AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India T20 World cup: ಭಾರತ ಟಿ-20 ವಿಶ್ವಕಪ್ ತಂಡದಲ್ಲಿ ದೊಡ್ಡ ಬದಲಾವಣೆ: ಹೊಸದಾಗಿ ಸೇರಲಿದ್ದಾರೆ ಈ ಆಟಗಾರರು?

India T20 World Cup squad: ಐಸಿಸಿ ಟಿ-20 ವಿಶ್ವಕಪ್​ಗೆ ಈಗ ಪ್ರಕಟವಾಗಿರುವ ಭಾರತ ತಂಡ ಫೈನಲ್ ಎಂದು ಹೇಳಲು ಸಾಧ್ಯವಿಲ್ಲ. ಐಪಿಎಲ್ 2021ರ ನಡುವಿನಲ್ಲಿ ಟೀಮ್ ಇಂಡಿಯಾದಲ್ಲಿ ಬದಲಾವಣೆ ಆಗುವ ಸಾಧ್ಯತೆ ಕೂಡ ಇದೆ.

India T20 World cup: ಭಾರತ ಟಿ-20 ವಿಶ್ವಕಪ್ ತಂಡದಲ್ಲಿ ದೊಡ್ಡ ಬದಲಾವಣೆ: ಹೊಸದಾಗಿ ಸೇರಲಿದ್ದಾರೆ ಈ ಆಟಗಾರರು?
India T20 World cup
TV9 Web
| Updated By: Vinay Bhat|

Updated on: Sep 28, 2021 | 10:56 AM

Share

ಬಹುನಿರೀಕ್ಷಿತ ಐಸಿಸಿ ಟಿ-20 ವಿಶ್ವಕಪ್ (ICC T20 World cup 2021) ಟೂರ್ನಿಗೆ ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಿರಾಟ್‌ ಕೊಹ್ಲಿ (Virat Kohli) ಸಾರಥ್ಯದ 15 ಸದಸ್ಯರ ಭಾರತ ತಂಡವನ್ನು ಪ್ರಕಟಮಾಡಿತ್ತು. ಸಂಭಾವ್ಯ ತಂಡದ ಪಟ್ಟಿಯಲ್ಲಿದ್ದ ಕೆಲವು ಆಟಗಾರರನ್ನು ಕೈಬಿಟ್ಟು ಆಯ್ಕೆ ಸಮಿತಿ ಶಾಕ್ ಕೂಡ ನೀಡಿತ್ತು. ಪ್ರಮುಖವಾಗಿ ಶಿಖರ್ ಧವನ್ (Shikhar Dhawan), ಯುಜ್ವೇಂದ್ರ ಚಾಹಲ್ (Yuzvendra Chahal), ಟಿ. ನಟರಾಜನ್ ಅವರನ್ನು ತಂಡದಿಂದ ಹೊರಗಿಟ್ಟಿದ್ದರೆ, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಮತ್ತು ದೀಪಕ್ ಚಹರ್ ಅವರನ್ನು ಸ್ಟ್ಯಾಂಡ್ ಬೈ ಆಟಗಾರರನ್ನಾಗಿ ಹೆಸರಿಸಿದ್ದು ಅಚ್ಚರಿಗೆ ಕಾರಣವಾಗಿತ್ತು. ಅಲ್ಲದೆ ರವಿಚಂದ್ರನ್ ಅಶ್ವಿನ್ (Ravichandran Ashwin) ಬರೋಬ್ಬರಿ 4 ವರ್ಷಗಳ ಬಳಿಕ ಭಾರತ ಟಿ-20 ತಂಡ ಸೇರಿದ್ದಾರೆ. ಸದ್ಯ ಟೀಮ್ ಇಂಡಿಯಾದ ಟಿ-20 ವಿಶ್ವಕಪ್ ತಂಡದಲ್ಲಿ ಬದಲಾವಣೆ ಆಗುವ ಸಂಭವವಿದೆ.

ಹೌದು, ಈಗ ಪ್ರಕಟವಾಗಿರುವ ತಂಡ ಫೈನಲ್ ಎಂದು ಹೇಳಲು ಸಾಧ್ಯವಿಲ್ಲ, ಭಾರತದ ಈ ತಂಡದಲ್ಲಿ ಬದಲಾವಣೆ ಆಗುವ ಸಾಧ್ಯತೆ ಕೂಡ ಇದೆ. ಯಾಕಂದ್ರೆ ಈಗ ಪ್ರಕಟಿಸಿರುವ ತಂಡದಲ್ಲಿ ಬೇಕಿದ್ದರೆ ಬದಲಾವಣೆ ಮಾಡಲು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಕ್ಟೋಬರ್ 10 ರ ವರೆಗೆ ಅವಕಾಶ ನೀಡಿದೆ. ಹೀಗಾಗಿ ಸದ್ಯ ಸಾಗುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2021 ಎರಡನೇ ಚರಣದಲ್ಲಿ ಟಿ-20 ವಿಶ್ವಕಪ್​ಗೆ ಆಯ್ಕೆಯಾಗದ ಆಟಗಾರರು ಉತ್ತಮ ಪ್ರದರ್ಶನ ತೋರಿದರೆ ಅವರು ಅವಕಾಶ ಪಡೆಯುವ ಸಾಧ್ಯತೆ ಇದೆ. ಅಂತೆಯೆ ಆಯ್ಕೆಯಾದ ಆಟಗಾರರು ಕಳಪೆ ಆಟವಾಡಿದರೆ ಅಥವಾ ಇಂಜುರಿಗೆ ತುತ್ತಾದರೆ ಅವಕಾಶವಂಚಿತರಿಗೆ ಚಾನ್ಸ್ ಸಿಗಬಹುದು.

ಯುಜ್ವೇಂದ್ರ ಚಹಾಲ್: ಈ ಪೈಕಿ ಹೊಸದಾಗಿ ಸೇರಬಹುದಾದ ಆಟಗಾರರ ಸ್ಥಾನಕ್ಕೆ ಯುಜ್ವೇಂದ್ರ ಚಹಾಲ್ ಹೆಸರು ಜೋರಾಗಿ ಕೇಳಿಬರುತ್ತಿದೆ. ಈ ಬಾರಿಯ ಯುಎಇ ಚರಣದ ಐಪಿಎಲ್​ನಲ್ಲಿ ಚಹಾಲ್ ಬೊಂಬಾಟ್ ಪ್ರದರ್ಶನ ತೋರುತ್ತಿದ್ದಾರೆ. ಜೊತೆಗೆ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ, ಟಿ-20 ವಿಶ್ವಕಪ್ ಭಾರತ ತಂಡಕ್ಕೆ ಯುಜ್ವೇಂದ್ರ ಚಹಾಲ್ ಅವರನ್ನ ಯಾಕೆ ಆಯ್ಕೆ ಮಾಡಿಲ್ಲ ಎಂಬುದಕ್ಕೆ ಕಾರಣವಂತೂ ಗೊತ್ತಾಗಿಲ್ಲ ಎಂದು ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ್ದಾರೆ. ಮುಂದಿನ ಐಪಿಎಲ್ ಪಂದ್ಯಗಳಲ್ಲಿ ಇವರು ಇದೇರೀತಿ ಪ್ರದರ್ಶನ ನೀಡಿದರೆ ಟಿ-20 ವಿಶ್ವಕಪ್ ತಂಡಕ್ಕೆ ಆಯ್ಕೆ ಆಗುವ ಸಾಧ್ಯತೆ ಇದೆ.

ಹರ್ಷಲ್ ಪಟೇಲ್: ಐಪಿಎಲ್ 2021 ರಲ್ಲಿ ಅತಿ ಹೆಚ್ಚು ವಿಕೆಟ್ ಕಿತ್ತಿದ್ದಲ್ಲದೆ, ಕಳೆದ ಮುಂಬೈ ಇಂಡಿಯನ್ಸ್ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿರುವ ಹರ್ಷಲ್ ಪಟೇಲ್ ಕೂಡ ಟಿ-20 ವಿಶ್ವಕಪ್ ತಂಡದಲ್ಲಿಲ್ಲ. ಹರ್ಯಾಣದವರಾದ ಹರ್ಷಲ್‌ ಪಟೇಲ್‌ ಈ ಬಗ್ಗೆ ಮಾತನಾಡಿದ್ದು, “ನಾನು ಯಾವತ್ತೂ ಯಾವುದಕ್ಕೂ ವಿಷಾದಿಸಿದವನಲ್ಲ. ಆಯ್ಕೆಯ ನಿರ್ಧಾರ ನನ್ನ ಕೈಲಿಲ್ಲ. ಅದು ಕ್ಲಬ್‌ ಕ್ರಿಕೆಟ್‌, ಐಪಿಎಲ್‌, ಹರ್ಯಾಣ ಪರ ಇರಬಹುದು ಅಥವಾ ಅಥವಾ ಮುಂದೊಂದು ದಿನ ದೇಶದ ಪರ ಆಡಲಿಳಿದಾಗಲೂ ಇರ ಬಹುದು” ಎಂದು ಹೇಳಿದ್ದಾರೆ. ಇವರುಕೂಡ ರೇಸ್​ನಲ್ಲಿದ್ದಾರೆ.

ಶಿಖರ್ ಧವನ್: ಶಿಖರ್ ಧವನ್ ಟಿ-20 ವಿಶ್ವಕಪ್​ಗೆ ಆಯ್ಕೆಯಾಗದೆ ಇದ್ದಿದ್ದು ನಿಜಕ್ಕೂ ಶಾಕಿಂಗ್ ಸುದ್ದಿಯಾಗಿತ್ತು. ಭರ್ಜರಿ ಫಾರ್ಮ್​ನಲ್ಲಿರುವ ಇವರು ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ರನ್ ಕಲೆಹಾಕಿದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಇವರುಕೂಡ ವಿಶ್ವಕಪ್ ತಂಡಕ್ಕೆ ಸೇರಬಹುದು.

MI vs PBKS, IPL 2021: ಗೆಲ್ಲಲೇ ಬೇಕಾದ ಪಂದ್ಯಕ್ಕೆ ಮುಂಬೈ ತಂಡದಲ್ಲಿ ಬದಲಾವಣೆ ಖಚಿತ: ಯಾವ ಆಟಗಾರ ಹೊಸ ಸೇರ್ಪಡೆ?

Sanju Samson: ಧವನ್ ಹಿಂದಿಕ್ಕಿ ಆರೆಂಜ್ ಕ್ಯಾಪ್ ತೊಟ್ಟ ಸಂಜು ಸ್ಯಾಮ್ಸನ್: ಪರ್ಪಲ್ ಕ್ಯಾಪ್, ಪಾಯಿಂಟ್ ಟೇಬಲ್ ಪಟ್ಟಿ ಇಲ್ಲಿದೆ

(India T20 World cup Who are playing now IPL 2021 still have chances and can be part of the ICC T20 World Cup)

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್