AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Tour of Ireland: ಟೀಮ್ ಇಂಡಿಯಾ ವಿರುದ್ದದ ಸರಣಿಗೆ ಐರ್ಲೆಂಡ್ ತಂಡ ಪ್ರಕಟ

India Tour of Ireland: ವಿಶೇಷ ಎಂದರೆ ಭಾರತ ತಂಡ 4 ವರ್ಷಗಳ ಬಳಿಕ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮೊದಲು, 2018 ರಲ್ಲಿ, ಭಾರತ ತಂಡವು ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರವಾಸ ಕೈಗೊಂಡಿತು.

India Tour of Ireland: ಟೀಮ್ ಇಂಡಿಯಾ ವಿರುದ್ದದ ಸರಣಿಗೆ ಐರ್ಲೆಂಡ್ ತಂಡ ಪ್ರಕಟ
India Tour of Ireland
TV9 Web
| Edited By: |

Updated on: Jun 15, 2022 | 6:54 PM

Share

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಬಳಿಕ ಟೀಮ್ ಇಂಡಿಯಾ ಐರ್ಲೆಂಡ್ (India Tour of Ireland) ವಿರುದ್ಧ ಸೀಮಿತ ಓವರ್‌ಗಳ ಸರಣಿ ಆಡಲಿದೆ. ಜೂನ್ ಕೊನೆಯ ವಾರದಲ್ಲಿ ಭಾರತ ತಂಡ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ಸರಣಿಗಾಗಿ ಇದೀಗ ಐರ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಆಂಡ್ರ್ಯೂ ಬಾಲ್ಬಿರ್ನಿ ಮುನ್ನಡೆಸಲಿದ್ದಾರೆ. ಇನ್ನು 14 ಸದಸ್ಯರ ಬಳಗದಲ್ಲಿ ಬಹುತೇಕ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಆಡಿದ್ದ ಜೋಶ್ ಲಿಟಲ್, ಕ್ರೇಗ್ ಯಂಗ್ ಕೂಡ ತಂಡದಲ್ಲಿದ್ದಾರೆ. ಹಾಗೆಯೇ ಸ್ಪೋಟಕ ಬ್ಯಾಟ್ಸ್​ಮನ್ ಪಾಲ್ ಸ್ಟಿರ್ಲಿಂಗ್ ಸಹ ಟೀಮ್ ಇಂಡಿಯಾ ವಿರುದ್ದ ಕಣಕ್ಕಿಳಿಯಲಿದ್ದಾರೆ.

ಈ ಸರಣಿಯಲ್ಲಿ ಎರಡು ಪಂದ್ಯಗಳು ನಡೆಯಲಿದ್ದು, ಜೂನ್ 26 ರಂದು ಮೊದಲ ಪಂದ್ಯ ಜರುಗಲಿದೆ. ಹಾಗೆಯೇ 2ನೇ ಪಂದ್ಯ 28 ರಂದು ಮಲಾಹೈಡ್‌ನಲ್ಲಿ ನಡೆಯಲಿವೆ. ವಿಶೇಷ ಎಂದರೆ ಮೊದಲ ಪಂದ್ಯದ ಟಿಕೆಟ್​ಗಳು ಈಗಾಗಲೇ ಸಂಪೂರ್ಣ ಮಾರಾಟವಾಗಿದೆ. ಇನ್ನು ಈ ಸರಣಿಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಘೋಷಿಸಿಲ್ಲ. ಇದಾಗ್ಯೂ ಸಿಬ್ಬಂದಿಗಳನ್ನು ಬಿಸಿಸಿಐ ಆಯ್ಕೆ ಮಾಡಿಕೊಂಡಿದೆ. ಅದರಂತೆ ತಂಡದ ಕೋಚ್ ಆಗಿ ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಐರ್ಲೆಂಡ್ ವಿರುದ್ದ ಸರಣಿಗೆ ಟೀಮ್ ಇಂಡಿಯಾ ಮೀಸಲು ತಂಡವನ್ನು ಕಳುಹಿಸಲು ನಿರ್ಧರಿಸಿದೆ.

ಏಕೆಂದರೆ ಜುಲೈ 1 ರಿಂದ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸರಣಿ ಆಡಲಿದೆ. ಹೀಗಾಗಿ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಪ್ರಮುಖ ಆಟಗಾರರು ಇಂಗ್ಲೆಂಡ್ ವಿರುದ್ದದ ಸರಣಿಗೆ ತೆರಳಲಿದೆ. ಹಾಗೆಯೇ ಐರ್ಲೆಂಡ್ ವಿರುದ್ದದ ಸರಣಿಗೆ ಮತ್ತೊಂದು ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಈ ತಂಡದ ಕೋಚ್ ಆಗಿ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಳ್ಳಲಿದ್ದು, ಜೊತೆಗೆ ಎನ್‌ಸಿಎ ತರಬೇತುದಾರರಾದ ಸಿತಾಂಶು ಕೊಟಕ್, ಸಾಯಿರಾಜ್ ಬಹುತುಲೆ ಮತ್ತು ಮುನಿಶ್ ಬಾಲಿ ಟೀಮ್ ಇಂಡಿಯಾ ಜೊತೆ ಐರ್ಲೆಂಡ್‌ ಪ್ರವಾಸ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ವಿಶೇಷ ಎಂದರೆ ಭಾರತ ತಂಡ 4 ವರ್ಷಗಳ ಬಳಿಕ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮೊದಲು, 2018 ರಲ್ಲಿ, ಭಾರತ ತಂಡವು ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರವಾಸ ಕೈಗೊಂಡಿತು. ಇದೀಗ ಮತ್ತೊಮ್ಮೆ ಐರ್ಲೆಂಡ್ ಪ್ರವಾಸ ಕೈಗೊಳ್ಳುತ್ತಿದೆ. ಹೀಗಾಗಿ ಟೀಮ್ ಇಂಡಿಯಾ ವಿರುದ್ದದ ಸರಣಿಯನ್ನು ಐರ್ಲೆಂಡ್ ಕ್ರಿಕೆಟ್​ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಟೀಮ್ ಇಂಡಿಯಾ ವಿರುದ್ದದ T20 ಸರಣಿಗೆ ಐರ್ಲೆಂಡ್ ತಂಡ ಹೀಗಿದೆ: ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಮಾರ್ಕ್ ಅಡೇರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಜೋಶ್ ಲಿಟಲ್, ಆಂಡ್ರ್ಯೂ ಮೆಕ್‌ಬ್ರೈನ್, ಬ್ಯಾರಿ ಮೆಕಾರ್ಥಿ, ಕಾನರ್ ಓಲ್ಫರ್ಟ್, ಪಾಲ್ ಸ್ಟಿರ್ಲಿಂಗ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಕ್ರೇಗ್ ಯಂಗ್.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ