AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Tour of Ireland: ಟೀಮ್ ಇಂಡಿಯಾ ವಿರುದ್ದದ ಸರಣಿಗೆ ಐರ್ಲೆಂಡ್ ತಂಡ ಪ್ರಕಟ

India Tour of Ireland: ವಿಶೇಷ ಎಂದರೆ ಭಾರತ ತಂಡ 4 ವರ್ಷಗಳ ಬಳಿಕ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮೊದಲು, 2018 ರಲ್ಲಿ, ಭಾರತ ತಂಡವು ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರವಾಸ ಕೈಗೊಂಡಿತು.

India Tour of Ireland: ಟೀಮ್ ಇಂಡಿಯಾ ವಿರುದ್ದದ ಸರಣಿಗೆ ಐರ್ಲೆಂಡ್ ತಂಡ ಪ್ರಕಟ
India Tour of Ireland
TV9 Web
| Edited By: |

Updated on: Jun 15, 2022 | 6:54 PM

Share

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಬಳಿಕ ಟೀಮ್ ಇಂಡಿಯಾ ಐರ್ಲೆಂಡ್ (India Tour of Ireland) ವಿರುದ್ಧ ಸೀಮಿತ ಓವರ್‌ಗಳ ಸರಣಿ ಆಡಲಿದೆ. ಜೂನ್ ಕೊನೆಯ ವಾರದಲ್ಲಿ ಭಾರತ ತಂಡ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ಸರಣಿಗಾಗಿ ಇದೀಗ ಐರ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಆಂಡ್ರ್ಯೂ ಬಾಲ್ಬಿರ್ನಿ ಮುನ್ನಡೆಸಲಿದ್ದಾರೆ. ಇನ್ನು 14 ಸದಸ್ಯರ ಬಳಗದಲ್ಲಿ ಬಹುತೇಕ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಆಡಿದ್ದ ಜೋಶ್ ಲಿಟಲ್, ಕ್ರೇಗ್ ಯಂಗ್ ಕೂಡ ತಂಡದಲ್ಲಿದ್ದಾರೆ. ಹಾಗೆಯೇ ಸ್ಪೋಟಕ ಬ್ಯಾಟ್ಸ್​ಮನ್ ಪಾಲ್ ಸ್ಟಿರ್ಲಿಂಗ್ ಸಹ ಟೀಮ್ ಇಂಡಿಯಾ ವಿರುದ್ದ ಕಣಕ್ಕಿಳಿಯಲಿದ್ದಾರೆ.

ಈ ಸರಣಿಯಲ್ಲಿ ಎರಡು ಪಂದ್ಯಗಳು ನಡೆಯಲಿದ್ದು, ಜೂನ್ 26 ರಂದು ಮೊದಲ ಪಂದ್ಯ ಜರುಗಲಿದೆ. ಹಾಗೆಯೇ 2ನೇ ಪಂದ್ಯ 28 ರಂದು ಮಲಾಹೈಡ್‌ನಲ್ಲಿ ನಡೆಯಲಿವೆ. ವಿಶೇಷ ಎಂದರೆ ಮೊದಲ ಪಂದ್ಯದ ಟಿಕೆಟ್​ಗಳು ಈಗಾಗಲೇ ಸಂಪೂರ್ಣ ಮಾರಾಟವಾಗಿದೆ. ಇನ್ನು ಈ ಸರಣಿಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಘೋಷಿಸಿಲ್ಲ. ಇದಾಗ್ಯೂ ಸಿಬ್ಬಂದಿಗಳನ್ನು ಬಿಸಿಸಿಐ ಆಯ್ಕೆ ಮಾಡಿಕೊಂಡಿದೆ. ಅದರಂತೆ ತಂಡದ ಕೋಚ್ ಆಗಿ ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಐರ್ಲೆಂಡ್ ವಿರುದ್ದ ಸರಣಿಗೆ ಟೀಮ್ ಇಂಡಿಯಾ ಮೀಸಲು ತಂಡವನ್ನು ಕಳುಹಿಸಲು ನಿರ್ಧರಿಸಿದೆ.

ಏಕೆಂದರೆ ಜುಲೈ 1 ರಿಂದ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸರಣಿ ಆಡಲಿದೆ. ಹೀಗಾಗಿ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಪ್ರಮುಖ ಆಟಗಾರರು ಇಂಗ್ಲೆಂಡ್ ವಿರುದ್ದದ ಸರಣಿಗೆ ತೆರಳಲಿದೆ. ಹಾಗೆಯೇ ಐರ್ಲೆಂಡ್ ವಿರುದ್ದದ ಸರಣಿಗೆ ಮತ್ತೊಂದು ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಈ ತಂಡದ ಕೋಚ್ ಆಗಿ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಳ್ಳಲಿದ್ದು, ಜೊತೆಗೆ ಎನ್‌ಸಿಎ ತರಬೇತುದಾರರಾದ ಸಿತಾಂಶು ಕೊಟಕ್, ಸಾಯಿರಾಜ್ ಬಹುತುಲೆ ಮತ್ತು ಮುನಿಶ್ ಬಾಲಿ ಟೀಮ್ ಇಂಡಿಯಾ ಜೊತೆ ಐರ್ಲೆಂಡ್‌ ಪ್ರವಾಸ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ವಿಶೇಷ ಎಂದರೆ ಭಾರತ ತಂಡ 4 ವರ್ಷಗಳ ಬಳಿಕ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮೊದಲು, 2018 ರಲ್ಲಿ, ಭಾರತ ತಂಡವು ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರವಾಸ ಕೈಗೊಂಡಿತು. ಇದೀಗ ಮತ್ತೊಮ್ಮೆ ಐರ್ಲೆಂಡ್ ಪ್ರವಾಸ ಕೈಗೊಳ್ಳುತ್ತಿದೆ. ಹೀಗಾಗಿ ಟೀಮ್ ಇಂಡಿಯಾ ವಿರುದ್ದದ ಸರಣಿಯನ್ನು ಐರ್ಲೆಂಡ್ ಕ್ರಿಕೆಟ್​ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಟೀಮ್ ಇಂಡಿಯಾ ವಿರುದ್ದದ T20 ಸರಣಿಗೆ ಐರ್ಲೆಂಡ್ ತಂಡ ಹೀಗಿದೆ: ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಮಾರ್ಕ್ ಅಡೇರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಜೋಶ್ ಲಿಟಲ್, ಆಂಡ್ರ್ಯೂ ಮೆಕ್‌ಬ್ರೈನ್, ಬ್ಯಾರಿ ಮೆಕಾರ್ಥಿ, ಕಾನರ್ ಓಲ್ಫರ್ಟ್, ಪಾಲ್ ಸ್ಟಿರ್ಲಿಂಗ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಕ್ರೇಗ್ ಯಂಗ್.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು