AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ; ಹೊಸಬರಿಗೆ ಅವಕಾಶ, ಪ್ರಮುಖರಿಗೆ ತಂಡದಿಂದ ಗೇಟ್​​ಪಾಸ್!

T20 World Cup: 18 ಸದಸ್ಯರ ಆಟಗಾರರನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ಹಲವು ದೊಡ್ಡ ಮುಖಗಳಿಗೆ ಭಾರತೀಯ ಟಿ 20 ವಿಶ್ವಕಪ್ ತಂಡದಲ್ಲಿ ಅವಕಾಶ ಸಿಕ್ಕಿಲ್ಲ.

T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ; ಹೊಸಬರಿಗೆ ಅವಕಾಶ, ಪ್ರಮುಖರಿಗೆ ತಂಡದಿಂದ ಗೇಟ್​​ಪಾಸ್!
ಭಾರತ ತಂಡ
TV9 Web
| Edited By: |

Updated on: Sep 08, 2021 | 9:41 PM

Share

ಟಿ 20 ವಿಶ್ವಕಪ್​ಗಾಗಿ ಭಾರತ ತನ್ನ ತಂಡವನ್ನು ಪ್ರಕಟಿಸಿದೆ. ಯುಎಇಯಲ್ಲಿ ನಡೆಯಲಿರುವ ಈ ಪಂದ್ಯಾವಳಿಗೆ 18 ಸದಸ್ಯರ ಆಟಗಾರರನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ಹಲವು ದೊಡ್ಡ ಮುಖಗಳಿಗೆ ಭಾರತೀಯ ಟಿ 20 ವಿಶ್ವಕಪ್ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಇವರುಗಳಲ್ಲಿ ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಟಿ ನಟರಾಜನ್, ಶಿಖರ್ ಧವನ್, ಸಂಜು ಸ್ಯಾಮ್ಸನ್, ಮನೀಶ್ ಪಾಂಡೆ ಮುಂತಾದ ಹೆಸರುಗಳು ಸೇರಿವೆ. ಕುಲದೀಪ್, ಸ್ಯಾಮ್ಸನ್ ಮತ್ತು ಪಾಂಡೆ ಕೂಡ ಇತ್ತೀಚೆಗೆ ಶ್ರೀಲಂಕಾ ಪ್ರವಾಸದಲ್ಲಿ ನಡೆದ ಟಿ 20 ಸರಣಿಗೆ ಟೀಮ್ ಇಂಡಿಯಾದ ಭಾಗವಾಗಿದ್ದರು.

ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಟಿ 20 ವಿಶ್ವಕಪ್ ನಡೆಯಲಿದೆ. ಇದಕ್ಕಾಗಿ 15 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಘೋಷಿಸಿದೆ. ಇದಲ್ಲದೇ, ಮೀಸಲು ಆಟಗಾರರನ್ನು ಸಹ ಆಯ್ಕೆ ಮಾಡಲಾಗಿದೆ ಇದರಿಂದ ಗಾಯಗಳು ಅಥವಾ ಯಾವುದೇ ಇತರ ತುರ್ತುಸ್ಥಿತಿಗಳನ್ನು ನಿಭಾಯಿಸಬಹುದು. ಟಿ 20 ವಿಶ್ವಕಪ್ ಅನ್ನು ಯುಎಇ ಮತ್ತು ಒಮಾನ್‌ನಲ್ಲಿ ಆಯೋಜಿಸಲಾಗಿದೆ ಆದರೆ ಅದರ ಆತಿಥೇಯ ಭಾರತ. ಬಿಸಿಸಿಐಗೆ ಎಲ್ಲಾ ಹೋಸ್ಟಿಂಗ್ ಹಕ್ಕುಗಳಿವೆ. ವಾಸ್ತವವಾಗಿ, ಐಸಿಸಿ ಪಂದ್ಯಾವಳಿಯು ಈ ಮೊದಲು ಭಾರತೀಯ ನೆಲದಲ್ಲಿ ನಡೆಯಬೇಕಿತ್ತು, ಆದರೆ ಕೊರೊನಾದಿಂದಾಗಿ ಯುಎಇ ಮತ್ತು ಒಮಾನ್‌ನಲ್ಲಿ ಆಯೋಜಿಸಬೇಕಾಯಿತ್ತು. ಈ ವಿಶ್ವಕಪ್ ಅಕ್ಟೋಬರ್ 17 ಮತ್ತು ನವೆಂಬರ್ 14 ರ ನಡುವೆ ನಡೆಯಲಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತವು ಮೊದಲ ಬಾರಿಗೆ ಟಿ 20 ವಿಶ್ವಕಪ್ ಗೆದ್ದಿತು ಆದರೆ ಅಂದಿನಿಂದ ತಂಡಕ್ಕೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ.

ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ ಈ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗ್ರೂಪ್ -2 ರಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ, ಭಾರತದೊಂದಿಗೆ ಪಾಕಿಸ್ತಾನ, ನ್ಯೂಜಿಲ್ಯಾಂಡ್ ಮತ್ತು ಅಫ್ಘಾನಿಸ್ತಾನ ತಂಡಗಳಿವೆ. ಆದರೆ ಅರ್ಹತಾ ಸುತ್ತಿನಿಂದ ಎರಡು ತಂಡಗಳು ಬರುತ್ತವೆ. ಭಾರತ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 24 ರಂದು ಪಾಕಿಸ್ತಾನದ ವಿರುದ್ಧ ಆಡಬೇಕಿದೆ. ಇದರ ನಂತರ, ಅಕ್ಟೋಬರ್ 31 ರಂದು, ನ್ಯೂಜಿಲೆಂಡ್ ವಿರುದ್ಧ ಆಡಲಿದ್ದಾರೆ. ನವೆಂಬರ್ 3 ರಂದು ಅಫ್ಘಾನಿಸ್ತಾನವನ್ನು ಎದುರಿಸಲಿದ್ದಾರೆ. ನವೆಂಬರ್ 5 ಮತ್ತು 8 ರಂದು ಭಾರತವು ಉಳಿದ ಎರಡು ಪಂದ್ಯಗಳನ್ನು ಆಡಲಿದೆ.

ಟಿ 20 ವಿಶ್ವಕಪ್‌ಗಾಗಿ ಭಾರತ ತಂಡ ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್ ಅಶ್ವಿನ್, ರಾಹುಲ್ ಚಾಹರ್, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ .

ಹೆಚ್ಚುವರಿ ಆಟಗಾರರು – ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ