AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್​ನಲ್ಲಿ ಮುಂದುವರೆದ ಕೊಹ್ಲಿ ಪಡೆಯ ಇಂಜುರಿ ಸಮಸ್ಯೆ; ಸರಣಿಯಿಂದ ಈ ಯುವ ಬೌಲರ್ ಔಟ್!

IND vs ENG: ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಗಾಯಗಳ ಸರಣಿ ಹೆಚ್ಚುತ್ತಿದೆ. ಓಪನರ್ ಶುಬ್ಮನ್ ಗಿಲ್ ನಂತರ, ಈಗ ವೇಗದ ಬೌಲರ್ ಅವೇಶ್ ಖಾನ್ ಕೂಡ ಗಾಯದಿಂದಾಗಿ ಈ ಪ್ರವಾಸದಿಂದ ಹೊರಗುಳಿದಿದ್ದಾರೆ.

IND vs ENG: ಇಂಗ್ಲೆಂಡ್​ನಲ್ಲಿ ಮುಂದುವರೆದ ಕೊಹ್ಲಿ ಪಡೆಯ ಇಂಜುರಿ ಸಮಸ್ಯೆ; ಸರಣಿಯಿಂದ ಈ ಯುವ ಬೌಲರ್ ಔಟ್!
ಅವೇಶ್ ಖಾನ್
TV9 Web
| Edited By: |

Updated on: Jul 23, 2021 | 9:06 AM

Share

ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಗಾಯಗಳ ಸರಣಿ ಹೆಚ್ಚುತ್ತಿದೆ. ಓಪನರ್ ಶುಬ್ಮನ್ ಗಿಲ್ ನಂತರ, ಈಗ ವೇಗದ ಬೌಲರ್ ಅವೇಶ್ ಖಾನ್ ಕೂಡ ಗಾಯದಿಂದಾಗಿ ಈ ಪ್ರವಾಸದಿಂದ ಹೊರಗುಳಿದಿದ್ದಾರೆ. ಡರ್ಹಾಮ್ನಲ್ಲಿ ನಡೆದ ಭಾರತದ ಪ್ರಥಮ ದರ್ಜೆ ಅಭ್ಯಾಸದ ಮೊದಲ ದಿನದಂದು ಕೌಂಟಿ ಇಲೆವೆನ್ ಪರ ಆಡುತ್ತಿದ್ದಾಗ ಯುವ ವೇಗದ ಬೌಲರ್ ಅವೇಶ್ ಖಾನ್ ಎಡಗೈ ಹೆಬ್ಬೆರಳಿಗೆ ಪೆಟ್ಟಾಗಿದೆ. ಹೀಗಾಗಿ ಅವರು ಪಂದ್ಯದಿಂದ ಹೊರಗುಳಿದಿದ್ದರು. ಅಲ್ಲದೆ, ಅವರು ಇಂಗ್ಲೆಂಡ್ ಪ್ರವಾಸದಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಕೂಡ ಗಾಯದಿಂದಾಗಿ ಅಭ್ಯಾಸ ಪಂದ್ಯದಲ್ಲಿ ಆಡಲು ಸಾಧ್ಯವಾಗಲಿಲ್ಲ.

ಬಿಸಿಸಿಐ ಬುಧವಾರ ಅವೇಶ್ ಅವರ ಗಾಯದ ಬಗ್ಗೆ ವಿಸ್ತಾರವಾಗಿ ಹೇಳಲಿಲ್ಲ ಆದರೆ “ವೇಗದ ಬೌಲರ್ ಅವೇಶ್ ಖಾನ್ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿರುತ್ತಾರೆ ಎಂದು ಹೇಳಿದರು. ಜೊತೆಗೆ ಅಭ್ಯಾಸ ಪಂದ್ಯದ ಎರಡನೇ ಮತ್ತು ಮೂರನೇ ದಿನದ ಆಟದಲ್ಲಿ ಭಾಗವಹಿಸಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದಿದ್ದರು.

ವೈದ್ಯಕೀಯ ಚಿಕಿತ್ಸೆ ನೀಡಲಾಯಿತು ಮಂಗಳವಾರ ಮೊದಲ ದಿನದ ಊಟದ ನಂತರದ ಅಧಿವೇಶನದಲ್ಲಿ ಅವೇಶ್ ತಮ್ಮ 10 ನೇ ಓವರ್‌ನ ಐದನೇ ಎಸೆತದಲ್ಲಿ ಗಾಯಗೊಂಡಿದ್ದರು. ಅವರು ಹನುಮಾ ವಿಹಾರಿ ಅವರ ಹೊಡೆತವನ್ನು ತಡೆಯುವ ಯತ್ನದಲ್ಲಿ ಗಾಯಗೊಂಡಿದ್ದರು. ನಂತರ ಅವರು ತುಂಬಾ ನೋವಿನಿಂದ ಬಳಲುತ್ತಿದ್ದ ಕಾರಣ ತಕ್ಷಣ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಡರ್ಹಾಮ್ ಅವರ ಯೂಟ್ಯೂಬ್ ಚಾನೆಲ್ನಲ್ಲಿ ಕಾಮೆಂಟೆಟರ್​ ಸಹ ಗಾಯವು ಗಂಭೀರವಾಗಿರಬಹುದು ಎಂದು ಹೇಳಿದ್ದರು. 24 ವರ್ಷದ ಅವೇಶ್ ಇದುವರೆಗೆ 26 ಪ್ರಥಮ ದರ್ಜೆ ಪಂದ್ಯಗಳಲ್ಲಿ 100 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು ಚೊಚ್ಚಲ ಪಂದ್ಯವನ್ನು ಆಡಬಹುದೆಂದು ಎಲ್ಲರೂ ನಿರೀಕ್ಷಿಸಿದ್ದರು.

ಇದನ್ನೂ ಓದಿ: Howzzat! ಕ್ರಿಕೆಟ್​ ಕುರಿತಾದ ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಬೇಕೇ? ಹಾಗಿದ್ರೆ ಟಿವಿ9 ನೀಡುತ್ತಿದೆ ಸುವರ್ಣಾವಕಾಶ

ಮ್ಯಾಂಚೆಸ್ಟರ್​ನಲ್ಲಿ ಇನ್ನೊಂದು ಘಟನೆ: ಕ್ರಿಕೆಟ್​ ಸ್ಟೇಡಿಯಂನಲ್ಲಿ ಪ್ರೇಯಸಿಗೆ ಪ್ರಪೋಸ್ ಮಾಡುವುದು ಹೊಸ ಸಂಪ್ರದಾಯವೇ?

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ