IND vs ENG 3rd Test: ಉಳಿದ ಮೂರು ಟೆಸ್ಟ್ಗಳಿಗೆ ಇಂದು ಭಾರತ ತಂಡ ಪ್ರಕಟ: ಹೊರಬಿತ್ತು ಕೆಲ ಅಚ್ಚರಿ ವಿಚಾರ
India Squad for 3rd Test vs England: ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಶುಕ್ರವಾರ (ಫೆಬ್ರವರಿ 9) ಸಭೆ ಸೇರಿ ಭಾರತ - ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯಕ್ಕೆ ಒಂದು ವಾರ ಇರುವಾಗ ತಂಡವನ್ನು ಪ್ರಕಟಿಸಲಿದೆ. ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದ ನಂತರ ಅಂತಿಮ ಮೂರು ಟೆಸ್ಟ್ ಪಂದ್ಯಗಳನ್ನು ಸಹ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ವದಂತಿ ಇದೆ.

ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದ ದೊಡ್ಡ ಗೆಲುವಿನೊಂದಿಗೆ ಭಾರತ (India vs England) ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ. ಫೆಬ್ರವರಿ 15 ಗುರುವಾರದಿಂದ ಇಂಡೋ-ಇಂಗ್ಲೆಂಡ್ ತೃತೀಯ ಟೆಸ್ಟ್ ಕದನ ಶುರುವಾಗಲಿದೆ. ಈ ಪಂದ್ಯಕ್ಕೆ ಕೆಲಸದ ಹೊರೆ ನಿರ್ವಹಣೆಯಿಂದಾಗಿ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆಯಬಹುದು ಎಂದು ವರದಿಗಳಿವೆ. ಆದರೆ, ಇತ್ತೀಚಿನ ವರದಿಯ ಪ್ರಕಾರ ಇದು ಸುಳ್ಳು ಸುದ್ದಿ ಎನ್ನಲಾಗಿದೆ.
ಕ್ರಿಕ್ಬಜ್ನ ವರದಿಯ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾ ಅವರ ಅತ್ಯುತ್ತಮ ಪ್ರದರ್ಶನದಿಂದಾಗಿ ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರರ್ಕರ್ ವೇಗದ ಬೌಲರ್ಗೆ ವಿಶ್ರಾಂತಿ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.
ಏಕದಿನ ಸರಣಿಗೆ ಲಂಕಾ ತಂಡ ಪ್ರಕಟ; ಮಾಜಿ ನಾಯಕನನ್ನೇ ಕೈಬಿಟ್ಟ ಮಂಡಳಿ..!
ಹಿಂದಿನ ವರದಿಗಳ ಪ್ರಕಾರ, ಟೀಮ್ ಮ್ಯಾನೇಜ್ಮೆಂಟ್ ಬುಮ್ರಾಗೆ ವಿಶ್ರಾಂತಿ ನೀಡಲು ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಮೂರನೇ ಟೆಸ್ಟ್ನಲ್ಲಿ ಸೇರಿಸಲು ನಿರ್ಧರಿಸಿದೆ, ಬುಮ್ರಾ ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ 58 ಓವರ್ಗಳನ್ನು ಬೌಲಿಂಗ್ ಮಾಡಿದ್ದಾರೆ. ತನ್ನ ಪ್ರದರ್ಶನದಿಂದ ಎಲ್ಲರನ್ನೂ ಮೆಚ್ಚಿಸಿದ್ದಾರೆ, ಅವರು ಸರಣಿಯಲ್ಲಿ 15 ವಿಕೆಟ್ ಕಬಳಿಸಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ಜಸ್ಪ್ರೀತ್ ಬುಮ್ರಾ
ಆದರೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಇನ್ನೂ ಹೆಸರಿಸಿಲ್ಲ. ಕ್ರಿಕ್ಬಜ್ನ ವರದಿಯ ಪ್ರಕಾರ, ತಂಡದ ಮ್ಯಾನೇಜ್ಮೆಂಟ್ ಶುಕ್ರವಾರ (ಫೆಬ್ರವರಿ 9) ಸಭೆ ಸೇರಿ ಮೂರನೇ ಟೆಸ್ಟ್ಗೆ ಒಂದು ವಾರ ಇರುವಾಗ ತಂಡವನ್ನು ಪ್ರಕಟಿಸಲಿದೆ.
ರಾಟ್ ಕೊಹ್ಲಿ ಆಡುವ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದ ನಂತರ ಅಂತಿಮ ಮೂರು ಟೆಸ್ಟ್ ಪಂದ್ಯಗಳನ್ನು ಸಹ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ವದಂತಿ ಇದೆ. ಒಂದು ವೇಳೆ ಕೊಹ್ಲಿ ಇನ್ನುಳಿದ 3 ಪಂದ್ಯಗಳನ್ನು ಕಳೆದುಕೊಂಡರೆ, ಮಂಡಳಿಯು ತಂಡದಲ್ಲಿ ಸೂಕ್ತ ಬದಲಿ ಆಟಗಾರನನ್ನು ಹುಡುಕಬೇಕಾಗಿದೆ. ಶ್ರೇಯಸ್ ಅಯ್ಯರ್ ಪ್ರಸ್ತುತ ಕಳಪೆ ಫಾರ್ಮ್ನಲ್ಲಿರುವ ಕಾರಣ, ನಿಂತು ಆಡುವ ಆಟಗಾರ ಬೇಕು.
ಮತ್ತೊಂದೆಡೆ, ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಕೂಡ ಮಂಡಿರಜ್ಜು ಗಾಯದಿಂದಾಗಿ ಎರಡನೇ ಟೆಸ್ಟ್ನಿಂದ ಹೊರಗುಳಿದ ನಂತರ ಮರಳುವ ಸಾಧ್ಯತೆಯಿದೆ. ಜಡೇಜಾ ಚೇತರಿಕೆಗೆ ಕೊಂಚ ಸಮಯ ಬೇಕಾಗಬಹುದು ಎನ್ನಲಾಗಿತ್ತು. ಆದರೆ, 2ನೇ ಮತ್ತು 3ನೇ ಟೆಸ್ಟ್ನ ನಡುವೆ ಸುದೀರ್ಘ ಅಂತರವಿರುವುದರಿಂದ, ಆಲ್ರೌಂಡರ್ ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಲಿದ್ದಾರಂತೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:32 am, Fri, 9 February 24




