IND vs ENG: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ನಾಯಕ? ತಂಡದಲ್ಲೂ ಸಂಪೂರ್ಣ ಬದಲಾವಣೆ

IND vs ENG: ಟೆಸ್ಟ್ ಸರಣಿಯ ನಂತರ ಟೀಂ ಇಂಡಿಯಾ ಇಂಗ್ಲೆಂಡ್‌ನಲ್ಲಿ ಟಿ20 ಸರಣಿಯನ್ನು ಆಡಬೇಕಿದ್ದು, ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡುವ ತಂಡವೇ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡಬಹುದು ಎಂಬ ವರದಿಗಳಿವೆ.

IND vs ENG: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ನಾಯಕ? ತಂಡದಲ್ಲೂ ಸಂಪೂರ್ಣ ಬದಲಾವಣೆ
ರಾಹುಲ್, ಹಾರ್ದಿಕ್
Follow us
| Updated By: ಪೃಥ್ವಿಶಂಕರ

Updated on: Jun 22, 2022 | 1:25 PM

ಶೀಘ್ರದಲ್ಲೇ ಭಾರತ ತಂಡ (Team India) ಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ತೆರಳಲಿದೆ. ಮೊದಲ ಪಂದ್ಯ ಜೂನ್ 26 ರಂದು ನಡೆಯಲಿದ್ದು, ಎರಡನೇ ಪಂದ್ಯ ಜೂನ್ 28 ರಂದು ನಡೆಯಲಿದೆ. ಈ ತಂಡದ ಕಮಾಂಡ್ ಹಾರ್ದಿಕ್ ಪಾಂಡ್ಯ (Hardik Pandya) ಕೈಯಲ್ಲಿದೆ ಏಕೆಂದರೆ ನಾಯಕ ರೋಹಿತ್ ಶರ್ಮಾ (Rohit Sharma) ನಾಯಕತ್ವದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಐದನೇ ಪಂದ್ಯವನ್ನು ಆಡಲಿದೆ. ಕಳೆದ ವರ್ಷ ನಡೆದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೊನಾದಿಂದಾಗಿ ಮುಂದೂಡಲ್ಪಟ್ಟಿತು. ಈಗ ಅದೇ ಟೆಸ್ಟ್​ ಸರಣಿಯ ಅಂತಿಮ ಪಂದ್ಯ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಈ ಟೆಸ್ಟ್ ಸರಣಿಯ ನಂತರ ಟೀಂ ಇಂಡಿಯಾ ಇಂಗ್ಲೆಂಡ್‌ನಲ್ಲಿ ಟಿ20 ಸರಣಿಯನ್ನು ಆಡಬೇಕಿದ್ದು, ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡುವ ತಂಡವೇ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡಬಹುದು ಎಂಬ ವರದಿಗಳಿವೆ.

ರೋಹಿತ್ ಇದ್ದಾಗಲೂ ಹಾರ್ದಿಕ್ ಪಾಂಡ್ಯ ನಾಯಕನಾ?

ಇದನ್ನೂ ಓದಿ
Image
ENG vs IND: ನಾಯಕತ್ವ ಬಿಟ್ಟರೂ ಜವಬ್ದಾರಿ ಮರೆಯದ ಕೊಹ್ಲಿ; ಪಂದ್ಯಕ್ಕೂ ಮುನ್ನ ಆಟಗಾರರಿಗೆ ಗೆಲುವಿನ ಟಿಪ್ಸ್ ನೀಡಿದ ವಿರಾಟ್
Image
Cristiano Ronaldo: ಕ್ರಿಸ್ಟಿಯಾನೊ ರೊನಾಲ್ಡೊ ಕಾರು ಅಪಘಾತ; 17 ಕೋಟಿ ದುಬಾರಿ ಬೆಲೆಯ ಬುಗಾಟ್ಟಿ ಪುಡಿ ಪುಡಿ!
Image
SL vs AUS: 6 ಎಸೆತ, 19 ರನ್ ಬೇಕು; 3 ಬೌಂಡರಿ ಬಾರಿಸಿದ ಆಸೀಸ್! ಕೊನೆಯ ಓವರ್ ರೋಚಕತೆ ಹೇಗಿತ್ತು ಗೊತ್ತಾ?

ಟೈಮ್ಸ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ವರದಿಯ ಪ್ರಕಾರ, ಐರ್ಲೆಂಡ್‌ನಲ್ಲಿ ಟಿ 20 ಸರಣಿಯನ್ನು ಆಡುವ ಪಾಂಡ್ಯ ನಾಯಕತ್ವದ ಭಾರತ ತಂಡವೇ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯನ್ನು ಆಡಬಹುದು ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎಡ್ಜ್‌ಬಾಸ್ಟನ್ ಟೆಸ್ಟ್ ಜುಲೈ 5 ರಂದು ಕೊನೆಗೊಳ್ಳಲಿದ್ದು, ಜುಲೈ 7 ರಿಂದ ಟಿ20 ಸರಣಿ ಪ್ರಾರಂಭವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಆಟಗಾರರು ಟೆಸ್ಟ್‌ನಿಂದ ಟಿ 20 ಸ್ವರೂಪಕ್ಕೆ ಬದಲಾಗುವುದು ಕಷ್ಟಕರವಾಗಿದೆ. ಹಾಗಾಗಿ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡುವ ತಂಡವನ್ನೇ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಸುವ ಸಾಧ್ಯತೆಗಳಿವೆ.

ಇದನ್ನೂ ಓದಿ:T20 World Cup: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಲು ಐಸಿಸಿ ಗಡುವು; ಈ 4 ಸರಣಿಗಳಿಂದ ತಂಡ ಕಟ್ಟಬೇಕಿದೆ ಕೋಚ್ ರಾಹುಲ್

ಐರ್ಲೆಂಡ್ ವಿರುದ್ಧದ ಟಿ 20 ಸರಣಿಯ ನಂತರ, ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ ಜುಲೈ 1 ರಂದು ಡರ್ಬಿಶೈರ್ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ. ಅದೇ ಸಮಯದಲ್ಲಿ ಜುಲೈ 3 ರಂದು ನಾರ್ಥಾಂಪ್ಟನ್‌ಶೈರ್ ವಿರುದ್ಧ ಟಿ20 ಅಭ್ಯಾಸ ಪಂದ್ಯವೂ ನಡೆಯಲಿದೆ. ಈ ವೇಳೆ ರೋಹಿತ್ ಶರ್ಮಾ ನೇತೃತ್ವದ ತಂಡ ಎಡ್ಜ್‌ಬಾಸ್ಟನ್‌ನಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ.

ಐರ್ಲೆಂಡ್​ಗೆ ಭಾರತ ಪ್ರವಾಸದ ವೇಳಾಪಟ್ಟಿ

– ಭಾರತ ವಿರುದ್ಧ ಐರ್ಲೆಂಡ್, 1ನೇ ಟಿ20 – 26 ಜೂನ್ – ಭಾರತ ವಿರುದ್ಧ ಐರ್ಲೆಂಡ್, 2ನೇ ಟಿ20 – 28 ಜೂನ್

ಭಾರತದ ಇಂಗ್ಲೆಂಡ್ ಪ್ರವಾಸದ ವೇಳಾಪಟ್ಟಿ

ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್)

ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)

ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)

ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

ಏಕದಿನ ಸರಣಿ ವೇಳಾಪಟ್ಟಿ:

ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)

ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)

ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ