AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ಆರು ಆಲ್​ರೌಂಡರ್​ಗಳು, ಐವರು ಬೌಲರ್​ಗಳು

India vs Bangladesh: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯ 2ನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಇದಾದ ಬಳಿಕ  ಅಕ್ಟೋಬರ್ 7 ರಿಂದ ಟಿ20 ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿದೆ. ಈ ಸರಣಿಗಾಗಿ ಇದೀಗ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ.

ಟೀಮ್ ಇಂಡಿಯಾದಲ್ಲಿ ಆರು ಆಲ್​ರೌಂಡರ್​ಗಳು, ಐವರು ಬೌಲರ್​ಗಳು
Team India
Follow us
ಝಾಹಿರ್ ಯೂಸುಫ್
|

Updated on:Sep 29, 2024 | 7:32 AM

ಬಾಂಗ್ಲಾದೇಶ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಆರು ಆಲ್​​ರೌಂಡರ್​ಗಳಿರುವುದು ವಿಶೇಷ. ಇನ್ನು ವಿಕೆಟ್ ಕೀಪರ್​ಗಳಾಗಿ ಇಬ್ಬರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಪರಿಪೂರ್ಣ ಬ್ಯಾಟ್ಸ್​ಮನ್​ಗಳಾಗಿ ಆಯ್ಕೆಯಾಗಿರುವುದು ಕೇವಲ ಇಬ್ಬರು ಮಾತ್ರ.

ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾಗೆ ಸ್ಥಾನ ಲಭಿಸಿದೆ. ಅತ್ತ ಇಶಾನ್ ಕಿಶನ್ ಮತ್ತೊಮ್ಮೆ ಅವಕಾಶ ವಂಚಿತರಾಗಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ ಹಾಗೂ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್ ನೀಡಲಾಗಿದೆ.

ಅದೇ ರೀತಿ ಬೌಲರ್​ಗಳಾಗಿ ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣ ಹಾಗೂ ಮಯಾಂಕ್ ಯಾದವ್ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಆಲ್​ರೌಂಡರ್​ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅದರಲ್ಲೂ ಯುವ ಆಲ್​ರೌಂಡರ್​ಗಳಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್ ಹಾಗೂ ನಿತೀಶ್ ಕುಮಾರ್ ರೆಡ್ಡಿಗೆ ಸ್ಥಾನ ಕಲ್ಪಿಸಲಾಗಿದೆ. ಈ ಮೂಲಕ 2026ರ ಟಿ20 ವಿಶ್ವಕಪ್​ಗೆ ಈಗಲೇ ಬಲಿಷ್ಢ ಪಡೆಯನ್ನು ರೂಪಿಸುವ ಕಾಯಕಕ್ಕೆ ಬಿಸಿಸಿಐ ಕೈ ಹಾಕಿದೆ.

ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

ಭಾರತ ಮತ್ತು ಬಾಂಗ್ಲಾ ಟಿ20 ಸರಣಿ ಯಾವಾಗ ಶುರು?

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯ 2ನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಇದಾದ ಬಳಿಕ  ಅಕ್ಟೋಬರ್ 7 ರಿಂದ ಟಿ20 ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿದೆ. ಇನ್ನು ಅಕ್ಟೋಬರ್ 10 ರಂದು ಜರುಗಲಿರುವ 2ನೇ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಈ ಸರಣಿಯ ಮೂರನೇ ಪಂದ್ಯವು ಅಕ್ಟೋಬರ್ 13 ರಂದು ಹೈದರಾಬಾದ್​ನಲ್ಲಿ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ್ ಟಿ20 ಸರಣಿ ವೇಳಾಪಟ್ಟಿ:

1ನೇ ಟಿ20, ಭಾರತ vs ಬಾಂಗ್ಲಾದೇಶ ಸೋಮವಾರ, 7 ಅಕ್ಟೋಬರ್ 2024 7 PM ಗ್ವಾಲಿಯರ್
2ನೇ ಟಿ20, ಭಾರತ vs ಬಾಂಗ್ಲಾದೇಶ ಗುರುವಾರ, 10 ಅಕ್ಟೋಬರ್ 2024 7 PM ದೆಹಲಿ
3ನೇ ಟಿ20, ಭಾರತ vs ಬಾಂಗ್ಲಾದೇಶ ಭಾನುವಾರ, 13 ಅಕ್ಟೋಬರ್ 2024 7 PM ಹೈದರಾಬಾದ್

Published On - 7:32 am, Sun, 29 September 24

ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್