ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

Team India: ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ 5 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಈ ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗಾಗಿ ದುಬೈಗೆ ತೆರಳಲಿದೆ. ಇನ್ನು ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಆರಂಭವಾಗಲಿದೆ.

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ
Team India
Follow us
ಝಾಹಿರ್ ಯೂಸುಫ್
|

Updated on:Jan 07, 2025 | 3:01 PM

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 8 ಪಂದ್ಯಗಳ ಸರಣಿ ಆಡಲಿದೆ. ಈ ಸರಣಿಯಲ್ಲಿ 5 ಟಿ20 ಮತ್ತು 3 ಏಕದಿನ ಪಂದ್ಯಳನ್ನಾಡಲಾಗುತ್ತದೆ. ಅತ್ತ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಲಿರುವ ಆಟಗಾರರಿಗೆ ಟಿ20 ಸರಣಿ ವೇಳೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದ್ದು, ಈ ಬದಲಾವಣೆಯ ಪ್ರಮುಖಾಂಶಗಳು ಈ ಕೆಳಗಿನಂತಿದೆ….

  • ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಜಸ್​ಪ್ರೀತ್ ಬುಮ್ರಾಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತದೆ.
  • ಮೊಹಮ್ಮದ್ ಸಿರಾಜ್​ಗೆ 5 ಪಂದ್ಯಗಳ ಟಿ20 ಸರಣಿ ವೇಳೆ ರೆಸ್ಟ್ ನೀಡಲು ನಿರ್ಧರಿಸಲಾಗಿದೆ.
  • ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಏಕದಿನ ಸರಣಿಯ ಮೂರು ಪಂದ್ಯಗಳಲ್ಲೂ ಕಾಣಿಸಿಕೊಳ್ಳಲಿದ್ದಾರೆ.
  • ಏಕದಿನ ಸರಣಿ ವೇಳೆ ಮೊಹಮ್ಮದ್ ಸಿರಾಜ್ ಕೂಡ ತಂಡಕ್ಕೆ ಆಗಮಿಸಲಿದ್ದಾರೆ.
  • ಮೊಹಮ್ಮದ್ ಶಮಿ ಅವರನ್ನು ಫಿಟ್​ನೆಸ್ ಟೆಸ್ಟ್​ ಬಳಿಕ ಏಕದಿನ ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
  • ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
  • ಯಶಸ್ವಿ ಜೈಸ್ವಾಲ್ ಅವರನ್ನು ಭಾರತ ಏಕದಿನ ತಂಡದ ಹೆಚ್ಚುವರಿ ಆರಂಭಿಕನಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
  • ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಏಕದಿನ ತಂಡಕ್ಕೆ ಪರಿಗಣಿಸಲು ಬಿಸಿಸಿಐ ಆಯ್ಕೆ ಸಮಿತಿ ಚರ್ಚಿಸಿದೆ.
  • ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿರುವ ಬಹುತೇಕ ಆಟಗಾರರು ಚಾಂಪಿಯನ್ಸ್​ ಟ್ರೋಫಿಗೂ ಆಯ್ಕೆಯಾಗಲಿದ್ದಾರೆ.
  • ಜನವರಿ 12 ರಂದು ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸುವ ಸಾಧ್ಯತೆಯಿದೆ.

ಇಂಗ್ಲೆಂಡ್ ವಿರುದ್ಧದ ಸರಣಿ ಯಾವಾಗ ಶುರು?

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಆರಂಭವಾಗಲಿದ್ದು, ಮೊದಲಿಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದಾದ ಬಳಿಕ ಮೂರು ಮ್ಯಾಚ್​​ಗಳ ಏಕದಿನ ಸರಣಿಯನ್ನು ಆಡಲಾಗುತ್ತದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

  • 1ನೇ T20I: ಜನವರಿ 22 (ಚೆನ್ನೈ)
  • 2ನೇ T20I: ಜನವರಿ 25 (ಕೋಲ್ಕತ್ತಾ)
  • 3ನೇ T20I: ಜನವರಿ 28 (ರಾಜ್‌ಕೋಟ್)
  • 4ನೇ T20I: ಜನವರಿ 31 (ಪುಣೆ)
  • 5ನೇ T20I: ಫೆಬ್ರವರಿ 2 (ಮುಂಬೈ)

ಇದನ್ನೂ ಓದಿ: ಅವರಿಲ್ಲ, ಇವರಿಲ್ಲ… ಸಿರಾಜ್ ಬೆನ್ನು ಮೂಳೆ ಮುರಿಯುತ್ತಿರುವ ಬಿಸಿಸಿಐ

  • 1ನೇ ODI: ಫೆಬ್ರವರಿ 6 (ನಾಗ್ಪುರ)
  • 2ನೇ ODI: ಫೆಬ್ರವರಿ 9 (ಕಟಕ್)
  • 3ನೇ ODI: ಫೆಬ್ರವರಿ 12 (ಅಹಮದಾಬಾದ್)

ಚಾಂಪಿಯನ್ಸ್ ಟ್ರೋಫಿ ಯಾವಾಗ ಆರಂಭ?

2025ರ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಆರಂಭವಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅದರಂತೆ ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದ್ದು, ಉಳಿದ ಮ್ಯಾಚ್​ಗಳಿಗೆ ಪಾಕಿಸ್ತಾನ್ ಆತಿಥ್ಯವಹಿಸಲಿದೆ. ಈ ಟೂರ್ನಿಯ ಭಾರತದ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ.

  • ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
  • ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
  • ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
  • ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
  • ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)

Published On - 2:57 pm, Tue, 7 January 25

ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ