AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಂ ಇಂಡಿಯಾಕ್ಕೆ ಟೆನ್ಷನ್ ಶುರು; ಪುಣೆ, ಮುಂಬೈನಲ್ಲಿನ ಪ್ರದರ್ಶನವೇ ಇದಕ್ಕೆ ಕಾರಣ

IND vs ENG: ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ 26 ರನ್‌ಗಳ ಸೋಲು ಅನುಭವಿಸಿತು. ಹೀಗಾಗಿ ಪುಣೆ ಮತ್ತು ಮುಂಬೈನಲ್ಲಿ ನಡೆಯುವ ಕೊನೆಯ ಎರಡು ಪಂದ್ಯಗಳು ಟೀಂ ಇಂಡಿಯಾಕ್ಕೆ ನಿರ್ಣಾಯಕವಾಗಿದೆ. ಆದರೆ ಈ ಮೈದಾನಗಳಲ್ಲಿ ಭಾರತದ ಹಿಂದಿನ ದಾಖಲೆಗಳು ಕಳಪೆಯಾಗಿರುವ ಕಾರಣ ಭಾರತ ಯುವ ಪಡೆಗೆ ದೊಡ್ಡ ಸವಾಲು ಎದುರಾಗಿದೆ.

IND vs ENG: ಟೀಂ ಇಂಡಿಯಾಕ್ಕೆ ಟೆನ್ಷನ್ ಶುರು; ಪುಣೆ, ಮುಂಬೈನಲ್ಲಿನ ಪ್ರದರ್ಶನವೇ ಇದಕ್ಕೆ ಕಾರಣ
ಭಾರತ- ಇಂಗ್ಲೆಂಡ್
ಪೃಥ್ವಿಶಂಕರ
|

Updated on: Jan 30, 2025 | 5:26 PM

Share

ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳನ್ನು ನೀರು ಕುಡಿದಷ್ಟೇ ಸುಲಭವಾಗಿ ಗೆದ್ದುಕೊಂಡಿದ್ದ ಟೀಂ ಇಂಡಿಯಾ, ರಾಜ್‌ಕೋಟ್​ನಲ್ಲಿ ನಡೆದ ಮೂರನೇ ಟಿ20ಯಲ್ಲಿ 26 ರನ್‌ಗಳ ಅಂತರದಿಂದ ಸೋಲನುಭವಿಸಿತ್ತು. ಗೆಲುವಿಗೆ 171 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಬ್ಯಾಟ್ಸ್​ಮನ್​ಗಳ ಕಳಪೆ ಪ್ರದರ್ಶನ ಸೋಲಿನ ಆಘಾತ ನೀಡಿತು. ಇದೀಗ ನಾಲ್ಕನೇ ಮತ್ತು ಐದನೇ ಪಂದ್ಯಕ್ಕೆ ತಯಾರಿ ನಡೆಸಿರುವ ಸೂರ್ಯ ಪಡೆಗೆ ಸರಣಿ ಸೋಲಿನ ಆತಂಕ ಎದುರಾಗಿದೆ. ಇದಕ್ಕೆ ಕಾರಣ ಕೊನೆಯ ಎರಡು ಪಂದ್ಯಗಳು ನಡೆಯುವ ಮೈದಾನದಲ್ಲಿ ತಂಡದ ಕಳಪೆ ಪ್ರದರ್ಶನ.

ಪುಣೆ, ಮುಂಬೈನಲ್ಲಿ ಪ್ರದರ್ಶನ ಅಷ್ಟಕಷ್ಟೆ

ಸದ್ಯ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಸೋಲನುಭವಿಸದೇ ಇದ್ದಿದ್ದರೆ ಸರಣಿ ಟೀಂ ಇಂಡಿಯಾದ ಕೈಸೇರುತ್ತಿತ್ತು. ಆದರೆ ಮೂರನೇ ಟಿ20ಯಲ್ಲಿ ಇಂಗ್ಲೆಂಡ್‌ ತಂಡದ ಕೆಳಕ್ರಮಾಂಕದ ಬ್ಯಾಟರ್​ಗಳು 20 ರನ್​ಗಳ ಜೊತೆಯಾಟ ನಡೆಸಲು ಅವಕಾಶ ಮಾಡಿಕೊಟ್ಟಿದ ಭಾರತ ತಂಡಕ್ಕೆ ಕೊನೆಯಲ್ಲಿ 26 ರನ್​ಗಳ ಸೋಲು ಎದುರಾಗಿತ್ತು. ಒಂದು ವೇಳೆ ಆ ಜೊತೆಯಾಟ ಬರದಿದ್ದರೆ, ಟೀಂ ಇಂಡಿಯಾಕ್ಕೆ ಗುರಿ ಮತ್ತಷ್ಟು ಕಡಿಮೆಯಾಗುತ್ತಿದ್ದರಿಂದ ತಂಡ ಗೆಲ್ಲುವ ಸಾಧ್ಯತೆಗಳು ಹೆಚ್ಚಿರುತ್ತಿದ್ದವು. ಆದರೆ ತನ್ನ ತಪ್ಪಿಗೆ ಸೋಲಿನ ದಂಡ ತೆತ್ತಿರುವ ಟೀಂ ಇಂಡಿಯಾಕ್ಕೆ ಕೊನೆಯ ಎರಡು ಪಂದ್ಯಗಳನ್ನು ಸೋಲುವ ಭೀತಿ ಎದುರಾಗಿದೆ.

ಪುಣೆಯಲ್ಲಿ ಗೆಲುವಿನ ಭರವಸೆ ಫಿಫ್ಟಿ-ಫಿಫ್ಟಿ!

ಪುಣೆಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ನಾಲ್ಕನೇ ಟಿ20 ಆಡಬೇಕಿದೆ. ಆದರೆ, ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆ ನೋಡಿದರೆ ಗೆಲುವಿನ ಸಾಧ್ಯತೆಗಳು ತೀರ ಕಡಿಮೆ. ಏಕೆಂದರೆ ಭಾರತ ಇದುವರೆಗೆ ಪುಣೆಯಲ್ಲಿ 4 ಟಿ20 ಪಂದ್ಯಗಳನ್ನು ಆಡಿದ್ದು, 2ರಲ್ಲಿ ಸೋಲು ಕಂಡಿದೆ. ಹೀಗಿರುವಾಗ ಟೀಂ ಇಂಡಿಯಾ ಗೆಲುವಿನ ಬಗ್ಗೆ ಸಂಪೂರ್ಣ ಭರವಸೆ ನೀಡಲು ಸಾಧ್ಯವಿಲ್ಲ. ಅದರಲ್ಲೂ ಹಿಂದೆಂದೂ ಟಿ20 ಪಂದ್ಯ ಆಡದ ರಾಜ್ ಕೋಟ್​ನಲ್ಲಿ ಇಂಗ್ಲೆಂಡ್ ತಂಡ ಪಂದ್ಯ ಗೆದ್ದು ಬರುತ್ತಿದೆ.

ಮುಂಬೈನಲ್ಲಿ ಇಂಗ್ಲೆಂಡ್ ಎದುರು ಸೋಲು

ಇದೀಗ ಪುಣೆಯಲ್ಲಿ ನಡೆಯಲಿರುವ ನಾಲ್ಕನೇ ಟಿ20ಯಲ್ಲಿ ಭಾರತ ಗೆಲುವು ಸಾಧಿಸದಿದ್ದರೆ ಸರಣಿ ಗೆಲ್ಲುವ ಆಸೆಯೊಂದಿಗೆ ಸೂರ್ಯ ಪಡೆ ಮುಂಬೈ ಅಂಗಳಕ್ಕೆ ಕಾಲಿಡಲಿದೆ. ಮುಂಬೈನಲ್ಲಿ ನಡೆಯಲಿರುವ 5ನೇ ಟಿ20 ಎರಡೂ ತಂಡಗಳಿಗೆ ನಿರ್ಣಾಯಕವಾಗಲಿದೆ. ಏಕೆಂದರೆ ಪುಣೆಯಲ್ಲೂ ಇಂಗ್ಲೆಂಡ್ ಗೆದ್ದರೆ ಸರಣಿ 2-2ರಲ್ಲಿ ಸಮಬಲವಾಗಲಿದೆ. ಈಗ ಆ ಪರಿಸ್ಥಿತಿಯಲ್ಲಿ ಮುಂಬೈನಲ್ಲಿ ಟೀಂ ಇಂಡಿಯಾ ಗೆಲುವು ದಾಖಲಿಸಲು ಸಾಧ್ಯವೇ? ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ಏಕೆಂದರೆ ಮುಂಬೈನ ವಾಂಖೆಡೆ ಮೈದಾನದಲ್ಲಿ ಟೀಂ ಇಂಡಿಯಾ 5 ಟಿ20 ಪಂದ್ಯಗಳನ್ನು ಆಡಿದ್ದು, 3ರಲ್ಲಿ ಗೆದ್ದು 2ರಲ್ಲಿ ಸೋತಿದೆ. ಇದರ ಜೊತೆಗೆ ಇನ್ನೊಂದು ಆತಂಕಕ್ಕಾರಿ ಸಂಗತಿಯೆಂದರೆ, ವಾಂಖೆಡೆಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಆಡಿದ ಏಕೈಕ ಪಂದ್ಯದಲ್ಲಿ ಸೋಲನ್ನು ಎದುರಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ