AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG T20I: ಮುಂದಿನ ವಾರ ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡ ಪ್ರಕಟ: ಕ್ಯಾಪ್ಟನ್ ಯಾರು ಗೊತ್ತೇ?

India Squad for Afghanistan T20I Series: ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದಿನ ವಾರ ಟೀಮ್ ಇಂಡಿಯಾವನ್ನು ಪ್ರಕಟಿಸಲಿದೆ. ಈ ಸರಣಿ ಮೂಲಕ ರೋಹಿತ್ ಶರ್ಮಾ ಟಿ20I ನಾಯಕತ್ವಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರಂತೆ. ಆಯ್ಕೆಗಾರರು ಮತ್ತು ಬಿಸಿಸಿಐ ರೋಹಿತ್ ಮನವೊಲಿಸುತ್ತಿದ್ದಾರಂತೆ.

IND vs AFG T20I: ಮುಂದಿನ ವಾರ ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡ ಪ್ರಕಟ: ಕ್ಯಾಪ್ಟನ್ ಯಾರು ಗೊತ್ತೇ?
IND vs AFG T20I
Follow us
Vinay Bhat
|

Updated on: Dec 28, 2023 | 7:20 AM

ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ನಂತರ, ಭಾರತ ಕ್ರಿಕೆಟ್ ತಂಡವು ಮೂರು ಪಂದ್ಯಗಳ ಟಿ20I ಸರಣಿಯಲ್ಲಿ ಅಫ್ಘಾನಿಸ್ತಾನ (India vs Afghanistan) ತಂಡವನ್ನು ಎದುರಿಸಲಿದೆ. ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಟಿ20 ಸರಣಿ ಐಸಿಸಿ ಟಿ20 ವಿಶ್ವಕಪ್ 2024 ರ ಕೊನೆಯ ದ್ವಿಪಕ್ಷೀಯ ಟಿ20I ಸರಣಿಯಾಗಿದೆ. ಆದರೆ ಭಾರತದ ಟಿ20I ತಂಡದ ನಾಯಕರಾದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ರುತುರಾಜ್ ಗಾಯಕ್ವಾಡ್ ಗಾಯಗೊಂಡಿದ್ದು, ಬಿಸಿಸಿಐ ಆಯ್ಕೆ ಸಮಿತಿಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಹೀಗಾಗಿ ನಾಯಕನನ್ನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಟೆನ್ಶನ್​ನಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಇದೆ. ಒಂದು ಮೂಲಗಳ ಪ್ರಕಾರ, ಈ ಸರಣಿ ಮೂಲಕ ರೋಹಿತ್ ಶರ್ಮಾ ಟಿ20I ನಾಯಕತ್ವಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರಂತೆ.

ರೋಹಿತ್ ಶರ್ಮಾ ಟಿ20 ವಿಶ್ವಕಪ್ 2022 ರಿಂದ ಈವರೆಗೆ ಒಂದೇ ಒಂದು ಟಿ20 ಪಂದ್ಯವನ್ನು ಆಡಿಲ್ಲ. ಆದರೆ ಆಯ್ಕೆಗಾರರು ಮತ್ತು ಬಿಸಿಸಿಐ ಟಿ20 ವಿಶ್ವಕಪ್ 2024 ರಲ್ಲಿ ಭಾರತವನ್ನು ಮುನ್ನಡೆಸಬೇಕೆಂದು ರೋಹಿತ್ ಬಳಿ ಕೇಳಿದ್ದಾರೆ. ಹೀಗಾಗಿ ರೋಹಿತ್ ಪುನಃ ಟಿ20 ನಾಯಕತ್ವಕ್ಕೆ ಮರಳುವ ಸಾಧ್ಯತೆ ಇದೆ.

KL Rahul: ಧೋನಿಯ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಎಂಟ್ರಿ

ಇದನ್ನೂ ಓದಿ
Image
2023ರ ಒಡಿಐ ವರ್ಲ್ಡ್​ಕಪ್ ಪಂದ್ಯಗಳಿಗೆ ದಾಖಲೆ ವೀಕ್ಷಣೆ
Image
KL Rahul: ಸೆಂಚುರಿಯನ್​ನಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
Image
KL Rahul: ಭರ್ಜರಿ ಶತಕ ಬಾರಿಸಿದ ಕೆಎಲ್ ರಾಹುಲ್
Image
Kagiso Rabada: ರೋಹಿತ್ ಶರ್ಮಾರನ್ನು ಔಟ್ ಮಾಡಿಯೇ ದಾಖಲೆ ಬರೆದ ಕಗಿಸೊ ರಬಾಡ

“ಯಾರು ತಂಡವನ್ನು ಮುನ್ನಡೆಸುತ್ತಾರೆ ಎಂಬುದನ್ನು ಆಯ್ಕೆದಾರರು ನಿರ್ಧರಿಸುತ್ತಾರೆ. ನಾವು ರೋಹಿತ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದೇವೆ ಮತ್ತು ಅವರು ಟಿ20 ವಿಶ್ವಕಪ್‌ನಲ್ಲಿ ಮುನ್ನಡೆಸಲು ಸಿದ್ಧರಾಗಿದ್ದಾರೆ. ಆದರೆ ಇಂಗ್ಲೆಂಡ್ ಟೆಸ್ಟ್ ಸರಣಿ ಹೆಚ್ಚು ಮಹತ್ವದ್ದಾಗಿದೆ. ಅಜಿತ್ (ಅಗರ್ಕರ್) ರೋಹಿತ್ ಅವರೊಂದಿಗೆ ಈ ಕುರಿತು ಮಾತನಾಡುತ್ತಾರೆ,”ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದರು.

ಈ ಹಿಂದೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಟಿ20 ತಂಡದ ನಾಯಕರಾದರು. ಆದರೆ ಅಕ್ಟೋಬರ್‌ನಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ವಿಶ್ವಕಪ್ ಪಂದ್ಯದಲ್ಲಿ ಪಾದದ ಗಾಯದಿಂದಾಗಿ ಪಾಂಡ್ಯ ಹೊರಗುಳಿದಿದ್ದಾರೆ. ಅವರು ಇನ್ನೂ ತಮ್ಮ ಗಾಯದಿಂದ ಚೇತರಿಸಿಕೊಂಡಿಲ್ಲ. ಐಪಿಎಲ್ 2024 ರ ವೇಳೆಗೆ ಮರಳುವ ಸಾಧ್ಯತೆಯಿದೆ.

ಇನ್ನು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಕೂಡ ಪಾದದ ಗಾಯದಿಂದ ಹೊರಗುಳಿದಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದ ಇನ್ನೊಬ್ಬ ನಾಯಕ – ರುತುರಾಜ್ ಗಾಯಕ್ವಾಡ್ ಕೂಡ ಗಾಯಗೊಂಡಿದ್ದಾರೆ. ಆದ್ದರಿಂದ, ಭಾರತವು ಈಗ ರೋಹಿತ್ ಶರ್ಮಾಗೆ ನಾಯಕತ್ವ ನೀಡಲು ಮುಂದಾಗಿದೆ. ಭಾರತ-ಆಫ್ರಿಕಾ ಟೆಸ್ಟ್ ಸರಣಿಗೆ ಮುಂಚಿತವಾಗಿ, ರೋಹಿತ್ ಶರ್ಮಾ ಟಿ20I ಗಳಿಗೆ ಮರಳುವ ಸುಳಿವು ನೀಡಿದ್ದರು. “ನನ್ನ ಮುಂದೆ ಯಾವ ಕ್ರಿಕೆಟ್ ಇದೆಯೋ ಅದನ್ನು ನಾನು ಆಡಲು ಬಯಸುತ್ತೇನೆ” ಎಂದು ರೋಹಿತ್ ಹೇಳಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?