹೈದರಾಬಾದ್

Published On - 7:59 am, Mon, 9 September 24

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್