AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India T20 Squad: ಟೀಮ್ ಇಂಡಿಯಾದಲ್ಲಿ 11 ಬೌಲರ್​ಗಳು, 4 ವಿಕೆಟ್​ ಕೀಪರ್​ಗಳು..!

India squad for west indies: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್

India T20 Squad: ಟೀಮ್ ಇಂಡಿಯಾದಲ್ಲಿ 11 ಬೌಲರ್​ಗಳು, 4 ವಿಕೆಟ್​ ಕೀಪರ್​ಗಳು..!
Team India
TV9 Web
| Edited By: |

Updated on: Jul 14, 2022 | 6:10 PM

Share

ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಗಾಗಿ (India T20 squad for west indies) ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಜಸ್​ಪ್ರೀತ್ ಬುಮ್ರಾ (Jasprit Bumrah) ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಉಮ್ರಾನ್ ಮಲಿಕ್ (Umran Malik) ಹಾಗೂ ಸಂಜು ಸ್ಯಾಮ್ಸನ್ (Sanju Samson)​ ಅವರನ್ನು ಕೈ ಬಿಡಲಾಗಿದೆ. ಇದಾಗ್ಯೂ 18 ಸದಸ್ಯರ ಟೀಮ್ ಇಂಡಿಯಾದಲ್ಲಿ ಒಟ್ಟು 11 ಬೌಲರ್​ಗಳು ಇರುವುದು ವಿಶೇಷ. ಅಂದರೆ ತಂಡದಲ್ಲಿ ಒಟ್ಟು 6 ಆಲ್​ರೌಂಡರ್​ಗಳು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅದರಂತೆ ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ಆಲ್​ರೌಂಡರ್​ಗಳಾಗಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ಗಳಾಗಿ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಕೆಎಲ್ ರಾಹುಲ್, ರಿಷಭ್ ಪಂತ್, ದಿನೇಶ್ ಕಾರ್ತಿಕ್ ಹಾಗೂ ಇಶಾನ್ ಕಿಶನ್  ಕೀಪರ್​ಗಳಾಗಿ ತಂಡದಲ್ಲಿದ್ದಾರೆ.

ಹಾಗೆಯೇ ಬೌಲರ್​ಗಳಾಗಿ ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅವೇಶ್ ಖಾನ್ ಹಾಗೂ ಅರ್ಷದೀಪ್ ಸಿಂಗ್ ಕಾಣಿಸಿಕೊಂಡಿದ್ದಾರೆ. 18 ಸದಸ್ಯರ ತಂಡದಲ್ಲಿ 5 ಬೌಲರ್​ಗಳಿದ್ದರೆ, 6 ಆಲ್​ರೌಂಡರ್​ಗಳಿದ್ದಾರೆ. ಅಂದರೆ ಒಟ್ಟು 11 ಬೌಲರ್​ಗಳನ್ನು ಆಯ್ಕೆ ಮಾಡುವ ಮೂಲಕ ಈ ಬಾರಿ ಟೀಮ್ ಇಂಡಿಯಾ ಬೌಲಿಂಗ್​ ಕಡೆಗೆ ಹೆಚ್ಚಿನ ಒತ್ತು ನೀಡಿರುವುದು ಸ್ಪಷ್ಟ.

ಇದನ್ನೂ ಓದಿ
Image
Virat Kohli: ವಿರಾಟ್ ಕೊಹ್ಲಿಯ ಫಾರ್ಮ್​ ಬಗ್ಗೆ ಟೀಕೆ ಮಾಡುವ ಮುನ್ನ ಈ ಅಂಕಿ ಅಂಶಗಳನ್ನೊಮ್ಮೆ ನೋಡಿ..!
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಹೀಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ರೂಪಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಲ್ಲೂ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಸ್ಪಿನ್ ಮತ್ತು ವೇಗಿಗಳಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಬೌಲಿಂಗ್ ವಿಭಾಗದಲ್ಲಿ ಆಲ್​ರೌಂಡರ್​ಗಳಿಗೆ ಮಣೆಹಾಕುವುದರಿಂದ ಕೆಳ ಕ್ರಮಾಂಕದವರೆಗೆ ಬ್ಯಾಟ್ಸ್​ಮನ್​ಗಳನ್ನು ಹೊಂದಬಹುದು. ಇದರಿಂದ ಚೇಸಿಂಗ್​ಗೆ ಕೂಡ ಅನುಕೂಲವಾಗಲಿದೆ.

ಇದೀಗ ಟೀಮ್ ಇಂಡಿಯಾ ಆಯ್ಕೆ ಸಮಿತಿಯು ಆಲ್​ರೌಂಡರ್​ಗಳಿಗೆ ಹೆಚ್ಚಿನ ಮಣೆ ನೀಡುತ್ತಿದ್ದು, ಹೀಗಾಗಿ ಇದೇ ಆಟಗಾರರು ಟಿ20 ವಿಶ್ವಕಪ್ ತಂಡದಲ್ಲೂ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ