AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಯಲ್ಲಿ ಪತ್ನಿಗೆ ಬರೋಕೆ ಅವಕಾಶ ಕೊಡಿ ಎಂದ ಸ್ಟಾರ್ ಕ್ರಿಕೆಟಿಗನಿಗೆ ಬಿಸಿಸಿಐ ಖಡಕ್ ಎಚ್ಚರಿಕೆ

ಭಾರತೀಯ ಕ್ರಿಕೆಟ್ ತಂಡದ ಮೇಲೆ ಬಿಸಿಸಿಐ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆಟಗಾರರು ತಮ್ಮ ಪತ್ನಿಯರನ್ನು ಟೂರ್ನಿಗೆ ಕರೆತರಲು ಅವಕಾಶವಿಲ್ಲ ಎಂಬುದು ಒಂದು ಪ್ರಮುಖ ನಿಯಮ. ಒಬ್ಬ ಸ್ಟಾರ್ ಆಟಗಾರ ಪತ್ನಿಯನ್ನು ಕರೆತರಲು ಅನುಮತಿ ಕೋರಿದ್ದರು, ಆದರೆ ಬಿಸಿಸಿಐ ಅದನ್ನು ತಿರಸ್ಕರಿಸಿದೆ. ಇದು ತಂಡದ ಏಕಾಗ್ರತೆ ಮತ್ತು ಶಿಸ್ತಿಗೆ ಅಗತ್ಯ ಎಂದು ಬಿಸಿಸಿಐ ಹೇಳಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಪತ್ನಿಗೆ ಬರೋಕೆ ಅವಕಾಶ ಕೊಡಿ ಎಂದ ಸ್ಟಾರ್ ಕ್ರಿಕೆಟಿಗನಿಗೆ ಬಿಸಿಸಿಐ ಖಡಕ್ ಎಚ್ಚರಿಕೆ
ವಿರಾಟ್-ರೋಹಿತ್
ರಾಜೇಶ್ ದುಗ್ಗುಮನೆ
|

Updated on: Feb 14, 2025 | 11:13 AM

Share

ವಾರದೊಳಗೆ ‘ಚಾಂಪಿಯನ್ಸ್ ಟ್ರೋಫಿ 2025’ ಆರಂಭ ಆಗಲಿದೆ. ಮೊದಲ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು ಎದುರಿಸಲಿದೆ. ಈ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ಗೆಲ್ಲಲೇಬೇಕು ಎನ್ನುವ ಹಂಬಲದಲ್ಲಿ ಇದೆ. ಭಾರತದ ಪಂದ್ಯಗಳು ದುಬೈನಲ್ಲಿ ನಡೆಯಲಿದೆ. ಅದಕ್ಕೂ ಮೊದಲು ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ಒಬ್ಬರು ತಮ್ಮ ಜೊತೆ ಪತ್ನಿಗೂ ಬರಲು ಅವಕಾಶ ಕೋರಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಬಿಸಿಸಿಐ ನೇರವಾಗಿ ತಿರಸ್ಕರಿಸಿದೆ.

ಟೀಂ ಇಂಡಿಯಾದ ಕಳಪೆ ಪ್ರದರ್ಶನದಿಂದ ಬೇಸತ್ತ ಬಿಸಿಸಿಐ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿತ್ತು. ಟೀಂ ಇಂಡಿಯಾ ಆಟಗಾರರು ತಮ್ಮ ಪತ್ನಿಯನ್ನು ಕರೆತರುವಂತಿಲ್ಲ ಎಂಬುದು ನಿಯಮಗಳಲ್ಲಿ ಒಂದಾಗಿತ್ತು. ಎಲ್ಲಾ ನಿಯಮಗಳಂತೆ ಇದನ್ನು ಕಠಿಣವಾಗಿ ಪಾಲಿಸಲೇಬೇಕು ಎಂದು ಬಿಸಿಸಿಐ ಆಟಗಾರರಿಗೆ ಹೇಳಿದೆ.

ಸ್ಟಾರ್ ಆಟಗಾರನೋರ್ವ ಚಾಂಪಿಯನ್ಸ್ ಟ್ರೋಫಿಯಲ್ಲಿ ಪತ್ನಿಯನ್ನು ಕರೆತರಲು ಅವಕಾಶ ಕೋರಿದ್ದರು ಎನ್ನಲಾಗಿದೆ. ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಅಹಮದಾಬಾದ್​ನಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಬಿಸಿಸಿಐ ಅಧಿಕಾರಿಗಳು ಆಟಗಾರರಿಗೆ ಸ್ಟ್ರಿಕ್ಟ್ ಆಗಿ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

‘ನಿಯಮಗಳ ವಿಚಾರದಲ್ಲಿ ಬಿಸಿಸಿಐ ಕೂಡ ತುಂಬಾನೇ ಗಂಭೀರವಾಗಿದೆ. ಇದರಿಂದ ಹಿಂದೆ ಹೋಗುವ ಮಾತಿಲ್ಲ ಎಂಬುದು ತಿಳಿದಿರಲಿ’ ಎಂದು ಆಟಗಾರರಿಗೆ ಸೂಚನೆ ನೀಡಲಾಗಿದೆ. ಪ್ರ್ಯಾಕ್ಟಿಸ್ ಸೆಷನ್​ನಲ್ಲಿ ಒಟ್ಟಿಗೆ ಇರಬೇಕು, ಒಟ್ಟಾಗಿ ಬಸ್​ನಲ್ಲೇ ಸಾಗಬೇಕಿದೆ.

ಇದನ್ನೂ ಓದಿ: ಟೀಂ ಇಂಡಿಯಾ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರು; ಬಿಸಿಸಿಐ ಮಹತ್ವದ ನಿರ್ಧಾರ

‘ಆಟಗಾರನೋರ್ವ ಕುಟುಂಬವನ್ನು ಕರೆತರೋದಾಗಿ ಕೇಳಿದ್ದ. ಆದರೆ, ಬಿಸಿಸಿಐ ಈ ವಿಚಾರದಲ್ಲಿ ಸ್ಟ್ರಿಕ್ಟ್ ಆಗಿದೆ ಎಂದು ಅವರಿಗೆ ತಿಳಿಸಲಾಗಿದೆ’ ಎಂದು ಬಿಸಿಸಿಐ ಮೂಲಗಳು ಹೇಳಿರುವುದಾಗಿ ವರದಿ ಆಗಿದೆ. ಒಬ್ಬರಿಗೆ ಈ ರೀತಿಯ ಅವಕಾಶ ಕೊಟ್ಟರೆ ಎಲ್ಲರೂ ಅದನ್ನೇ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲಾ ಆಟಗಾರರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ಬಿಸಿಸಿಐ ತೂಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!