IND vs SL: ಪ್ಲೇಯಿಂಗ್ 11 ಬಗ್ಗೆ ಸುಳಿವು ನೀಡಿದ ಶುಭ್ಮನ್ ಗಿಲ್
India vs Sri Lanka 1st Test: ಆಗಸ್ಟ್ 15 ರಿಂದ ಗಾಲೆನಲ್ಲಿ ಆರಂಭವಾಗಲಿರುವ ಭಾರತ-ಶ್ರೀಲಂಕಾ ಮೊದಲ ಟೆಸ್ಟ್ ಪಂದ್ಯಕ್ಕೆ ಶುಭ್ಮನ್ ಗಿಲ್ ಭಾರತದ ಪ್ಲೇಯಿಂಗ್ 11 ಕುರಿತು ಸುಳಿವು ನೀಡಿದ್ದಾರೆ. ಬುಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಜೊತೆ ಪ್ರಸಿದ್ಧ್ ಕೃಷ್ಣ ಆಡುವ ಸಾಧ್ಯತೆಯಿದೆ. ಗಾಲೆ ಪಿಚ್ ಮೂವರು ಸ್ಪಿನ್ನರ್ಗಳಿಗೆ (ರವೀಂದ್ರ ಜಡೇಜಾ, ಮಾನವ್ ಸುತಾರ್, ಕುಲ್ದೀಪ್ ಯಾದವ್) ಅವಕಾಶ ನೀಡಬಹುದು. ದೇವದತ್ ಪಡಿಕ್ಕಲ್ ಮತ್ತು ಧ್ರುವ್ ಜುರೆಲ್ಗೆ ಅವಕಾಶ ಸಿಗುವ ನಿರೀಕ್ಷೆಯಿದೆ.

ಆಗಸ್ಟ್ 15 ರಿಂದ ಗಾಲೆಯಲ್ಲಿ ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವೆ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯಕ್ಕೆ ಉಭಯ ತಂಡಗಳು ಕೂಡ ಸಜ್ಜಾಗಿವೆ. ಆದರೆ ಈ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ತಂಡದಲ್ಲಿರಬೇಕಿದ್ದ ಕೆಲವು ಪ್ರಮುಖ ಆಟಗಾರರು ಗಾಯಕ್ಕೆ ತುತ್ತಾಗಿ ಈ ಪ್ರವಾಸದಿಂದ ಹೊರಗಿದ್ದಾರೆ. ಹೀಗಾಗಿ ಅವರ ಸ್ಥಾನವನ್ನು ತಂಡದಲ್ಲಿ ಯಾರು ತುಂಬುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಇದೀಗ ಈ ಪ್ರಶ್ನೆಗಳಿಗೆಲ್ಲ ತಂಡದ ನಾಯಕ ಶುಭ್ಮನ್ ಗಿಲ್ (Shubman Gill) ತೆರೆ ಎಳೆದಿದ್ದಾರೆ. ಪಂದ್ಯ ಆರಂಭಕ್ಕೆ ಒಂದು ದಿನ ಮುಂಚೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗಿಲ್ ಪ್ಲೇಯಿಂಗ್ 11 ಬಗ್ಗೆ ಸುಳಿವು ನೀಡಿದ್ದಾರೆ.
ಸಿರಾಜ್ ಜೊತೆಗೆ ಪ್ರಸಿದ್ಧ್
ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ, ವೇಗದ ಬೌಲಿಂಗ್ ವಿಭಾಗದ ಜವಾಬ್ದಾರಿ ಮೊಹಮ್ಮದ್ ಸಿರಾಜ್ ಅವರ ಹೆಗಲ ಮೇಲೆ ಇರುವುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಎರಡನೇ ವೇಗದ ಬೌಲರ್ ಆಗಿ ಯಾರು ತಂಡದಲ್ಲಿ ಇರುತ್ತಾರೆ ಎಂಬುದೇ ಪ್ರಶ್ನೆ. ಪ್ರಸಿದ್ಧ್ ಕೃಷ್ಣ ಅಥವಾ ಗುರ್ನೂರ್ ಬ್ರಾರ್ ಈ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಿದೆ. ಇದೀಗ ಪತ್ರಿಕಾಗೋಷ್ಠಿಯಲ್ಲಿ ಈ ಗೊಂದಲಗಳಿಗೆ ತೆರೆ ಎಳೆದಿರುವ ಗಿಲ್, ಈ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಕಷ್ಟ. ಆದರೆ ಪ್ರಸಿದ್ಧ್ ಕೃಷ್ಣ ಪರವಾಗಿ ಬ್ಯಾಟ್ ಬೀಸಿದ್ದಾರೆ.
ತಂಡದಲ್ಲಿ ನಾಲ್ವರು ವೇಗದ ಬೌಲರ್ಗಳಿದ್ದಾರೆ. ಅವರಲ್ಲಿ ಮೊಹಮ್ಮದ್ ಸಿರಾಜ್ ಆಡುವುದು ಖಚಿತ. ಅಕಿಬ್ ನಬಿ ಈ ರೇಸ್ನಿಂದ ಹೊರಗುಳಿದಿದ್ದಾರೆ. ಆದ್ದರಿಂದ, ಗುರ್ನೂರ್ ಬ್ರಾರ್ ಮತ್ತು ಪ್ರಸಿದ್ಧ್ ಕೃಷ್ಣ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಬಹುದು. ಆದರೆ ಈಗ, ಶುಭ್ಮನ್ ಗಿಲ್ ಪ್ರಸಿದ್ಧ್ ಕೃಷ್ಣ ಅವರ ಬೌಲಿಂಗ್ ಅನ್ನು ಹೊಗಳಿರುವುದರಿಂದ, ಅವರಿಗೆ ಪ್ಲೇಯಿಂಗ್ 11 ರಲ್ಲಿ ಅವಕಾಶ ಸಿಗುವ ಸೂಚನೆಗಳಿವೆ. ಇದಕ್ಕೆ ಪೂರಕವಾಗಿ ಪ್ರಸಿದ್ಧ್ ಪ್ರಸ್ತುತ ಪಂದ್ಯದಲ್ಲಿ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದು, ಆಡಿರುವ 7 ಟೆಸ್ಟ್ ಪಂದ್ಯಗಳಲ್ಲಿ 25 ವಿಕೆಟ್ಗಳನ್ನು ಕಬಳಿಸಿದ್ದಾರೆ.
IND vs SL: ಶೇ. 82 ರಷ್ಟು ಮಳೆ..! ಗಾಲೆ ಟೆಸ್ಟ್ ಮೊದಲ ದಿನದಾಟ ನಡೆಯುವುದು ಅನುಮಾನ
ಮೂವರು ಸ್ಪಿನ್ನರ್ಗಳಿಗೆ ಅವಕಾಶ
ಗಾಲೆ ಪಿಚ್ ಅನ್ನು ಗಮನಿಸಿದರೆ ಮೂವರು ಸ್ಪಿನ್ನರ್ಗಳಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚು. ಹೀಗಾಗಿ ರವೀಂದ್ರ ಜಡೇಜಾ, ಮಾನವ್ ಸುತಾರ್ ಮತ್ತು ಕುಲ್ದೀಪ್ ಯಾದವ್ ಸ್ಪಿನ್ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. ವೇಗದ ಬೌಲಿಂಗ್ ಜವಾಬ್ದಾರಿ ಸಿರಾಜ್ ಮತ್ತು ಪ್ರಸಿದ್ಧ್ ಅವರ ಹೆಗಲ ಮೇಲೆ ಇರಲಿದೆ. ಸಾಯಿ ಸುದರ್ಶನ್ ಅನುಪಸ್ಥಿತಿಯಲ್ಲಿ, ದೇವದತ್ ಪಡಿಕ್ಕಲ್ ಮೂರನೇ ಸ್ಥಾನದಲ್ಲಿ ಅವಕಾಶ ಪಡೆಯಲಿದ್ದಾರೆ. ಧ್ರುವ್ ಜುರೆಲ್ ಮಧ್ಯಮ ಕ್ರಮಾಂಕದಲ್ಲಿ ಅವಕಾಶ ಪಡೆಯಬಹುದು. ಆದ್ದರಿಂದ, ಸರ್ಫರಾಜ್ ಖಾನ್ ಅವಕಾಶಕ್ಕಾಗಿ ಕಾಯಬೇಕಾಗಬಹುದು.
ಭಾರತದ ಸಂಭಾವ್ಯ ಆಡುವ 11: ಶುಭ್ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸಿತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:04 pm, Fri, 14 August 26




