AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಸ್ಟಾರ್ ಆಟಗಾರನನ್ನು ಮತ್ತೆ ಆಯ್ಕೆ ಮಾಡಲು ಮುಂದಾದ ಬಿಸಿಸಿಐ

India T20 WC Squad: ಜಸ್​ಪ್ರೀತ್ ಬುಮ್ರಾ ಅವರ ಅಲಭ್ಯತೆಯ ನಡುವೆಯೂ ಹೊಸ ಪ್ರಯೋಗಕ್ಕೆ ಮುಂದಾಗಿದ್ದ ಬಿಸಿಸಿಐಗೆ ಏಷ್ಯಾಕಪ್​ನಲ್ಲಿನ ಫಲಿತಾಂಶ ಹೊಸ ಪಾಠ ಕಲಿಸಿದೆ.

Team India: ಸ್ಟಾರ್ ಆಟಗಾರನನ್ನು ಮತ್ತೆ ಆಯ್ಕೆ ಮಾಡಲು ಮುಂದಾದ ಬಿಸಿಸಿಐ
Team India
TV9 Web
| Updated By: ಝಾಹಿರ್ ಯೂಸುಫ್|

Updated on: Sep 07, 2022 | 5:31 PM

Share

ಏಷ್ಯಾಕಪ್​ನಲ್ಲಿನ ಟೀಮ್ ಇಂಡಿಯಾದ (Team India) ಕಳಪೆ ಬೌಲಿಂಗ್ ಪ್ರದರ್ಶನದ ಬೆನ್ನಲ್ಲೇ ಇದೀಗ ಬಿಸಿಸಿಐ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ಅದರಲ್ಲೂ 2021ರ ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಟಿ20 ತಂಡದಿಂದ ಅವಕಾಶ ವಂಚಿತರಾಗಿದ್ದ ಮೊಹಮ್ಮದ್ ಶಮಿಗೆ ಮತ್ತೆ ತಂಡದಲ್ಲಿ ಸ್ಥಾನ ಕಲ್ಪಿಸಲು ಆಯ್ಕೆ ಸಮಿತಿ ಚರ್ಚಿಸಿದೆ ಎಂದು ವರದಿಯಾಗಿದೆ. ಅದರಂತೆ ಮುಂಬರುವ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಯಲ್ಲಿ ಶಮಿ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2021 ರ ಟಿ20 ವಿಶ್ವಕಪ್​ ಬಳಿಕ ಮೊಹಮ್ಮದ್ ಶಮಿಯನ್ನು ಟಿ20 ಕ್ರಿಕೆಟ್​ಗೆ ಪರಿಗಣಿಸಿರಲಿಲ್ಲ. ಅಲ್ಲದೆ ಏಕದಿನ ಹಾಗೂ ಟೆಸ್ಟ್ ತಂಡಗಳಿಗೆ ಮಾತ್ರ ಆಯ್ಕೆ ಮಾಡಲಾಗಿತ್ತು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಶಮಿ 20 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದಾಗ್ಯೂ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್, ಇಂಗ್ಲೆಂಡ್​ ವಿರುದ್ದದ ಟಿ20 ಸರಣಿಗಳಲ್ಲಿ ಶಮಿಗೆ ಚಾನ್ಸ್ ನೀಡಿರಲಿಲ್ಲ. ಅಲ್ಲದೆ ಏಷ್ಯಾಕಪ್​ಗೆ ಅವೇಶ್ ಖಾನ್, ಅರ್ಷದೀಪ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಹೀನಾಯ ಪ್ರದರ್ಶನ ನೀಡಿರುವ ಬೆನ್ನಲ್ಲೇ ಶಮಿ ಅವರಿಗೆ ಮತ್ತೆ ಟಿ20 ತಂಡದಲ್ಲಿ ಸ್ಥಾನ ನೀಡಲು ಬಿಸಿಸಿಐ ಮುಂದಾಗಿದೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಆಸ್ಟ್ರೇಲಿಯಾ ವಿರುದ್ಧದ ಸರಣಿಯು ಇದೇ ತಿಂಗಳು ಶುರುವಾಗಲಿದ್ದು, ಸೆಪ್ಟೆಂಬರ್ 20, 23 ಮತ್ತು 25 ರಂದು ಕ್ರಮವಾಗಿ ಮೊಹಾಲಿ, ನಾಗ್ಪುರ ಮತ್ತು ಹೈದರಾಬಾದ್‌ನಲ್ಲಿ ಮೂರು ಪಂದ್ಯಗಳನ್ನು ಆಡಲಾಗುತ್ತದೆ. ಈ ಸರಣಿಯಲ್ಲಿ ಶಮಿ ಅವರಿಗೆ ಮತ್ತೆ ಅವಕಾಶ ನೀಡಲಿದ್ದೇವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಾಗ್ಯೂ ಟಿ20 ವಿಶ್ವಕಪ್​ನಲ್ಲಿ ಮೊಹಮ್ಮದ್ ಶಮಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಏಕೆಂದರೆ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಈ ಇಬ್ಬರು ವೇಗಿಗಳು ಕೂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ನಿರೀಕ್ಷೆಯಿದೆ. ಹಾಗೆಯೇ ಭುವನೇಶ್ವರ್ ಕುಮಾರ್ ಹಾಗೂ ದೀಪಕ್ ಚಹರ್ ಕೂಡ ತಂಡದಲ್ಲಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಮೊಹಮ್ಮದ್ ಶಮಿಯ ಪ್ರದರ್ಶನ ಮೇಲೆ ಅವರ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರವಾಗಲಿದೆ.

ಒಟ್ಟಿನಲ್ಲಿ ಅನುಭವಿ ವೇಗಿಗಳ ಅಲಭ್ಯತೆಯ ನಡುವೆಯೂ ಹೊಸ ಪ್ರಯೋಗಕ್ಕೆ ಮುಂದಾಗಿದ್ದ ಬಿಸಿಸಿಐಗೆ ಏಷ್ಯಾಕಪ್​ನಲ್ಲಿನ ಫಲಿತಾಂಶ ಹೊಸ ಪಾಠ ಕಲಿಸಿದೆ. ಹೀಗಾಗಿ ಟಿ20 ವಿಶ್ವಕಪ್​ ಮುನ್ನ ನಡೆಯಲಿರುವ ಸರಣಿಗಳ ಮೂಲಕ ಅತ್ಯುತ್ತಮ ಪ್ರದರ್ಶನ ನೀಡುವ ಬೌಲರ್​ಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ಮುಂದಾಗಿರುವುದು ಸ್ಪಷ್ಟ. ಇದೇ ಕಾರಣದಿಂದಾಗಿ ಮೊಹಮ್ಮದ್ ಶಮಿಗೆ ಮತ್ತೆ ತಂಡದಲ್ಲಿ ಅವಕಾಶ ಕಲ್ಪಿಸಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ