AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ

India T20 Squad: ಯುಎಸ್​ಎ-ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. 15 ಸದಸ್ಯರ ತಂಡದೊಂದಿಗೆ ನಾಲ್ವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಈ 19 ಆಟಗಾರರಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್​ಗೆ ಸ್ಥಾನ ಕಲ್ಪಿಸಲಾಗಿಲ್ಲ.

India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ
TV9 Web
| Edited By: |

Updated on:Apr 30, 2024 | 4:14 PM

Share

T20 World Cup 2024: ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು (India T20 Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಹಾಗೆಯೆ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ.  ಈ ಬಾರಿಯ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಭರ್ಜರಿ ಪ್ರದರ್ಶನ ನೀಡಿರುವ ಶಿವಂ ದುಬೆಗೂ ವಿಶ್ವಕಪ್​ ತಂಡದಲ್ಲಿ ಸ್ಥಾನ ಲಭಿಸಿದೆ.

ಮತ್ತೊಂದೆಡೆ ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಹಾಗೂ ಅವೇಶ್ ಖಾನ್​ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಅಂದರೆ 15 ಸದಸ್ಯರ ತಂಡದಿಂದ ಯಾರಾದರು ಹೊರಬಿದ್ದರೆ ಈ ನಾಲ್ವರು ಆಟಗಾರರಿಂದ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ಇದಾಗ್ಯೂ ಈ ಬಳಗದಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್​ಗೆ ಸ್ಥಾನ ಕಲ್ಪಿಸಲಾಗಿಲ್ಲ.

ಹಾಗೆಯೇ ಈ ಬಾರಿಯ ಐಪಿಎಲ್​ನಲ್ಲಿ ವೇಗದ ಬೌಲಿಂಗ್​ನೊಂದಿಗೆ ಮಿಂಚಿದ್ದ​ ಮಯಾಂಕ್ ಯಾದವ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಬದಲಾಗಿ ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಹಾಗೂ ಜಸ್​ಪ್ರೀತ್ ಬುಮ್ರಾಗೆ ಸ್ಥಾನ ನೀಡಲಾಗಿದೆ.

ಇನ್ನು ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ಯುಜ್ವೇಂದ್ರ ಚಹಲ್ ಸ್ಥಾನ ಪಡೆದರೆ, ಸ್ಪಿನ್ ಆಲ್​ರೌಂಡರ್​ಗಳಾಗಿ ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ. ಹಾಗೆಯೇ ವೇಗದ ಬೌಲಿಂಗ್​ ಆಲ್​ರೌಂಡರ್​ಗಳಾಗಿ ಟೀಮ್ ಇಂಡಿಯಾ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: T20I World Cup 2024: ಟಿ20 ವಿಶ್ವಕಪ್​ಗೆ ಸೌತ್ ಆಫ್ರಿಕಾ ತಂಡ ಪ್ರಕಟ

ಟಾಪ್-4 ಬ್ಯಾಟರ್​ಗಳು:

ಭಾರತ ವಿಶ್ವಕಪ್ ತಂಡದಲ್ಲಿ ಟಾಪ್-4 ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಇಲ್ಲಿ ಹಿಟ್​ಮ್ಯಾನ್ ಜೊತೆ ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿದರೆ, ಕಿಂಗ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಕಣಕ್ಕಿಳಿಯುವುದು ಖಚಿತ. ಇನ್ನು ಐದನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಆಡಲಿದ್ದಾರಾ ಅಥವಾ ಶಿವಂ ದುಬೆಗೆ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ. ಅದರಂತೆ ಟೀಮ್ ಇಂಡಿಯಾದ ಬಲಿಷ್ಠ ಬಳಗ ಈ ಕೆಳಗಿನಂತಿದೆ.

ಭಾರತ ಟಿ20 ವಿಶ್ವಕಪ್​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

Published On - 3:51 pm, Tue, 30 April 24

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್