AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Squad: ಟೀಮ್ ಇಂಡಿಯಾದಲ್ಲಿ 5 ಆಲ್​ರೌಂಡರ್​​ಗಳು: ಏಕೈಕ ಸ್ಪಿನ್ನರ್..!

India Squad For Odi Series vs Zimbabwe: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್.

India Squad: ಟೀಮ್ ಇಂಡಿಯಾದಲ್ಲಿ 5 ಆಲ್​ರೌಂಡರ್​​ಗಳು: ಏಕೈಕ ಸ್ಪಿನ್ನರ್..!
Team India
TV9 Web
| Edited By: |

Updated on: Jul 31, 2022 | 12:22 PM

Share

ಜಿಂಬಾಬ್ವೆ ವಿರುದ್ದದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು (Team India) ಘೋಷಿಸಲಾಗಿದೆ. ಆಗಸ್ಟ್ 18 ರಿಂದ ಶುರುವಾಗಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ. ಅಂದರೆ ನಾಯಕ ರೋಹಿತ್ ಶರ್ಮಾ (Rohit Sharma), ವಿರಾಟ್ ಕೊಹ್ಲಿ (Virat Kohli), ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಸ್ಟಾರ್ ಆಟಗಾರರು ಈ ಸರಣಿ ಆಡುತ್ತಿಲ್ಲ. ಹೀಗಾಗಿಯೇ ಒಂದಷ್ಟು ಯುವ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಲ್ಲೂ ಕೆಲ ತಿಂಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಕೆಲ ಆಟಗಾರರು ಇದೀಗ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.

ಅವರಲ್ಲಿ ಪ್ರಮುಖರೆಂದರೆ ವೇಗಿ ದೀಪಕ್ ಚಹರ್ ಹಾಗೂ ವಾಷಿಂಗ್ಟನ್ ಸುಂದರ್. ಐಪಿಎಲ್​ಗೂ ಮುನ್ನ ಗಾಯಗೊಂಡಿದ್ದ ದೀಪಕ್ ಚಹರ್ ಆ ಬಳಿಕ ಒಂದೇ ಒಂದು ಪಂದ್ಯವಾಡಿಲ್ಲ. ಇದೀಗ ಜಿಂಬಾಬ್ವೆ ವಿರುದ್ದದ ಸರಣಿಯ ಮೂಲಕ ಮತ್ತೆ ಮೈದಾನಕ್ಕಿಳಿಯಲಿದ್ದಾರೆ. ಇನ್ನು ಗಾಯದ ಕಾರಣ ತಂಡದಿಂದ ಹೊರಬಿದ್ದ ಬಳಿಕ ಕಂಬ್ಯಾಕ್ ಅನ್ನು ಎದುರು ನೋಡುತ್ತಿದ್ದ ವಾಷಿಂಗ್ಟನ್ ಸುಂದರ್ ಇತ್ತೀಚೆಗೆ ಇಂಗ್ಲೆಂಡ್​ನ ಕೌಂಟಿ ಕ್ರಿಕೆಟ್​ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಪ್ರಮುಖ ಆಟಗಾರರ ಅಲಭ್ಯತೆಯ ಕಾರಣ ಸುಂದರ್​ಗೂ ಟೀಮ್ ಇಂಡಿಯಾದಲ್ಲಿ ಚಾನ್ಸ್ ಲಭಿಸಿದೆ.

ಇನ್ನು ಜಿಂಬಾಬ್ವೆ ವಿರುದ್ದದ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ನಾಲ್ವರು ಬ್ಯಾಟ್ಸ್​ಮನ್​ಗಳಿದ್ದರೆ, ಇಬ್ಬರು ವಿಕೆಟ್ ಕೀಪರ್ ಬ್ಯಾಟರ್​ಗಳಿದ್ದಾರೆ. ಹಾಗೆಯೇ ಆಲ್​ರೌಂಡರ್ ಪಟ್ಟಿಯಲ್ಲಿ 5 ಆಟಗಾರರು ಸ್ಥಾನ ಪಡೆದಿದ್ದಾರೆ. ಇದಲ್ಲದೆ ಬೌಲರ್​ಗಳ ಪಟ್ಟಿಯಲ್ಲಿ ಮೂವರು ವೇಗಿಗಳಿದ್ದರೆ, ಏಕೈಕ ಸ್ಪಿನ್ನರ್ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅಂದರೆ ಇಲ್ಲಿ ಆಯ್ಕೆ ಸಮಿತಿ ಆಲ್​ರೌಂಡರ್​ಗಳ ಮೂಲಕ ಸ್ಪಿನ್ ವಿಭಾಗವನ್ನು ಸಮತೋಲನಗೊಳಿಸಲು ಮುಂದಾಗಿರುವುದು ಸ್ಪಷ್ಟ. ಏಕೆಂದರೆ ತಂಡದಲ್ಲಿ ಆಲ್​ರೌಂಡರ್​ಗಳಾಗಿ ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್ ಇದ್ದಾರೆ. ಈ ಐವರಲ್ಲಿ ಹೂಡಾ, ಸುಂದರ್ ಹಾಗೂ ಅಕ್ಷರ್ ಪಟೇಲ್ ಸ್ಪಿನ್ ಆಲ್​ರೌಂಡರ್​ಗಳೆಂಬುದು ವಿಶೇಷ.

ಹೀಗಾಗಿಯೇ ಸ್ಪಿನ್ನರ್​ ಆಗಿ ಕೇವಲ ಕುಲ್​ದೀಪ್ ಯಾದವ್​ ಅವರನ್ನು ಮಾತ್ರ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ದದ ಸರಣಿಗೆ ಯುಜುವೇಂದ್ರ ಚಹಲ್, ಕುಲ್​ದೀಪ್ ಯಾದವ್ ಹಾಗೂ ರವಿ ಬಿಷ್ಣೋಯ್ ಅವರನ್ನು ಸ್ಪಿನ್ನರ್​ಗಳಾಗಿ ಆಯ್ಕೆ ಮಾಡಲಾಗಿತ್ತು. ಈ ಬಾರಿ ಹೆಚ್ಚಿನ ಸ್ಪಿನ್ ಆಲ್​ರೌಂಡರ್​ಗಳಿಗೆ ಮಣೆ ಹಾಕಲಾಗಿದೆ.

ಇನ್ನು ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ಗಳಾದ ರಿಷಭ್ ಪಂತ್, ಕೆಎಲ್ ರಾಹುಲ್ ಅವರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಜಿಂಬಾಬ್ವೆ ವಿರುದ್ದದ ಸರಣಿಯಲ್ಲಿ ಕೀಪರ್ ಬ್ಯಾಟ್ಸ್​ಮನ್​​ಗಳಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಹಾಗೆಯೇ ಕೇವಲ ಬ್ಯಾಟ್ಸ್​ಮನ್​ಗಳಾಗಿ ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ಶುಭ್​ಮನ್ ಗಿಲ್, ರಾಹುಲ್ ತ್ರಿಪಾಠಿ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ ಹಾಗೂ ಮೊಹಮ್ಮದ್ ಸಿರಾಜ್ ಇದ್ದಾರೆ. ಇವರ ಜೊತೆ ಆಲ್​ರೌಂಡರ್​ ವೇಗದ ಬೌಲರ್​ಗಳಾಗಿ ದೀಪಕ್ ಚಹರ್ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿದ್ದಾರೆ. ಒಟ್ಟಿನಲ್ಲಿ ಉತ್ತಮ ಆಲ್​ರೌಂಡರ್​ಗಳನ್ನು ಒಳಗೊಂಡ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ ಮಾಡಿದೆ ಎನ್ನಬಹುದು.

ಅಂದಹಾಗೆ ಜಿಂಬಾಬ್ವೆ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯು ಆಗಸ್ಟ್ 18 ರಿಂದ ಶುರುವಾಗಲಿದ್ದು, ಆಗಸ್ಟ್ 22 ಕ್ಕೆ ಅಂತ್ಯಗೊಳ್ಳಲಿದೆ. ವಿಶೇಷ ಎಂದರೆ 2018 ರ ಬಳಿಕ ಟೀಮ್ ಇಂಡಿಯಾ ಇದೇ ಮೊದಲ ಬಾರಿ ಜಿಂಬಾಬ್ವೆ ವಿರುದ್ಧ ಸರಣಿ ಆಡುತ್ತಿದ್ದು, ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಇತ್ತೀಚೆಗಷ್ಟೇ ಶಿಖರ್ ಧವನ್ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ವಿಂಡೀಸ್ ವಿರುದ್ದದ 3 ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮೂಲಕ ಗೆದ್ದುಕೊಂಡಿತು. ಇದೀಗ ನಾಯಕ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಧವನ್ ಮತ್ತೆ ಟೀಮ್ ಇಂಡಿಯಾ ಯುವಪಡೆಯ ಮುಂದಾಳತ್ವವನ್ನು ವಹಿಸಿಕೊಂಡಿದ್ದಾರೆ.

ಜಿಂಬಾಬ್ವೆ ವಿರುದ್ದದ ಏಕದಿನ ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಮತ್ತು ದೀಪಕ್ ಚಹರ್.