AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ಆಟಗಾರರಿಗೆ ವಿಶ್ರಾಂತಿ: ಟೀಮ್ ಇಂಡಿಯಾಗೆ ಹೊಸ ನಾಯಕ!

India vs Afghanistan: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯವಾಡಲಿದ್ದು, ಇದಾದ ಬಳಿಕ ಮೂರು ಮ್ಯಾಚ್​ಗಳ ಏಕದಿನ ಸರಣಿ ಆಡಲಿದೆ.

ಸ್ಟಾರ್ ಆಟಗಾರರಿಗೆ ವಿಶ್ರಾಂತಿ: ಟೀಮ್ ಇಂಡಿಯಾಗೆ ಹೊಸ ನಾಯಕ!
Team India
ಝಾಹಿರ್ ಯೂಸುಫ್
|

Updated on:Apr 21, 2026 | 12:55 PM

Share

India vs Afghanistan: ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ದೊಡ್ಡ ಬದಲಾವಣೆಗಳಾಗುವ ಸಾಧ್ಯತೆಯಿದೆ. ಸತತ ಕ್ರಿಕೆಟ್ ಪಂದ್ಯಗಳ ಒತ್ತಡ ಮತ್ತು ಕಾರ್ಯಭಾರ ನಿರ್ವಹಣೆಯ ಹಿನ್ನೆಲೆಯಲ್ಲಿ, ಟೀಮ್ ಇಂಡಿಯಾದ ಸ್ಟಾರ್ ಆಟಗಾರರಿಗೆ ಬಿಸಿಸಿಐ ವಿಶ್ರಾಂತಿ ನೀಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ವಿಶ್ರಾಂತಿಗೆ ಪ್ರಮುಖ ಕಾರಣಗಳು:

  • ಐಪಿಎಲ್ 2026ರ ಒತ್ತಡ: ಐಪಿಎಲ್ ಫೈನಲ್ ಪಂದ್ಯವು ಮೇ 31 ರಂದು ನಡೆಯಲಿದ್ದು, ಜೂನ್ 6 ರಿಂದ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಆಟಗಾರರಿಗೆ ಚೇತರಿಸಿಕೊಳ್ಳಲು ಕೇವಲ 5 ದಿನಗಳ ಕಾಲಾವಕಾಶ ಮಾತ್ರ ಇರಲಿದೆ. ಹೀಗಾಗಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ.
  • WTC ಅಂಕಪಟ್ಟಿಗೆ ಸೇರಿಲ್ಲ: ಈ ಟೆಸ್ಟ್ ಪಂದ್ಯವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (2025-27) ಭಾಗವಾಗಿಲ್ಲ. ಆದ್ದರಿಂದ, ಈ ಪಂದ್ಯದ ಫಲಿತಾಂಶವು ಭಾರತದ ಫೈನಲ್ ಹಾದಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
  • ಮುಂದಿನ ಸರಣಿಗಳ ಸಿದ್ಧತೆ: ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಮುಗಿದ ತಕ್ಷಣ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ನಂತರ ಇಂಗ್ಲೆಂಡ್ ಪ್ರವಾಸವಿರುವುದರಿಂದ ಪ್ರಮುಖ ಆಟಗಾರರ ಫಿಟ್​ನೆಸ್​ ಕಾಯ್ದುಕೊಳ್ಳುವುದು ಅನಿವಾರ್ಯವಾಗಿದೆ.

ಈ ಎಲ್ಲಾ ಕಾರಣಗಳಿಂದಾಗಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ವಿಶ್ರಾಂತಿ ಪಡೆಯಲಿರುವ ಸಂಭಾವ್ಯ ಆಟಗಾರರು:

ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್, ವೇಗಾಸ್ತ್ರ ಜಸ್​​ಪ್ರೀತ್ ಬುಮ್ರಾ, ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ ಮತ್ತು ಕೆ.ಎಲ್. ರಾಹುಲ್ ಅವರಿಗೆ ಈ ಪಂದ್ಯದಿಂದ ವಿಶ್ರಾಂತಿ ನೀಡುವ ಸಾಧ್ಯತೆ ದಟ್ಟವಾಗಿದೆ. ಇವರೊಂದಿಗೆ ಮತ್ತಷ್ಟು ಆಟಗಾರರ ಹೆಸರು ಕೂಡ ಸೇರ್ಪಡೆಯಾಗುವ ಸಾಧ್ಯತೆಯಿದೆ.  ಇನ್ನು ಟೆಸ್ಟ್ ಪಂದ್ಯದ ವೇಳೆ ವಿಶ್ರಾಂತಿ ಪಡೆಯುವ ಆಟಗಾರರು ನಂತರ ನಡೆಯುವ ಏಕದಿನ ಸರಣಿಗೆ ತಂಡಕ್ಕೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ.

ಹೊಸ ನಾಯಕ ಯಾರು?

ಒಂದು ವೇಳೆ ಶುಭ್​ಮನ್ ಗಿಲ್ ವಿಶ್ರಾಂತಿ ಪಡೆದರೆ ಹಿರಿಯ ಆಟಗಾರರಲ್ಲಿ ಯಾರಾದರೂ ತಂಡದ ನಾಯಕರಾಗಿ ಕಾಣಿಸಿಕೊಳ್ಳಬಹುದು. ಅಂದರೆ ಅಫ್ಘಾನ್ ವಿರುದ್ಧದ ಟೆಸ್ಟ್​ನಲ್ಲಿ ಭಾರತ ತಂಡವನ್ನು ಹೊಸ ನಾಯಕ ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ. ಇನ್ನು ಈ ಸರಣಿಗೆ ಯುವ ಆಟಗಾರರಾದ ಅಭಿಮನ್ಯು ಈಶ್ವರನ್ ಮತ್ತು ಸಾಯಿ ಸುದರ್ಶನ್​ ಆಯ್ಕೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ vs ಅಫ್ಘಾನಿಸ್ತಾನ್ ಸರಣಿ ವೇಳಾಪಟ್ಟಿ:

  • ಜೂನ್ 6 – 10: ಏಕೈಕ ಟೆಸ್ಟ್ (ಮುಲ್ಲನ್‌ಪುರ)
  • ಜೂನ್ 14: ಮೊದಲ ಏಕದಿನ ಪಂದ್ಯ (ಧರ್ಮಶಾಲಾ)
  • ಜೂನ್ 17: ಎರಡನೇ ಏಕದಿನ ಪಂದ್ಯ (ಲಕ್ನೋ)
  • ಜೂನ್ 20: ಮೂರನೇ ಏಕದಿನ ಪಂದ್ಯ (ಚೆನ್ನೈ)

ಇದನ್ನೂ ಓದಿ: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಮೂವರು ಐಪಿಎಲ್ ಆಟಗಾರರು ಬ್ಯಾನ್..!

ಈ ಸರಣಿಯ ಬಳಿಕ ಟೀಮ್ ಇಂಡಿಯಾ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧ ಸರಣಿ ಆಡಲಿದೆ. ಅದಕ್ಕೂ ಮುನ್ನ ಭಾರತದ ‘ಬೆಂಚ್ ಸ್ಟ್ರೆಂತ್’ ಪರೀಕ್ಷಿಸಲು ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ. ಹೀಗಾಗಿ ಅಫ್ಘಾನಿಸ್ತಾನ್ ಸರಣಿಯಲ್ಲಿ ಒಂದಷ್ಟು ಹೊಸ ಮುಖಗಳು ಕಾಣಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

Published On - 12:55 pm, Tue, 21 April 26

Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?