AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಹೆಸರಿಸಿದ ಮಾಜಿ ಕ್ರಿಕೆಟಿಗರು

India Squad For Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. 8 ತಂಡಗಳ ಕದನಕ್ಕಾಗಿ ಈಗಾಗಲೇ ಬಹುತೇಕ ತಂಡಗಳ ಘೋಷಣೆಯಾಗಿದೆ. ಇದಾಗ್ಯೂ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿಲ್ಲ. ಹೀಗಾಗಿ ಈ ಬಾರಿ ಭಾರತ ತಂಡದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಲಿದೆ ಎಂಬ ಕುತೂಹಲ ಏರ್ಪಟ್ಟಿದೆ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಹೆಸರಿಸಿದ ಮಾಜಿ ಕ್ರಿಕೆಟಿಗರು
India Squad
ಝಾಹಿರ್ ಯೂಸುಫ್
|

Updated on:Jan 14, 2025 | 7:51 AM

Share

ಮುಂಬರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಈಗಾಗಲೇ 6 ತಂಡಗಳ ಘೋಷಣೆಯಾಗಿದೆ. ಇದಾಗ್ಯೂ ಭಾರತ ತಂಡವನ್ನು ಇನ್ನೂ ಸಹ ಪ್ರಕಟಿಸಲಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿ. ಈ ಸರಣಿಗಾಗಿ ಭಾರತ ಏಕದಿನ ತಂಡವನ್ನು ಆಯ್ಕೆ ಮಾಡಬೇಕಿದ್ದು, ಅದರೊಂದಿಗೆ ಚಾಂಪಿಯನ್ಸ್ ಟ್ರೋಫಿಗೂ ಟೀಮ್ ಇಂಡಿಯಾದ ಘೋಷಣೆಯಾಗಲಿದೆ. ಅದಕ್ಕೂ ಮುನ್ನ ಐಸಿಸಿ ಟೂರ್ನಿಗೆ ಟೀಮ್ ಇಂಡಿಯಾ ಹೇಗಿರಬೇಕೆಂದು ಭಾರತ ತಂಡದ ಮಾಜಿ ಆಟಗಾರರಾದ ಸುನಿಲ್ ಗವಾಸ್ಕರ್ ಹಾಗೂ ಇರ್ಫಾನ್ ಪಠಾಣ್ ಸಲಹೆ ನೀಡಿದ್ದಾರೆ.

15 ಸದಸ್ಯರ ತಂಡದಲ್ಲಿ ಪರಿಪೂರ್ಣ ಬ್ಯಾಟರ್ ಗಳಾಗಿ ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಬೇಕೆಂದು ಗವಾಸ್ಕರ್ ಮತ್ತು ಇರ್ಫಾನ್ ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು ಪಠಾಣ್, ಸುನಿಲ್ ಗವಾಸ್ಕರ್ ಹೆಸರಿಸಿದ ತಂಡದಲ್ಲಿ ವಿಕೆಟ್ ಕೀಪರ್ ಗಳಾಗಿ ಕಾಣಿಸಿಕೊಂಡಿರುವುದು ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್. ಆಲ್ ರೌಂಡರ್ ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ… 4 ತಿಂಗಳಲ್ಲಿ 3 ಪ್ರಮುಖ ಟೂರ್ನಿ

ಇನ್ನು ವೇಗದ ಬೌಲರ್ ಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಅವರನ್ನು ಹೆಸರಿಸಿದ್ದು, ಇವರ ಜೊತೆ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಗೆ ಸ್ಥಾನ ನೀಡಲಾಗಿದೆ. ಅದರಂತೆ ಇರ್ಫಾನ್ ಪಠಾಣ್ ಹಾಗೂ ಸುನಿಲ್ ಗವಾಸ್ಕರ್ ಹೆಸರಿಸಿದ ಭಾರತ ತಂಡ ಈ ಕೆಳಗಿನಂತಿದೆ…

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಶುಭ್ ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.

Published On - 7:10 am, Tue, 14 January 25

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ