AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS T20I Series: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಈ ದಿನಾಂಕದಂದು ಪ್ರಕಟ: ನಾಯಕ ಯಾರು?

India Squad for Australia T20I Series: ಸೆಮಿಫೈನಲ್ ನಂತರ ಆಸ್ಟ್ರೇಲಿಯಾ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ. ಅಂದರೆ ನವೆಂಬರ್ 16 ಅಥವಾ 17 ರಂದು ತಂಡದ ಘೋಷಣೆ ಆಗಲಿದೆ. ಈ ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಇತರೆ ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ.

IND vs AUS T20I Series: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಈ ದಿನಾಂಕದಂದು ಪ್ರಕಟ: ನಾಯಕ ಯಾರು?
India Squad for AUS T20I
Vinay Bhat
|

Updated on: Nov 10, 2023 | 8:29 AM

Share

ಐಸಿಸಿ ಏಕದಿನ ವಿಶ್ವಕಪ್ 2023 ಮುಕ್ತಾಯವಾಗುತ್ತಿದ್ದಂತೆ, ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ (India vs Australia) ವಿರುದ್ಧದ ಟಿ20 ಸರಣಿಗಾಗಿ ತಯಾರಿಯನ್ನು ಪ್ರಾರಂಭಿಸಲಿದೆ. ಹಾರ್ದಿಕ್ ಪಾಂಡ್ಯ ಗಾಯಗೊಂಡಿರುವುದರಿಂದ ಐದು ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಮಯ ತೆಗೆದುಕೊಳ್ಳುತ್ತಿದೆ. ರೋಹಿತ್ ಪಡೆ ವಿಶ್ವಕಪ್​ನಲ್ಲಿ ಬ್ಯೂಸಿಯಾಗಿದ್ದು, ಆಡಿರುವ ಎಲ್ಲ ಎಂಟು ಪಂದ್ಯಗಳನ್ನು ಗೆದ್ದು, ಸೆಮಿ ಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿದೆ.

ಸದ್ಯ ಪಿಟಿಐ ಮಾಡಿರುವ ವರದಿಗಳ ಪ್ರಕಾರ, ವಿಶ್ವಕಪ್ ಸೆಮಿಫೈನಲ್ ನಂತರ ಆಸ್ಟ್ರೇಲಿಯಾ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ. ಅಂದರೆ ನವೆಂಬರ್ 16 ಅಥವಾ 17 ರಂದು ತಂಡದ ಘೋಷಣೆ ಆಗಲಿದೆ. ಈ ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಇತರೆ ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ. ವಿಶ್ವಕಪ್ ನಂತರ ಇವರೆಲ್ಲ ವಿರಾಮವನ್ನು ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ.

IND vs AUS T20I Series: ಬಿಸಿಸಿಐ ಮಾಸ್ಟರ್ ಪ್ಲಾನ್: 1 ವರ್ಷದ ಬಳಿಕ ತಂಡ ಸೇರಿಕೊಳ್ಳಲಿದ್ದಾರೆ ಈ ಸ್ಟಾರ್ ಆಟಗಾರ

ಇದನ್ನೂ ಓದಿ
Image
ಭಾರತೀಯರು ತಂಗಿರುವ ಬೆಂಗಳೂರಿನ ಹೋಟೆಲ್​ನಲ್ಲಿ ವಿರಾಟ್ ಜೊತೆ ಅನುಷ್ಕಾ
Image
ವಿಶ್ವಕಪ್​ನಲ್ಲಿಂದು ಆಫ್ರಿಕಾ-ಅಫ್ಘಾನಿಸ್ತಾನ ಮುಖಾಮುಖಿ
Image
ಏಕದಿನ ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆದ ರಚಿನ್ ರವೀಂದ್ರ
Image
ಪವಾಡ ನಡೆದ್ರೆ ಮಾತ್ರ ಪಾಕಿಸ್ತಾನ್ ಸೆಮಿಫೈನಲ್​ಗೆ: ಇಲ್ಲಿದೆ ಲೆಕ್ಕಾಚಾರ

ಹಾರ್ದಿಕ್ ಪಾಂಡ್ಯ ಆಸೀಸ್ ವಿರುದ್ಧದ ಸರಣಿಗೆ ಲಭ್ಯವಿರುವುದು ಅನುಮಾನ. ಹೀಗಾಗಿ ಕ್ಯಾಪ್ಟನ್ ಪಟ್ಟ ಯಾರು ತೊಡುತ್ತಾರೆ ನೋಡಬೇಕು. ಪಾಂಡ್ಯ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧ ಪಂದ್ಯವನ್ನು ಆಡುವಾಗ ಗಾಯಕ್ಕೆ ತುತ್ತಾಗಿದ್ದಾರೆ. “ಹಾರ್ದಿಕ್ ಫಿಟ್ ಆಗಿದ್ದಾರೆ. ಆದರೆ, ಆಯ್ಕೆಗೆ ಲಭ್ಯವಾಗಲು ಸ್ವಲ್ಪ ಸಮಯವಿದೆ,” ಎಂದು ಬಿಸಿಸಿಐ ಮೂಲವು ತಿಳಿಸಿದೆ.

ಕ್ಯಾಪ್ಟನ್ ಯಾರು?:

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ, ಆಯ್ಕೆದಾರರು ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರನ್ನು ಸ್ಟ್ಯಾಂಡ್-ಬೈ ಕ್ಯಾಪ್ಟನ್ ಆಗಿ ಆಯ್ಕೆಮಾಡುವ ಸಾಧ್ಯತೆ ಇದೆ. ಸೂರ್ಯಕುಮಾರ್ ಅವರು ಟಿ20 ತಂಡದ ಉಪನಾಯಕರಾಗಿದ್ದಾರೆ, ಆದರೆ ರುತುರಾಜ್ ಗಾಯಕ್ವಾಡ್ ಅವರು ಏಷ್ಯನ್ ಗೇಮ್ಸ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿ ಚಿನ್ನದ ಪದಕ ಗೆಲ್ಲಿಸಿಕೊಟ್ಟಿದ್ದರು. ಅಲ್ಲದೆ ವಿಶ್ವಕಪ್ ನಂತರ ಸೂರ್ಯಕುಮಾರ್ ವಿಶ್ರಾಂತಿ ಕೇಳುವ ಸಾಧ್ಯತೆ ಇದೆ ಕೂಡ ಇದೆ. ಇದರ ನಡುವೆ ಅನುಭವಿ ವೇಗಿ ಭುವನೇಶ್ವರ್ ಕುಮಾರ್ 12 ತಿಂಗಳ ನಂತರ ಭಾರತ ತಂಡಕ್ಕೆ ಮರಳಲಿದ್ದಾರೆ. ವಿಕೆಟ್-ಕೀಪರ್ ಸಂಜು ಸ್ಯಾಮ್ಸನ್ ಹಾಗೂ ರಿಯಾನ್ ಪರಾಗ್ ಕೂಡ ಆಯ್ಕೆ ಆಗಲಿದ್ದಾರೆ ಎಂಬ ಮಾತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ