AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಭಾರತಕ್ಕೆ ಬಂದಿಳಿದ ವಿಶ್ವ ಚಾಂಪಿಯನ್ನರು

T20 World Cup 2024: ಶನಿವಾರ (ಜೂ.29) ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 7 ರನ್​ಗಳಿಂದ ಜಯ ಸಾಧಿಸಿ ಟಿ20 ವಿಶ್ವಕಪ್ ಅನ್ನು ಗೆದ್ದುಕೊಂಡಿತ್ತು.

Team India: ಭಾರತಕ್ಕೆ ಬಂದಿಳಿದ ವಿಶ್ವ ಚಾಂಪಿಯನ್ನರು
Team India
ಝಾಹಿರ್ ಯೂಸುಫ್
|

Updated on:Jul 04, 2024 | 8:09 AM

Share

ಟಿ20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾ (Team India) ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿದ್ದಾರೆ. ಬಿಸಿಸಿಐ ವ್ಯವಸ್ಥೆ ಮಾಡಿದ ಏರ್​ ಇಂಡಿಯಾ ಚಾರ್ಟರ್ಡ್​ ಫ್ಲೈಟ್​ನಲ್ಲಿ ಭಾರತೀಯ ಆಟಗಾರರು, ಸಿಬ್ಬಂದಿಗಳು ಹಾಗೂ ಕುಟುಂಬಸ್ಥರು ಬಾರ್ಬಡೋಸ್​ನಿಂದ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ವಿಶ್ರಾಂತಿಗಾಗಿ ಹೋಟೆಲ್​ಗೆ ತೆರಳಿದ್ದು, ಬೆಳಗ್ಗೆ 11 ಗಂಟೆಗೆ ವಿಶ್ವಕಪ್ ಟ್ರೋಫಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.

ಅದ್ಧೂರಿ ಸ್ವಾಗತ:

ಭಾರತ ತಂಡವು ಮುಂಜಾನೆ ಆಗಮಿಸಿದರೂ, ಏರ್​ಪೋರ್ಟ್​ನಲ್ಲಿ ಟೀಮ್ ಇಂಡಿಯಾವನ್ನು ಸ್ವಾಗತಿಸಲು ಅಭಿಮಾನಿಗಳು ಜಮಾಯಿಸಿದ್ದರು. ಅಲ್ಲದೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ ಘೋಷಣೆಗಳೊಂದಿಗೆ ಭಾರತ ತಂಡವನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇದೀಗ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಟೀಮ್ ಇಂಡಿಯಾ ಸ್ವಾಗತದ ವಿಡಿಯೋ:

ಟೀಮ್ ಇಂಡಿಯಾ ಆಗಮನ ವಿಳಂಬವೇಕೆ?

ಟಿ20 ವಿಶ್ವಕಪ್ ಫೈನಲ್ ಮುಕ್ತಾಯದ ಬೆನ್ನಲ್ಲೇ ಬಾರ್ಬಡೋಸ್​ನಲ್ಲಿ ಬೆರಿಲ್ ಚಂಡಮಾರುತ ಶುರುವಾಗಿತ್ತು. ಬಿರುಗಾಳಿ ಸಹಿತದ ಭಾರೀ ಮಳೆಯಿಂದಾಗಿ ವಿಮಾನಯಾನಗಳು ಬಂದ್ ಆಗಿದ್ದವು. ಅಲ್ಲದೆ ಬಹುತೇಕ ವಿಮಾನ ನಿಲ್ದಾಣಗಳು ತನ್ನ ಸೇವಾ ಕಾರ್ಯವನ್ನು ಸ್ಥಗಿತಗೊಳಿಸಿತ್ತು. ಇದರಿಂದ ಟೀಮ್ ಇಂಡಿಯಾದ ಹಿಂತಿರುಗುವಿಕೆಯು ವಿಳಂಬವಾಗಿದೆ. ಅದರಂತೆ ಇದೀಗ ಬಿಸಿಸಿಐ ವ್ಯವಸ್ಥೆ ಮಾಡಿದ ವಿಶೇಷ ವಿಮಾನದ ಮೂಲಕ ಭಾರತೀಯ ಆಟಗಾರರು ವಿಶ್ವಕಪ್​ನೊಂದಿಗೆ ತವರಿಗೆ ಹಿಂತಿರುಗಿದ್ದಾರೆ.

ಅದ್ಧೂರಿ ರೋಡ್ ಶೋ:

ಗುರುವಾರ ಸಂಜೆ 5 ಗಂಟೆಗೆ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್‌ನಿಂದ ಮೆರವಣಿಗೆ ಮೂಲಕ ತೆರೆದ ಬಸ್​ನಲ್ಲಿ ಟೀಮ್ ಇಂಡಿಯಾ ವಾಂಖೆಡೆ ಸ್ಟೇಡಿಯಂಗೆ ಆಗಮಿಸಲಿದ್ದಾರೆ. ಅಲ್ಲದೆ ಈ ರೋಡ್​ ಶೋನ ಬಳಿಕ ವಾಂಖೆಡೆ ಕ್ರೀಡಾಂಗಣಕ್ಕೆ ವಿಜಯೋತ್ಸವ ಆಚರಿಸಲಿದ್ದಾರೆ. ಇದೇ ವೇಳೆ ವಿಶ್ವ ಚಾಂಪಿಯನ್ನರಿಗೆ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ನಾಯಕ ಯಾರು?

ನೇರ ಪ್ರಸಾರ:

ಟೀಮ್ ಇಂಡಿಯಾದ ವಿಜಯೋತ್ಸವವನ್ನು ಸಂಜೆ 5 ಗಂಟೆಯಿಂದ ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆ್ಯಪ್ ಹಾಗೂ ಸ್ಪೋರ್ಟ್ಸ್ 18 ಚಾನೆಲ್​ಗಳಲ್ಲೂ ಈ ಅದ್ಧೂರಿ ಕಾರ್ಯಕ್ರಮದ ನೇರ ಪ್ರಸಾರ ಇರಲಿದೆ.

Published On - 7:30 am, Thu, 4 July 24

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು